ಅಮರ ಸುಳ್ಯ ಹೋರಾಟ ಸ್ಫೂರ್ತಿದಾಯಕ

ಬೆಳ್ಳಾರೆ: ಅಮೃತ ಭಾರತಿಗೆ ಕನ್ನಡದ ಆರತಿ ಸಮಾರಂಭದಲ್ಲಿ ಸುರೇಶ್‌ ಕುಮಾರ್‌

Team Udayavani, May 29, 2022, 10:40 AM IST

amara-sullia

ಸುಳ್ಯ: ಸ್ವಾತಂತ್ರ್ಯ ಹೋರಾಟಕ್ಕೂ ಮುನ್ನ ಈ ಭಾಗದ ರೈತರು ಒಟ್ಟಾಗಿ ಬ್ರಿಟಿಷರಿಗೆ ಹೆದರದೆ ಅವರ ವಿರುದ್ಧ ಹೋರಾಟ ನಡೆಸಿ, ಸ್ವಾತಂತ್ರ್ಯದ ಕ್ರಾಂತಿ ಆರಂಭವಾಗುವಂತೆ ಮಾಡಿದ್ದರು. ಆದುದರಿಂದ ಅಮರ ಸುಳ್ಯ ಹೋರಾಟ ನಮಗೆಲ್ಲರಿಗೂ ಸ್ಫೂರ್ತಿ ದಾಯಕವಾಗಿದ್ದು, ಅಂದು ಮಡಿ ದವರನ್ನು ನೆನಪಿನಲ್ಲಿಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಹೇಳಿದರು.

ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ.ಜಿಲ್ಲಾಡಳಿತ, ತಾಲೂಕು ಆಡಳಿತ ಸುಳ್ಯ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ನಡೆದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು. ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗಿದೆ. ಇದು ಒಂದು ಮೈಲುಗಲ್ಲು. ಈ ಸಂದರ್ಭದಲ್ಲಿ ನಮ್ಮ ದೇಶಕ್ಕೆ ನಾವೇನು ನೀಡಿದ್ದೇವೆ ಎಂಬುದನ್ನು ಅವಲೋಕಿಸಬೇಕು. ಸಂತಸದ ವಿಚಾರ ಎಂದರೆ ಇಂದು ಭಾರತ ವಿಶ್ವಕ್ಕೆ ಮಾರ್ಗ ದರ್ಶನ ಮಾಡುವ ರೀತಿಯಲ್ಲಿ ಮುಂದು ವರಿದಿದೆ ಎಂದರು.

ಅಪರ ಜಿಲ್ಲಾಧಿಕಾರಿ ಎಚ್‌. ಕೆ.ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯ ಮೂರು ಕಡೆಗಳಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ನಡೆಯುತ್ತಿದೆ. ದೇಶದ ವೈಭವ, ಘನತೆಯನ್ನು ತಿಳಿಸುವ, ತೋರಿಸುವ ಕಾರ್ಯ ನಡೆಯುತ್ತಿದೆ. ಇವುಗಳಿಂದ ದೇಶಭಕ್ತಿ ರೂಪುಗೊಂಡು, ದೇಶ ಕಟ್ಟುವ ಹೆಜ್ಜೆ ಇಡಬೇಕು ಎಂದರು.

ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಎಸ್.ಅಂಗಾರ ಮಾತನಾಡಿ, ಒಂದು ಅಮರ ತಾಲೂಕಾಗಿ ರೂಪುಗೊಳ್ಳಲು ಅಮರತೆಗೆ ತಕ್ಕಂತೆ ತ್ಯಾಗ ಇರಬೇಕು. ಸುಳ್ಯದಲ್ಲಿ ಸ್ವಾತಂತ್ರ್ಯ ಪೂರ್ವ ದಲ್ಲೇ ಹೋರಾಟಗಳು ನಡೆದಿವೆ. ಸ್ವಾಭಿ ಮಾನ, ಸ್ವಾವಲಂಬಿ ಬದುಕು, ಬ್ರಿಟಿಷರ ದಾಸ್ಯಕ್ಕೆ ಹೊಂದಿಕೊಳ್ಳದೆ ಹೊರಬರಲು ಅಮರ ಸುಳ್ಯ ಹೋರಾಟ ನಡೆಯಿತು. ಪಠ್ಯ ಪುಸ್ತಕದಲ್ಲಿ ಇಲ್ಲದ ವಿಚಾರಗಳ ಬಗ್ಗೆ ನಾವು ತಿಳಿದುಕೊಳ್ಳುವ ಅಗತ್ಯ ಇದೆ ಎಂದರು.

ಮನವಿ ಬೆಳ್ಳಾರೆಯನ್ನು ಐತಿಹಾಸಿಕ ಗ್ರಾಮವಾಗಿ ಘೋಷಿಸಲು ಹಾಗೂ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ಸ್ಮಾರಕ ನಿರ್ಮಿಸುವಂತೆ ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ ಎಸ್‌. ಅಂಗಾರ ಅವರಿಗೆ ಮನವಿ ಸಲ್ಲಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ

ಸಭಾ ಕಾರ್ಯಕ್ರಮದ ಬಳಿಕ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಳ್ಳಾರೆ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅಮರ ಕ್ರಾಂತಿ ಸುಳ್ಯ ಹೋರಾಟ ಬಿಂಬಿಸುವ ನಾಟಕ ಪ್ರದರ್ಶನ ನಡೆಯಿತು.

ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಸುಳ್ಯ ತಹಶೀಲ್ದಾರ್‌ ಅನಿತಾಲಕ್ಷ್ಮೀ, ಸುಳ್ಯ ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌, ಬೆಳ್ಳಾರೆ ಕೆಪಿಎಸ್‌ ಪ್ರಾಂಶು ಪಾಲ ಬಿ.ವಿ. ಸೂರ್ಯ ನಾರಾಯಣ, ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಪಂಚಾಯತ್‌ ಇಒ ಭವಾನಿಶಂಕರ್‌ ಸ್ವಾಗತಿಸಿದರು. ಸಿಡಿಪಿಒ ರಶ್ಮಿ ನೆಕ್ರಾಜೆ ವಂದಿಸಿದರು. ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕಾರ್ಯಕ್ರಮ ನಡೆಯಿತು.

ಸ್ಮಾರಕ ನಿರ್ಮಾಣ

ಬಂಗ್ಲೆಗುಡ್ಡೆಯಲ್ಲಿ ಬ್ರಿಟಿಷರು ನಿರ್ಮಿಸಿದ ಖಜಾನೆ ಕೊಠಡಿಯನ್ನು ಯಾವುದೇ ಕಾರಣಕ್ಕೂ ಕೆಡವದೆ, ಅದನ್ನು ಉಳಿಸಿಕೊಂಡು ದುರಸ್ತಿ ಪಡಿಸಲಾಗುವುದು. ಅಮರ ಸುಳ್ಯ ಹೋರಾಟದ ನೆನಪಿಗಾಗಿ ಸ್ಮಾರಕ ನಿರ್ಮಿಸುವ ಕೆಲಸವೂ ಆಗಲಿದೆ. ಅಮರ ಸುಳ್ಯ ದಂಗೆಯ ಮಹತ್ವವನ್ನು ಸಾರುವ ಕೆಲಸ ನಡೆಯಲಿದೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು.

ಮೆರವಣಿಗೆ

ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಮೆರವಣಿಗೆ ನಡೆಯಿತು. ಪೇಟೆಯಿಂದ ಬಂಗ್ಲೆಗುಡ್ಡೆಗೆ ಮೆರವಣಿಗೆ ಸಾಗಿತು. ಬಂಗ್ಲೆಗುಡ್ಡೆಯಲ್ಲಿ ಹೋರಾಟದ ಸ್ಮರಣ ಫ‌ಲಕವನ್ನು ಅನಾವರಣಗೊಳಿಸಲಾಯಿತು. ವಿವಿಧ ಸಾಂಸ್ಕೃತಿಕ ತಂಡಗಳು, ಚೆಂಡೆ ಕುಣಿತ ಮೆರವಣಿಗೆಗೆ ಮೆರುಗು ನೀಡಿತು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.