Moodabidri ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್‌ ವಿರಾಸತ್‌ ವೈಭವ

ಸಂಸ್ಕೃತಿ ವೈವಿಧ್ಯದ ಸವಿಯೂಟ ಬಡಿಸಲು ಮೂಡುಬಿದಿರೆಯ ವಿದ್ಯಾಗಿರಿ ಸಜ್ಜು

Team Udayavani, Dec 14, 2023, 6:30 AM IST

moMoodabidri ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್‌ ವಿರಾಸತ್‌ ವೈಭವ

ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.

29ನೇ ವಿರಾಸತ್‌ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿವೆ.

ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್‌ ವೇದಿಕೆ ಸಜ್ಜಾಗಿದ್ದರೆ, ಸಪ್ತ ಮೇಳಗಳು ದಿನವಿಡೀ ನಡೆದು ಯಾವುದೇ ಆಸಕ್ತಿ ಇರುವವರಿಗೂ ಮನಮುದಗೊಳಿಸಲಿವೆ. ದೀಪಾಲಂಕಾರ, ಕಲಾಕೃತಿಗಳು, ಪುಷ್ಪ-ಫಲಗಳು ಕಣ್ಮನ ಸೆಳೆಯುತ್ತಿವೆ.

ವಿರಾಸತ್‌ ನಡೆಯುವ ವಿದ್ಯಾಗಿರಿ ಆವರಣದ ತುಂಬಾ ಸುಮಾರು ಸಾವಿರಕ್ಕೂ ಅಧಿಕ ಕಲಾಕೃತಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತಿವೆ. ವೀರಪುರುಷರು, ಪ್ರಾಣಿ-ಪಕ್ಷಿಗಳು, ಸಾಂಸ್ಕೃತಿಕ ನಾಯಕರು, ದೈವ-ದೇವರು, ಸ್ವಾತಂತ್ರ್ಯ ಹೋರಾಟಗಾರರು, ಪುಟಾಣಿಗಳ ನೆಚ್ಚಿನ ಕಾರ್ಟೂನ್ ಪಾತ್ರಗಳು, ತಾಯಿಯ ಮಮತೆ, ಬುದ್ಧನ ಧ್ಯಾನ, ನಗಿಸುವ ಮೋಟು, ಪ್ರಾದೇಶಿಕ ಕಲಾಪ್ರಕಾರಗಳ ಕಲಾಕೃತಿಗಳು ಮನ ಸೆಳೆಯುತ್ತವೆ. ಪ್ರಾಂಗಣದುದ್ದಕ್ಕೂ ಹೆಜ್ಜೆ ಹಾಕಿದಂತೆ ಆನೆ, ಜಿರಾಫೆ, ಎತ್ತು, ಮಹಿಷಾಸುರ, ಯಕ್ಷಗಾನ, ಎತ್ತಿನ ಬಂಡಿ, ಚಕ್ರ, ಗಣಪತಿ, ಸಂಗೊಳ್ಳಿ ರಾಯಣ್ಣ, ಡೊಳ್ಳು ಕುಣಿತ, ಅಂಬೇಡ್ಕರ್‌, ವೀರಗಾಸೆ ಕಥಕ್ಕಳಿ ಪ್ರತಿಮೆಗಳನ್ನು ಕಾಣಬಹುದು.

ಕಾರ್ಟೂನ್ ಪಾತ್ರಧಾರಿಗಳಾದ ಚೋಟಾ ಭೀಮ್‌, ರಾಜು, ಕಾಲಿಯಾ, ಡೊನಾಲ್ಡ್‌ ಡಕ್‌, ಮಿಕಿ, ಜಗ್ಗು , ಇಂದುಮತಿ, ಡೋಲು ಬೋಲು ಪುಟಾಣಿಗಳಿಗೆ ಪುಳಕ ನೀಡಲಿದ್ದಾರೆ.

ಈ ಬಾರಿ ಉದ್ಘಾಟನೆಗೆ ಮುನ್ನ ನಡೆಯುವ ಸಾಂಸ್ಕೃತಿಕ ಮೆರವಣಿಗೆ ವೇಳೆ ಅಂತಿಮ ಘಟ್ಟದಲ್ಲಿ ಬಲದಿಂದ ಎಡಕ್ಕೆ ಸಾಂಸ್ಕೃತಿಕ ರಥವನ್ನು ಎಳೆಯಲಾಗುತ್ತದೆ. ಈ ರಥದಲ್ಲಿ ಲೋಕ ಮಾರ್ಗದರ್ಶಕರಾದ ರಾಮ-ಕೃಷ್ಣರ ಮೂರ್ತಿ ಇರಲಿವೆ. ಶಕ್ತಿ ಮತ್ತು ಭಕ್ತಿಯ ಪ್ರತೀಕವಾಗಿ ಹನುಮಂತ, ಸಂಪತ್ತಿನ ದ್ಯೋತಕವಾದ ಮಹಾಲಕ್ಷ್ಮೀ ಹಾಗೂ ವಿದ್ಯಾದೇವತೆ ಸರಸ್ವತಿ ಇರಲಿದ್ದಾರೆ. ಹರಿದ್ವಾರದಿಂದ ಬರುವ ಪ್ರಮುಖರು ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಲಿದ್ದಾರೆ.

ಫಲಪುಷ್ಪ
ವಿರಾಸತ್‌ ಆವರಣ ಮದುವಣ ಗಿತ್ತಿಯಂತೆ ಹೂಗಳಿಂದ ಸಿಂಗರಿಸಿ ಕೊಂಡಿದೆ. ಸುಮಾರು ಮೂರೂವರೆ ಲಕ್ಷಕ್ಕೂ ಅಧಿಕ ಹೂಗಿಡಗಳಿಂದ ಆವರಣವನ್ನು ಅಲಂಕರಿಸಲಾಗಿದೆ.

ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿಸಿರಿ) ಆವರಣದಲ್ಲಿ ನಡೆಯುವ 7 ಮೇಳಗಳ 750ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ “ಪ್ರದರ್ಶನ ಮತ್ತು ಮಾರಾಟ ಮೇಳವು ವಿಶೇಷ ಆಕರ್ಷಣೆಯಾಗಿದೆ.

ಸಪ್ತಮೇಳಗಳು
ಬೀಜದಿಂದ ಮಾರುಕಟ್ಟೆ ವರೆಗಿನ ಎಲ್ಲ ಹಂತಗಳ ಸಮಗ್ರ ಚಿತ್ರಣ, ಪ್ರದರ್ಶನ, ಮಾರಾಟ, ಪ್ರಾತ್ಯಕ್ಷಿಕೆಯ ಅನುಭವನ್ನು ಕೃಷಿ ಮೇಳ ನೀಡಲಿದೆ. ಆಹಾರ ಮೇಳದಲ್ಲಿ ಸುಮಾರು 150ಕ್ಕೂ ಅಧಿಕ ಮಳಿಗೆಗಳಲ್ಲಿ ಪಾರಂಪರಿಕದಿಂದ ಫಾಸ್ಟ್‌ ಫುಡ್ ತನಕದ ಸಸ್ಯಾಹಾರ ಹಾಗೂ ಮಾಂಸಾಹಾರ ವೈವಿಧ್ಯ ಇವೆ. ದೇಶದ ಈಶಾನ್ಯ, ಉತ್ತರ, ಪೂರ್ವ ಸೇರಿದಂತೆ ಅಷ್ಟದಿಕ್ಕುಗಳಲ್ಲಿನ ರಾಜ್ಯಗಳ ಸುಮಾರು 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಗುಡಿಕೈಗಾರಿಕೆ, ಕರಕುಶಲ, ಪ್ರಾಚ್ಯವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಇರಲಿವೆ.

ಸುಮಾರು 200ಕ್ಕೂ ಹೆಚ್ಚು ದೇಶ ವಿದೇಶದ ಕಲಾಕಾರರ 500ಕ್ಕೂ ಅಧಿಕ ಚಿತ್ರಕಲಾಕೃತಿಗಳು ಪ್ರದರ್ಶನಕ್ಕಿವೆ. ವನ್ಯಜೀವಿ ಛಾಯಾಚಿತ್ರದ ಸ್ಪರ್ಧೆ ಈಗಾಗಲೇ ನಡೆದಿದ್ದು, ಪ್ರದರ್ಶನಕ್ಕೆ ಬಂದ ಫೋಟೋಗಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಛಾಯಚಿತ್ರಗಳ ಪ್ರದರ್ಶನವಿದೆ. 2 ಎಕರೆ ಪ್ರದೇಶದಲ್ಲಿ ಸ್ಕೌಟ್‌-ಗೈಡ್‌ ಕೇಂದ್ರವು ರೂಪುಗೊಂಡಿದೆ.

ಇಂದು ಸಂಜೆ ಉದ್ಘಾಟನೆ
ಡಿ. 14ರಂದು ಸಂಜೆ 5.30ಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲರು ವಿರಾಸತ್‌ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯುವ ಪ್ರದರ್ಶನ ಮತ್ತು ಮಾರಾಟ ಮಹಾಮೇಳಗಳ ಉದ್ಘಾಟನೆ ನಡೆಯಲಿದೆ. ಕೃಷಿಸಿರಿ ವೇದಿಕೆ ಆವರಣದಲ್ಲಿ ಕೃಷಿ ಮೇಳ, ಆಹಾರ ಮೇಳ, ಫಲ ಪುಷ್ಪ ಮೇಳ ಮತ್ತು ಸ್ಕೌಟ್ಸ್‌ ಗೈಡ್ಸ್‌ ಸಾಹಸಮಯ ಚಟುವಟಿಕೆಗಳ ಕೇಂದ್ರದ ಉದ್ಘಾಟನೆಯನ್ನು ಭಾರತ್‌ ಸ್ಕೌಟ್ಸ್‌ ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯಾ ನೆರವೇರಿಸಿದರೆ, ಚಿತ್ರಕಲಾ ಮೇಳ, ಕಲಾಕೃತಿ, ಛಾಯಾಚಿತ್ರ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನಗಳ ಉದ್ಘಾಟನೆಯನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್‌. ಶಂಕರ್‌ ನೆರವೇರಿಸಲಿದ್ದಾರೆ. ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ.

 

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.