ಕೃಷಿ ಸಿರಿ ಔಚಿತ್ಯಪೂರ್ಣ: ಸಚಿವ ಶಿವಶಂಕರ ರೆಡ್ಡಿ
Team Udayavani, Nov 16, 2018, 9:58 AM IST
ಮೂಡಬಿದಿರೆ: ಆಳ್ವಾಸ್ ನುಡಿಸಿರಿ ಸಮ್ಮೇಳನದೊಂದಿಗೆ ಸಂಯೋಜಿಸಲಾಗಿರುವ 5ನೇ ವರ್ಷದ “ಆಳ್ವಾಸ್ ಕೃಷಿ ಸಿರಿ’ಯನ್ನು ರಾಜ್ಯ ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಗುರುವಾರ ಸಂಜೆ ಪಂಚ ದೀವಟಿಗೆ ಬೆಳಗಿ ಉದ್ಘಾಟಿಸಿದರು.
ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಸ್ಕೃತಿಯ ವಿಚಾರಗಳನ್ನೂ ಜೋಡಿಸಿ ಕೊಡುವ ಕಾರ್ಯದಲ್ಲಿ ಸಾರ್ಥಕತೆ ಕಾಣುತ್ತಿರುವ ಮೂಡಬಿದಿರೆಯ ಆಳ್ವಾಸ್ ನುಡಿಸಿರಿ ಸಮ್ಮೇಳನ ದೊಂದಿಗೆ ಕೃಷಿ ಸಿರಿಯನ್ನೂ ಜೋಡಿಸಿ ಕೊಂಡು ಮಕ್ಕಳಿಗೆ ಕೃಷಿಯ ಬಗ್ಗೆ ಗೌರವ, ಅಭಿಮಾನ, ಆಸಕ್ತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಚಿವರನ್ನು ಆಳ್ವಾಸ್ ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಡಾ| ಎಂ. ಮೋಹನ ಆಳ್ವ, ಮಾಜಿ ಸಚಿವ ಕೆ. ಅಭಯಚಂದ್ರ, ಉದ್ಯಮಿ-ಕೃಷಿಕ ಕೆ. ಶ್ರೀಪತಿ ಭಟ್, ಸಂಪತ್ ಸಾಮ್ರಾಜ್ಯ, ರಾಜವರ್ಮ ಬೈಲಂಗಡಿ, ಸುಭಾಶ್ಚಂದ್ರ ಚೌಟ, ಧನಕೀರ್ತಿ ಬಲಿಪ, ಮಂಗಳೂರು ಮೀನು ಗಾರಿಕೆ ಇಲಾಖೆಯ ಡೀನ್ ಪ್ರೊ| ಎಚ್. ಶಿವಾನಂದ ಮೂರ್ತಿ ಉಪಸ್ಥಿತರಿದ್ದರು. ಉಪನ್ಯಾಸಕ ವೇಣು ಗೋಪಾಲ ಶೆಟ್ಟಿ ನಿರೂಪಿಸಿದರು. ಕೃಷಿ ಸಂಬಂಧಿ ವಿವಿಧ ಪ್ರದರ್ಶನ -ಮಾರಾಟ ಮಳಿಗೆಗಳು ನ.18ರ ವರೆಗೆ ತೆರೆದಿರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ