ಬ್ಯಾಂಕ್‌ಗಳ ವಿಲೀನ ಆರ್ಥಿಕತೆಗೆ ಮಾರಕ: ಅಮರ್‌ಜೀತ್‌ ಕೌರ್‌


Team Udayavani, Dec 16, 2019, 5:38 AM IST

1412mlr36

ಮಂಗಳೂರು: ಪ್ರಸ್ತುತ ಕೇಂದ್ರ ಸರಕಾರ ಅನುಸರಿಸುತ್ತಿರುವ ಬ್ಯಾಂಕ್‌ಗಳ ವಿಲೀನ ಹಾಗೂ ಬ್ಯಾಂಕ್‌ಗಳಲ್ಲಿ ನೇರ ವಿದೇಶಿ ಹೂಡಿಕೆಗೆ ಅವಕಾಶ ನೀತಿ ಬ್ಯಾಂಕ್‌ಗಳ ಅಸ್ತಿತ್ವ ಹಾಗೂ ದೇಶದ ಆರ್ಥಿಕತೆಗೆ ಮಾರಕವಾಗಿದ್ದು ಇದರ ವಿರುದ್ಧ ದುಡಿಯುವ ವರ್ಗ ಪ್ರಬಲವಾಗಿ ಧ್ವನಿಯೆತ್ತಬೇಕಾಗಿದೆ ಎಂದು ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ (ಎಐಟಿಯುಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್‌ ಕೌರ್‌ ಹೇಳಿದರು.

ಕರ್ಣಾಟಕ ಬ್ಯಾಂಕ್‌ ಅಧಿಕಾರಿಗಳ ಸಂಘದ (ಎಐಬಿಒಎ ಸಂಯೋಜಿತ ) ಆಶ್ರಯದಲ್ಲಿ ಪಿವಿಎಸ್‌ ಕಲಾಕುಂಜದಲ್ಲಿ ಆಯೋಜಿಸಿರುವ ಎರಡು ದಿನಗಳ 19ನೇ ರಾಷ್ಟ್ರೀಯ ಸಮಾವೇಶವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು ದೇಶದ ಆರ್ಥಿಕತೆ ಪ್ರಸ್ತುತ ಅತ್ಯಂತ ಸಂಕೀರ್ಣ ಕಾಲಘಟ್ಟದಲ್ಲಿದೆ. ಆರ್ಥಿಕ ಚಟುವಟಿಕೆಗಳು ಹಿನ್ನಡೆಗತಿಯಲ್ಲಿ ಸಾಗುತ್ತಿದ್ದು ಉತ್ಪಾದನಾ ಪ್ರಮಾಣ ಕುಸಿದಿದೆ.

ಉದ್ಯೋಗಗಳು ಕಡಿತಗೊಂಡಿವೆ. ಇವೆಲ್ಲದರ ನೇರ ಪರಿಣಾಮ ಬ್ಯಾಂಕಿಂಗ್‌ ಕ್ಷೇತ್ರದ ಮೇಲೂ ಆಗುತ್ತಿದೆ. ಐಎಂಎಫ್‌, ವಿಶ್ವಬ್ಯಾಂಕ್‌, ವಿದೇಶಿ ಬ್ಯಾಂಕ್‌ಗಳು, ವಿದೇಶಿ ನೇರ ಹೂಡಿಕೆಗಳ ಮುಂದೆ ಮಂಡಿಯೂರುವ ಧೋರಣೆ ದೇಶದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರು.

ಶತಮಾನ ಸಂಭ್ರಮದತ್ತ ಮುನ್ನಡೆಯುತ್ತಿರುವ ಕರ್ಣಾಟಕ ಬ್ಯಾಂಕ್‌ ಉತ್ತಮ ನಿರ್ವಹಣೆಯೊಂದಿಗೆ ರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ತನ್ನದೆ ಆದ ಸ್ಥಾನವನ್ನು ಪಡೆದುಕೊಂಡಿದೆ. ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌. ಅವರ ನಾಯಕತ್ವದಲ್ಲಿ ಬ್ಯಾಂಕ್‌ ಹೊಸ ಸಾಧನೆಯತ್ತ ಸಾಗುತ್ತಿದೆ ಎಂದು ಅಮರ್‌ಜೀತ್‌ ಕೌರ್‌ ಶ್ಲಾಘಿಸಿದರು.

ಕರ್ಣಾಟಕ ಬ್ಯಾಂಕ್‌ ಅಧಿಕಾರಿಗಳ ಸಂಘದ ಅಧ್ಯಕ್ಷ  ಬಿ. ಜಯರಾಮ ನಾೖಕ್‌ ಅಧ್ಯಕ್ಷತೆ ವಹಿಸಿದ್ದರು. ಎಐಬಿಒಎ ಪ್ರಧಾನ ಕಾರ್ಯದರ್ಶಿ ಎಸ್‌. ನಾಗರಾಜನ್‌, ಕರ್ನಾಟಕ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನಿಶ್‌ ಕೆ.ಎಸ್‌. ಚೌಹಾಣ್‌, ಕರ್ಣಾಟಕ ಬ್ಯಾಂಕ್‌ ಅ.ಭಾ.ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಆರ್‌. ಕಾರಂತ್‌ ಮುಖ್ಯ ಅತಿಥಿಗಳಾಗಿದ್ದರು. ಕರ್ಣಾಟಕ ಬ್ಯಾಂಕ್‌ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರಾಘವ ಸ್ವಾಗತಿಸಿದರು.

ಕರ್ಣಾಟಕ ಬ್ಯಾಂಕ್‌ ಅಜೆಂಡಾವೇ ಪ್ರಧಾನ
ಶತಮಾನೋತ್ಸವ ಸಂಭ್ರಮದತ್ತ ಸಾಗುತ್ತಿರುವ ಕರ್ಣಾಟಕ ಬ್ಯಾಂಕ್‌ ಸ್ಥಾಪನೆಯಾದಂದಿನಿಂದಲೂ ನಿರಂತರ ಪ್ರಗತಿ ಪಥದಲ್ಲೇ ಸಾಗುತ್ತ ಬಂದಿದ್ದು ಪ್ರಸ್ತುತ ಬ್ಯಾಂಕಿನ ಒಟ್ಟು ವ್ಯವಹಾರ 1,26,000 ಕೋಟಿ ರೂ. ದಾಟಿದೆ. ಬ್ಯಾಂಕ್‌ನಲ್ಲಿ ಮ್ಯಾನೇಜ್‌ಮೆಂಟ್‌ ಅಜೆಂಡಾ-ಯೂನಿಯನ್‌ ಅಜೆಂಡಾಕ್ಕಿಂತಲೂ ಕರ್ಣಾಟಕ ಬ್ಯಾಂಕ್‌ ಅಜೆಂಡಾವೇ ಪ್ರಧಾನವಾಗಿದ್ದು ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಯೇ ಎಲ್ಲರ ಗುರಿಯಾಗಿದೆ ಎಂದು ಬ್ಯಾಂಕಿನ ಎಂಡಿ ಮಹಾಬಲೇಶ್ವರ ಎಂ.ಎಸ್‌.ಹೇಳಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.