ಬಹುಮುಖ ಪ್ರತಿಭೆಯ ಸಾಧಕ ಅಮರನಾಥ ಶೆಟ್ಟಿ


Team Udayavani, Jan 28, 2020, 5:08 AM IST

Amarnath-Shetty

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ರಂಗದ ಅನೇಕ ಪ್ರಥಮಗಳ ಸರದಾರ, ಸಮಾಜದ ವಿವಿಧ ಕಾರ್ಯ ಕ್ಷೇತ್ರಗಳಲ್ಲಿನ ಸಾಧಕ ಸವ್ಯಸಾಚಿ ಕೊಡ್ಮಾ ಣ್‌ಗುತ್ತು ಅಮರನಾಥ ಶೆಟ್ಟಿ ಅವರ ನಿಧನದಿಂದ ಈ ಪ್ರದೇಶದ ಸುಸಂಸ್ಕೃತ ಮುಖಂಡನನ್ನು ಕಳೆದು ಕೊಂಡ ಶೂನ್ಯ ಆವರಿಸಿದೆ.

“ಎಲ್ಲರೊಳಗೊಂದಾಗು’ ಎಂಬ ತಣ್ತೀವನ್ನು ಪರಿಪೂರ್ಣವಾಗಿ ಪಾಲಿಸಿದ ಅಜಾತಶತ್ರು “ಅಮರಣ್ಣ’. ದ. ಕನ್ನಡದ 66 ವರ್ಷಗಳ (1952-2018) ಚುನಾವಣ ಇತಿಹಾಸದಲ್ಲಿ ಅವರು 1972ರಿಂದ 2014ರ ವರೆಗೆ ಸತತವಾಗಿ ಮೂಡುಬಿದಿರೆ ಕ್ಷೇತ್ರದಿಂದ 10 ಬಾರಿ ಸ್ಪರ್ಧಿಸಿದವರು. 2018ರ ಚುನಾವಣೆಯಲ್ಲಿ ಸ್ಪರ್ಧಿಸಲು ಜಾತ್ಯತೀತ ಜನತಾದಳದಿಂದ ಅವಕಾಶ ದೊರೆತಿದ್ದರೂ ಹೊಸಬರಿಗೆ ಅವಕಾಶ ದೊರೆಯಲಿ ಎಂಬ ಮೇಲ್ಪಂಕ್ತಿ ಹಾಕಿಕೊಟ್ಟರು.

ರಾಜಕೀಯವಾಗಿ ವಿಶ್ಲೇಷಿಸುವುದಿದ್ದರೆ, ಅವರು ಜನತಾ ಪರಿವಾರದಿಂದಲೇ ಸ್ಪರ್ಧಿಸಿದವರು, ಗೆದ್ದವರು, ಸಚಿವರಾದವರು. ಅವಿಭಜಿತ ದ. ಕನ್ನಡ ಜಿಲ್ಲೆಯಲ್ಲಿ ಅವರು ಜನತಾ ಪರಿವಾರದ (ಸಂಸ್ಥಾ ಕಾಂಗ್ರೆಸ್‌, ಜನತಾ ಪಕ್ಷ, ಜನತಾದಳ) ಮುಖವಾಣಿಯೂ ಆಗಿದ್ದರು; ಐಕಾನ್‌ ಕೂಡ ಆಗಿದ್ದರು.

ಮೂಡುಬಿದಿರೆಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವಲ್ಲಿಯೂ ಅವರ ಕೊಡುಗೆ ಗಮನಾರ್ಹವಾಗಿದೆ. ಸ್ವತಃ ಕಲಾವಿದರಾಗಿದ್ದ ಶೆಟ್ಟಿ ಅವರು ರಂಗಭೂಮಿಯಲ್ಲಿ, ಪಗೆತ ಪುಗೆ ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದರು. ಕಲಾವಿದರನ್ನು ಪ್ರೋತ್ಸಾಹಿಸಿದರು. ಅವರ ಆಕರ್ಷಕ ವ್ಯಕ್ತಿತ್ವ ಐತಿಹಾಸಿಕ- ಪೌರಾಣಿಕ ನಾಟಕ- ಸಿನೆಮಾಗಳಿಗೆ ಹೇಳಿ ಮಾಡಿಸಿದಂತಿತ್ತು. ಸಹಕಾರಿ, ಬ್ಯಾಂಕಿಂಗ್‌, ಶಿಕ್ಷಣ, ಕ್ರೀಡೆ…

ಹೀಗೆ ಎಲ್ಲ ರಂಗಗಳಲ್ಲಿಯೂ ಸಕ್ರಿಯರಾಗಿದ್ದ ಅಪೂರ್ವ ವ್ಯಕ್ತಿತ್ವ ಅವರದು.

ಪಂಚಾಯತ್‌ ಹಂತದಿಂದ ರಾಜ್ಯದ ಸಚಿವ ಸ್ಥಾನದವರೆಗೆ ವಿವಿಧ ಹಂತದ ಸ್ಥಳೀಯಾ ಡಳಿತಗಳಲ್ಲಿ ಅವರು ಅನುಭವ ಪಡೆದಿದ್ದರು. ಎಲ್ಲ ರಾಜಕೀಯ ಪಕ್ಷಗಳಿಂದಲೂ ಗೌರವಕ್ಕೆ ಪಾತ್ರರಾಗಿದ್ದರು.ದ. ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಅವರು ಅಧಿಕಾರಿಗಳ- ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸುತ್ತಿದ್ದ ರೀತಿ ಅವರ ಆಡಳಿತಾತ್ಮಕ ಕೌಶಲಕ್ಕೆ ನಿದರ್ಶನವಾಗಿತ್ತು. ಬಹುತೇಕ ಸಭೆ ಸಮಾರಂಭಗಳಲ್ಲಿ, ತನ್ನ ಕ್ಷೇತ್ರ ವ್ಯಾಪ್ತಿಯ ಶುಭ ಕಾರ್ಯಗಳಲ್ಲಿ ಅವರು ಭಾಗವಹಿಸುತ್ತಿದ್ದರು; ಈ ಮೂಲಕ ಜನತೆಗೆ ನಿಕಟವಾಗಿದ್ದರು. ತನ್ನ ಪಕ್ಷ ಈ ಪ್ರದೇಶದಲ್ಲಿ ಪ್ರಬಲವಾಗಿ ಇರದಿದ್ದರೂ ಶೆಟ್ಟಿ ಅವರು ಗೆಲುವು ಸಾಧಿಸುತ್ತಿದ್ದುದು ಅವರ ಮೇಲೆ ಮತದಾರರಾಗಿದ್ದ ಪ್ರೀತಿಯ ದ್ಯೋತಕವಾಗಿದೆ.

1972ರಲ್ಲಿ ಅವರು ಸ್ಪರ್ಧಿಸಿದ ಮೊದಲ ಚುನಾವಣೆಯಿಂದ ಅವರು ಸಕ್ರಿಯರಾಗಿದ್ದ 2018ರ ಚುನಾವಣೆಯವರೆಗೆ ತಾನು ಗಮನಿಸಿದ ಬದಲಾವಣೆಗಳ ಬಗ್ಗೆ ಕೇಳಿದಾಗ ಅವರು ನೀಡಿದ್ದ ಉತ್ತರ ಇಲ್ಲಿ ಉಲ್ಲೇಖನೀಯ.”ಮೌಲ್ಯಗಳ ಪತನವಾಗುತ್ತಿರುವುದನ್ನು ಕಂಡಾಗದುಃಖವಾಗುತ್ತಿದೆ. ಆರಂಭಿಕ ದಿನಗಳಲ್ಲಿ ಚುನಾವಣಪ್ರಕ್ರಿಯೆಗಳು ಪವಿತ್ರ ಎಂಬಷ್ಟು ಬದ್ಧತೆಯನ್ನು ಹೊಂದಿದ್ದವು. ಪ್ರಾಮಾಣಿಕತೆ, ಸತ್ಯಸಂಧತೆ, ಪಾರದರ್ಶಕತೆ ಚುನಾವಣೆಗೆ ಹಬ್ಬದ ಸ್ವರೂಪ ನೀಡುತ್ತಿದ್ದವು. ಆದರೆ ಈಗ ಈ ರೀತಿಯ ವಾತಾವರಣ ಮರೆಯಾಗುತ್ತಿರುವುದು ಬೇಸರದ ಸಂಗತಿ’.

-ಮನೋಹರ ಪ್ರಸಾದ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.