ಆಳ್ವಾಸ್ ಶಿಲ್ಪ ವಿರಾಸತ್ಗೆ ಚಾಲನೆ
Team Udayavani, Dec 23, 2018, 9:31 AM IST
ಮೂಡುಬಿದಿರೆ: ಆಳ್ವಾಸ್ ವಿರಾಸತ್-2018ರ ಅಂಗವಾಗಿ 16 ದಿನಗಳ “ಆಳ್ವಾಸ್ ಶಿಲ್ಪ ವಿರಾಸತ್’ ರಾಷ್ಟ್ರೀಯ ಶಿಲ್ಪ ಕಲಾವಿದರ ಶಿಬಿರವನ್ನು ಹಿರಿಯ ಶಿಲ್ಪಿ ಬೆಂಗಳೂರಿನ ಸೂರಾಲು ವೆಂಕಟರಮಣ ಭಟ್ ಉದ್ಘಾಟಿಸಿದರು.
ಶಿಲ್ಪಕಲೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ. ದೇವರು, ದೇವಸ್ಥಾನಗಳಲ್ಲದೆ ಇನ್ನೂ ವಿಭಿನ್ನ ಶೈಲಿಯ ಶಿಲ್ಪಕಲೆಗಳಿವೆ. ಅವುಗಳನ್ನು ಜನರಿಗೆ ಪರಿಚಯಿಸಬೇಕಾಗಿದೆ ಎಂದು ಅವರು ಹೇಳಿದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. “ಕಲೆಗಾರನಿಗೆ ಅವಕಾಶಗಳು ಬಹಳಷ್ಟಿವೆ. ಸ್ವಂತಿಕೆ ಮತ್ತು ಕ್ರಿಯಾಶೀಲತೆ ಬಳಸಿ ವಿಭಿನ್ನ ಶೈಲಿಯಲ್ಲಿ ಹೊಸತನ ರೂಪಿಸಿದರೆ ಖಂಡಿತ ಈ ಕಲೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಅವರು ಹೇಳಿದರು.
ಈ ವರೆಗಿನ ಶಿಲ್ಪ ವಿರಾಸತ್ ಹಾಗೂ ವರ್ಣ ವಿರಾಸತ್ನಲ್ಲಿ ತಯಾರಾದ ಕಲಾಕೃತಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂರಕ್ಷಿಸಿಡ ಲಾಗಿದೆ ಎಂದರು. ಶಿಲ್ಪ ವಿರಾಸತ್ ಸಲಹಾ ಸಮಿತಿ ಸದಸ್ಯರಾದ ಕೋಟಿಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತ ರಿದ್ದರು. ದೀಕ್ಷಾ ಗೌಡ ನಿರೂಪಿಸಿದರು.
31 ಶಿಲ್ಪಿಗಳು
ಜ. 6ರವರೆಗೆ ನಡೆಯಲಿರುವ ಶಿಲ್ಪ ವಿರಾಸತ್ನಲ್ಲಿ ಕರ್ನಾಟಕ ಮಾತ್ರವಲ್ಲದೆ, ದೂರದ ಛತ್ತೀಸ್ಗಢ, ಕೇರಳದಿಂದಲೂ ಆಗಮಿಸಿರುವ 31 ಶಿಲ್ಪಿಗಳು ಮರ, ಲೋಹ, ಕಂಚು, ಶಿಲೆ, ಟೆರ್ರಾಕೋಟಗಳಲ್ಲಿ ಸಾಂಪ್ರದಾಯಿಕ, ಜಾನಪದ ಹಾಗೂ ಸಮಕಾಲೀನ ಶೈಲಿಯ ಕಲಾಕೃತಿಗಳನ್ನು ರಚಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು