ಸುಳ್ವಾಡಿ ದುರಂತ: ಆಳ್ವಾಸ್ನಲ್ಲಿ ದತ್ತು ಶಿಕ್ಷಣಕ್ಕೆ ಒಪ್ಪಿದ ಮಕ್ಕಳು
Team Udayavani, Dec 19, 2018, 9:52 AM IST
ಮೂಡುಬಿದಿರೆ: ವಿಷ ಬೆರೆತ ಪ್ರಸಾದ ಸೇವನೆಯಿಂದ ಮೃತಪಟ್ಟ ಮೈಸೂರು ಸುಳ್ವಾಡಿಯ ಕೃಷ್ಣ ನಾಯ್ಕ-ಮೈಲಿಬಾಯಿ ದಂಪತಿಯ ಮೂವರು ಮಕ್ಕಳಿಗೆ ವಸತಿ, ಊಟೋಪಹಾರ ಸಹಿತ ಸಂಪೂರ್ಣ ಉಚಿತ ದತ್ತು ಶಿಕ್ಷಣ ನೀಡಲು ಮುಂದಾದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಾನವೀಯ ಕೊಡುಗೆಯನ್ನು ಮಕ್ಕಳು ಒಪ್ಪಿದ್ದಾರೆ.
ಸುಳ್ವಾಡಿಯ ಕೃಷ್ಣ ನಾಯ್ಕ ಮನೆಗೆ ಮಂಗಳವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪರವಾಗಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಯತಿಕುಮಾರ ಸ್ವಾಮಿ ಗೌಡ, ಕಾಮರ್ಸ್ ಡೀನ್ ಪ್ರಶಾಂತ್ ಹಾಗೂ ಉಪನ್ಯಾಸಕ ಅಂಬರೀಷ್ ಅವರ ನಿಯೋಗ ಭೇಟಿ ಮಾಡಿ ಮೂವರು ಮಕ್ಕಳು ಅವರ ಸಂಬಂಧಿಕರಿಗೆ ಸಾಂತ್ವನ ಹೇಳುವುದರ ಜತೆಗೆ ಒಂದು ಲಕ್ಷ ರೂ. ಆರ್ಥಿಕ ನೆರವು ಹಸ್ತಾಂತರಿಸಿದೆ.
ಹಿರಿಯ ಪುತ್ರಿ ರಾಣಿಬಾಯಿ ಅವರ ಬಿಎಸ್ಸಿ, ಎರಡನೇ ಮಗಳು ಪ್ರಿಯಾಬಾಯಿ ಅವರ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಹಾಗೂ ಪುತ್ರ ರಾಜೇಶ್ ನಾಯ್ಕನ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಮುಂದುವರಿಸಲಿದ್ದಾರೆ. ಹೆತ್ತವರ ಉತ್ತರಕ್ರಿಯೆ ಬಳಿಕ ಮೂವರೂ ಆಳ್ವಾಸ್ ಶಿಕ್ಷಣಾಲಯವನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ