ರಿಪೇರಿ ನೆಪದಲ್ಲಿ 4 ವಾರಗಳಿಂದ ಆಂಬುಲೆನ್ಸ್ ನಾಪತ್ತೆ !


Team Udayavani, Aug 8, 2018, 10:39 AM IST

8-agust-2.jpg

ಆಲಂಕಾರು : ತುರ್ತು ಚಿಕಿತ್ಸಾ ಸೇವೆಗೆ ರಾಜ್ಯ ಸರಕಾರ ನಿಯೋಜಿಸಿದ್ದ ಆರೋಗ್ಯ ಕವಚ 108 ಆ್ಯಂಬುಲೆನ್ಸ್‌ನ ಸೇವೆ ಸುಮಾರು 25 ದಿನಗಳಿಂದ ಆಲಂಕಾರಿನ ಜನತೆಗೆ ಲಭ್ಯವಾಗುತ್ತಿಲ್ಲ. ಜನರು ಹಣ ತೆತ್ತು ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

2015ರಲ್ಲಿ ಆಲಂಕಾರನ್ನು ಕೇಂದ್ರವಾಗಿರಿಸಿಕೊಂಡು ಆರಂಭವಾದ 108 ಆರೋಗ್ಯ ರಕ್ಷಾ ಆ್ಯಂಬುಲೆನ್ಸ್‌ ಸೇವೆ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಿರಾತಂಕವಾಗಿ ಸಾಗಿತ್ತು. ಸದ್ಯ 108 ಆ್ಯಂಬುಲೆನ್ಸ್‌ ಸೇವೆಗಾಗಿ 15 ಕಿ.ಮೀ. ದೂರದ ಕಡಬ ಅಥವಾ ಉಪ್ಪಿನಂಗಡಿ, 35 ಕಿ.ಮೀ. ದೂರದ ಸುಬ್ರಹ್ಮಣ್ಯ, 30 ಕಿ.ಮೀ. ದೂರದ ಶಿರಾಡಿ ಅಥವಾ 25 ಕಿ.ಮೀ. ದೂರದಲ್ಲಿರುವ ಬೆಳ್ಳಾರೆಯನ್ನು ಸಂಪರ್ಕಿಸಬೇಕಾಗಿದೆ. ಈ ಸೇವೆ ಸೂಕ್ತ ಸಮಯದಲ್ಲಿ ಸಿಗುವುದೂ ಇಲ್ಲ. ದುಬಾರಿ ಬಾಡಿಗೆ ಹಣ ನೀಡಿ ಖಾಸಗಿ ವಾಹನವನ್ನು ಅವಲಂಬಿಸಬೇಕಾಗಿರುವುದು ಅನಿವಾರ್ಯ.

108 ಸೇವೆ ರದ್ದುಪಡಿಸುವ ಹುನ್ನಾರವೇ?
ಆ್ಯಂಬುಲೆನ್ಸ್‌ಗೆ ಅಗತ್ಯವಾಗಿರುವ ವಾಹನದ ಎಫ್ ಸಿ  (ಫಿಟ್ನೆಸ್‌ ಸರ್ಟಿಫಿಕೇಟ್ ) ಅವಧಿ ಮುಕ್ತಾಯವಾಗಿದೆ. ಇದರ ನವೀಕರಣಕ್ಕಾಗಿ ಹಾಗೂ ಬಣ್ಣ ಬಳಿಯುವುದಕ್ಕಾಗಿ ಜು. 14ರಂದು ವಾಹನವನ್ನು ಗ್ಯಾರೇಜಿನಲ್ಲಿರಿಸಲಾಗಿದೆ. 108 ಸೇವೆಯನ್ನು ರದ್ದುಪಡಿಸುವ ಹುನ್ನಾರ ಇದು ಎಂದು ಸಾರ್ವಜನಿಕ ವಲಯದಿಂದ ಆರೋಪ  ಕೇಳಿ ಬಂದಿದೆ. ತುರ್ತು ಸೇವೆಗಾಗಿ 108 ಅನ್ನು ನಂಬಿಕೊಂಡಿದ್ದ ಆಲಂಕಾರು, ಕುಂತೂರು, ಪೆರಾಬೆ, ಬಲ್ಯ, ಪದವು, ರಾಮಕುಂಜ, ಕೊಯಿಲ, ಹಳೆನೇರಂಕಿ ಗ್ರಾಮಗಳ ಜನರು ಸದ್ಯ ಈ ಸೇವೆಯಿಂದ ವಂಚಿತರಾಗಿದ್ದಾರೆ.

ನೂರೆಂಟು ಸಮಸ್ಯೆ
ಕೆಲ ದಿನಗಳ ಹಿಂದಷ್ಟೇ ಕಡಬದ 108 ಆ್ಯಂಬುಲೆನ್ಸ್‌ನ ಚಕ್ರದಲ್ಲಿ ದೋಷವಿದೆ ಎನ್ನುವ ಕಾರಣ ನೀಡಿ ಸಾರ್ವಜನಿಕ ಸೇವೆಯಿಂದ ದೂರವಿಟ್ಟಿದ್ದರು. ಆಲಂಕಾರಿನಲ್ಲಿರುವ ಆ್ಯಂಬುಲೆನ್ಸ್‌ ಸೇವೆ ಬೆಳಗ್ಗೆಯಿಂದ ಸಂಜೆ ತನಕ ಮಾತ್ರ ಸೇವೆಗೆ ಲಭ್ಯವಾಗುತ್ತಿದೆ. ಕೇವಲ ಇಬ್ಬರು ಸಿಬಂದಿ ಇದ್ದು, ರಾತ್ರಿ ವೇಳೆ ಕರ್ತವ್ಯ ನಿರ್ವಹಿಸಲು ಸಿಬಂದಿ ಕೊರತೆಯೂ ಕಾಡುತ್ತಿದೆ.

ಸತ್ಯಾಗ್ರಹ ನಡೆಸಲಾಗುವುದು
108 ಆ್ಯಂಬುಲೆನ್ಸ್‌ ಅನ್ನು ದುರಸ್ತಿಗೆ ಕಳುಹಿಸುವಾಗ ಬದಲಿ ವ್ಯವಸ್ಥೆ ಕಲ್ಪಿಸಿಕೊಡುವುದು ಕಂಪೆನಿಯ ಕರ್ತವ್ಯ  ವಾರಗಟ್ಟಲೆ ವಾಹನವನ್ನು ಗ್ಯಾರೇಜ್‌ನಲ್ಲಿ ನಿಲ್ಲಿಸಿ, ಕೆಲ ನೆಪ ನೀಡಿ ಕೇಂದ್ರ ಬದಲಾಯಿಸುವ ಹುನ್ನಾರವನ್ನು ಕಂಪೆನಿ ನಡೆಸುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ. ಮುಂದಿನ 1 ವಾರದೊಳಗೆ ಆಲಂಕಾರಿನ ಜನತೆಗೆ 108 ಆ್ಯಂಬುಲೆನ್ಸ್‌ ಸೇವೆಗೆ ಲಭ್ಯವಾಗದಿದ್ದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
 - ಅಬೂಬಕ್ಕರ್‌ (ಅಬ್ಬು), ಆಲಂಕಾರು ವಲಯ ಕಾರ್ಮಿಕ ಸಂಘದ ಅಧ್ಯಕ್ಷರು.

ಶೀಘ್ರವೇ ಲಭ್ಯವಾಗಲಿದೆ
ಆಲಂಕಾರಿನ ವಾಹನದ ಫಿಟ್‌ನೆಸ್‌ ಸರ್ಟಿಫಿಕೇಟ್ ಅವಧಿ ಮುಗಿದಿರುತ್ತದೆ. ನವೀಕರಿಸಿ ಪಡೆಯುವುದಕ್ಕಾಗಿ ವಾಹನವನ್ನು ಕಾರ್ಕಳ ಗ್ಯಾರೇಜ್‌ ನಲ್ಲಿ ದುರಸ್ತಿಗೆ ಇಟ್ಟಿದ್ದೇವೆ. ಪೈಂಟ್‌ ಕೊಡಲಾಗಿದೆ. ಮಳೆ ಬರುತ್ತಿದ್ದ ಕಾರಣ ಪೈಂಟ್‌ ಸರಿಯಾಗಿ ಒಣಗಿಲ್ಲ. ಹೀಗಾಗಿ ವಾಹನ ಬಿಡುಗಡೆ ವಿಳಂಬವಾಗಿದೆ. ಕೆಲವೇ ದಿನಗಳಲ್ಲಿ ವಾಹನವನ್ನು ಆಲಂಕಾರಿನ ಜನತೆಯ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು. ಯಾವುದೇ ನಿರ್ಲಕ್ಷ್ಯ ಮಾಡಿಲ್ಲ.
– ಮಹಾಬಲ,
ಜಿಲ್ಲಾ ವ್ಯವಸ್ಥಾಪಕರು, ಆರೋಗ್ಯರಕ್ಷಾ

 ಸದಾನಂದ ಆಲಂಕಾರು

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.