ಮಂಗಳೂರಿಗೆ ಆಗಮಿಸಿದ ಅಮ್ಮ; ಇಂದಿನಿಂದ ಅಮೃತ ಸಂಗಮ


Team Udayavani, Feb 20, 2018, 12:37 PM IST

Matha.jpg

ಮಂಗಳೂರು: ಅಗ್ರಗಣ್ಯ ಆಧ್ಯಾತ್ಮಿಕ ನೇತಾರರಾದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ (ಅಮ್ಮ) ಅವರು ಸೋಮವಾರ ಸಂಜೆ ಮಂಗಳೂರಿನ ಬೋಳೂರು ಅಮೃತಾನಂದಮಯಿ ಮಠಕ್ಕೆ ಆಗಮಿಸಿದ್ದಾರೆ. ನೂರಾರು ಭಕ್ತರು ಅಮ್ಮನವರನ್ನು ಆತ್ಮೀಯವಾಗಿ ಮಂಗಳೂರಿಗೆ ಬರಮಾಡಿಕೊಂಡರು.

ಫೆ. 20 ಹಾಗೂ 21ರಂದು “ಅಮೃತ ಸಂಗಮ-2018′ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮ್ಮ ಅವರು ಪಾಲ್ಗೊಳ್ಳಲಿದ್ದಾರೆ. 20ರಂದು ಬೆಳಗ್ಗೆ 7ರಿಂದ ಸತ್ಸಂಗ, ಭಜನೆ, ಧ್ಯಾನ ನಡೆಯಲಿದೆ. 10 ಗಂಟೆಗೆ ಅಮ್ಮನವರು ಪ್ರವಚನ ನಡೆಸಿಕೊಡಲಿದ್ದಾರೆ. 

25 ಮಂದಿಗೆ ಗಾಲಿ ಕುರ್ಚಿ, ಬಡ ವಿದ್ಯಾರ್ಥಿಗಳಿಗೆ ಅಮೃತ ಸ್ಕಾಲರ್‌ಶಿಪ್‌ ವಿತರಣೆ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ವಿತರಣೆ, ಅಮಲ ಭಾರತ (ಸ್ವತ್ಛ ಭಾರತ) ಅಭಿಯಾನದ ಅಂಗವಾಗಿ ಶಾಲೆ ಗಳಲ್ಲಿ ಸ್ವತ್ಛತೆಗಾಗಿ ಮೂರು ಬಣ್ಣಗಳ ಕಸದ ಬುಟ್ಟಿಗಳ ವಿತರಣೆ, ಶತಮಾನೋತ್ಸವ ಆಚರಿಸಿದ ಉರ್ವಾ ಗಾಂಧಿನಗರದಲ್ಲಿರುವ ಸ.ಹಿ.ಪ್ರಾ. ಶಾಲೆಗೆ ಕ್ರೀಡಾ ಸಾಮಗ್ರಿಗಳ ಕೊಡುಗೆ, ಅಮೃತ ಶ್ರೀ ಯೋಜನೆಯ ಮಹಿಳಾ ಸ್ವಾವಲಂಬಿ, ಸ್ವ ಉದ್ಯೋಗ ಯೋಜನೆಯ ಅಂಗವಾಗಿ ಹೊಲಿಗೆ ಯಂತ್ರ ವಿತರಣೆ, “ಕಾರುಣ್ಯ ತೀರ’ ಪುಸ್ತಕ ಬಿಡುಗಡೆ, ಅಂಚೆ ಚೀಟಿ, ಕವರ್‌ ಅನಾವರಣ, ಅಮೃತ ಶ್ರೀ ಯೋಜನೆಯ ಸದಸ್ಯರಿಗೆ ಸೀರೆ ವಿತರಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ.

ಫೆ. 21ರಂದು ಬೆಳಗ್ಗೆ 11ಕ್ಕೆ ಅಮ್ಮನ ಪ್ರವಚನ ನಡೆಯಲಿದೆ. ಮಾನಸ ಪೂಜೆ ಮತ್ತು ಅಮ್ಮನವರ ಅನುಗ್ರಹ ದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗೆ ಉದಯಾಸ್ತಮಾನ, ವಿಶೇಷ ಪೂಜೆಗಳು ಜರಗಲಿವೆ. ನವಗ್ರಹ ಶಾಂತಿ ಹೋಮ, ಮಹಾ ಸುದರ್ಶನ ಹೋಮ, ಭಗವತಿ ಪೂಜೆ, ಅಲಂಕಾರ ಪೂಜೆ ಸಹಿತ ವಿವಿಧ ಅರ್ಚನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಎಲ್ಲರಿಗೂ ಅಮ್ಮನ ದರ್ಶನ ಅಮ್ಮನ ದರ್ಶನ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಟೋಕನ್‌ಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡುತ್ತಿದ್ದು, ಬಳಿಕ ಅಮ್ಮನ ದರ್ಶನ ಪಡೆಯಬಹುದು. ಭಕ್ತರು ಸಕಾಲದಲ್ಲಿ ಆಗಮಿಸಿ ಟೋಕನ್‌ ಪಡೆದು ಕೊಳ್ಳಬೇಕು. ಶ್ರೀ ಬ್ರಹ್ಮಸ್ಥಾನ ಮಹೋ ತ್ಸವದ ಅಂಗವಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯೂ ಇದೆ. ಅಲ್ಲದೆ ಕ್ಯಾಂಟೀನ್‌ ಸೌಲಭ್ಯ, ವೈದ್ಯಕೀಯ ಸೌಲಭ್ಯವನ್ನೂ ಕಲ್ಪಿಸ ಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು ವವರಿಗೆ ನಗರದ ಲೇಡಿಹಿಲ್‌ನಿಂದ ಅಮೃತಾ ವಿದ್ಯಾಲಯದ ವರೆಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಕನಾಡಿ ಜಂಕ್ಷನ್‌ ರೈಲ್ವೇ ನಿಲ್ದಾಣದಿಂದ ಅಮೃತಾ ವಿದ್ಯಾಲಯದವರೆಗೆ ಸಾರಿಗೆ ವ್ಯವಸ್ಥೆ ಕಲ್ಪಿಸ ಲಾಗಿದೆ ಎಂದು ಮಾತಾ ಅಮೃತಾನಂದ ಮಯಿ ಸೇವಾ ಸಮಿತಿ ಅಧ್ಯಕ್ಷ ಪ್ರಸಾದ್‌ರಾಜ್‌ ಕಾಂಚನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.