ಕಟೀಲಿನವರೆಗೂ ಹರಿದ ಭಕ್ತಸಾಗರ


Team Udayavani, Feb 4, 2019, 3:51 AM IST

namma-nade.jpg

ಬಜಪೆ: ಲೋಕ ಕಲ್ಯಾಣಾರ್ಥ, ಸಕಲ ಸಂಕಷ್ಟ ಹಾಗೂ ಗ್ರಹಚಾರ ದೋಷ ನಿವಾರಣೆಗೆ ಕೈಗೊಂಡ ಮರವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ 6ನೇ ವರ್ಷದ ಪಾದಯಾತ್ರೆ “ಅಮ್ಮನೆಡೆಗೆ ನಮ್ಮ ನಡೆ’ಗೆ ಭಕ್ತರು ಭಾರೀ ಸಂಖ್ಯೆ ಯಲ್ಲಿ ಆಗಮಿಸುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿದೆ.

ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕೆ. ವಾಸುದೇವ ಆಸ್ರಣ್ಣ , ಭಕ್ತಿ, ಶ್ರದ್ಧೆಯಿಂದ ದೇವರ ಅನುಗ್ರಹವಾಗುತ್ತದೆ. ಪಾದ ಯಾತ್ರೆಗೆ ಭಕ್ತ ಸಾಗರವೇ ಹರಿದು ಬರುತ್ತಿರುವುದು ಇದಕ್ಕೆ ಸಾಕ್ಷಿ ಎಂದರು. ನಾವು ನಮಗೆ ಮಾತ್ರ ದೇವರಲ್ಲಿ ಪ್ರಾರ್ಥಿಸದೆ ಎಲ್ಲರಿಗೂ ಒಳ್ಳೆಯದಾಗಲಿ ಎನ್ನಬೇಕು. ಎಲ್ಲರ ಕಷ್ಟಗಳು ದೂರವಾಗಲಿ ಎಂದು ಅನಂತ ಪದ್ಮನಾಭ ಆಸ್ರಣ್ಣ  ಹೇಳಿದರು.

ಕಲ್ಲಡ್ಕ ಪ್ರಭಾಕರ ಭಟ್‌ ಮಾತನಾಡಿ, ಅಮ್ಮ ಸಾಕ್ಷಾತ್‌ ಭೂಮಿತಾಯಿ ರೂಪ. ಅಮ್ಮನೆಡೆಗೆ ನಡೆ ಸ್ವಾರ್ಥಕ್ಕಾಗಿ ಅಲ್ಲ. ಇಂದು ಭೂಮಿ ತಾಯಿ ಮೇಲೆ ಆಗುವ ಆಕ್ರಮಣಗಳನ್ನು ಎದುರಿಸಲು ಅಮ್ಮನಿಗೆ ಶಕ್ತಿ ಕೊಡಬೇಕು. ಹಿಂದೂ ಸಮಾಜದ ಒಗ್ಗಟ್ಟಿಗೆ, ರಕ್ಷಣೆಗೆ ನಾವು ಬದ್ಧರಾಗಬೇಕು ಎಂದರು.

“ಅಮ್ಮನೆಡೆಗೆ ನಮ್ಮ ನಡೆ’ ಅಧ್ಯಕ್ಷ ಸಂದೀಪ್‌ ಶೆಟ್ಟಿ ಮರವೂರು ಮಾತನಾಡಿದರು. ಧರ್ಮದರ್ಶಿ ಪ್ರವೀಣ್‌ರಾಜ್‌, ಮಚ್ಛೇಂದ್ರನಾಥ ಬಾಬಾ, ಕಟೀಲು ದೇಗುಲದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಮೊಕ್ತೇಸರ ಸುಧೀರ್‌ ಶೆಟ್ಟಿ, ಸಂಸದ ನಳಿನ್‌, ಶಾಸಕರಾದ ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಕದ್ರಿ ಕ್ಷೇತ್ರದ ಮೊಕ್ತೇಸರ ಎ.ಜೆ. ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರವೀಂದ್ರ ಅರಸ, ಮೋನಪ್ಪ ಭಂಡಾರಿ, ಜಿತೇಂದ್ರ ಕೊಟ್ಟಾರಿ, ಆಶಾ ಜ್ಯೋತಿ ರೈ, ಉದಯ್‌ ಶೆಟ್ಟಿ ಪಡುಬಿದಿರೆ, ಜಗದೀಶ ಶೇಣವ, ಶರಣ್‌ ಪಂಪ್‌ವೆಲ್‌, ನಿವೇದಿತಾ ಎನ್‌. ಶೆಟ್ಟಿ ಬೆಳ್ಳಿಪ್ಪಾಡಿ, ಕಿಶೋರ್‌ ರೈ 
ಪುತ್ತೂರು, ಸುಕೇಶ್‌ ಶೆಟ್ಟಿ ಮುಂಡಾರುಗುತ್ತು ಪಾದಯಾತ್ರೆಯಲ್ಲಿ ಭಾಗವಹಿಸಿದರು.

15 ಕಿ.ಮೀ. ಪಾದಯಾತ್ರೆ
ಮರವೂರು ದೇವಳದಿಂದ ಕಟೀಲು ದೇಗುಲಕ್ಕೆ 15 ಕಿ.ಮೀ. ಪಾದಯಾತ್ರೆಯಲ್ಲಿ ಸುಮಾರು 55 ಸಾವಿರ ಭಕ್ತರು ಪಾಲ್ಗೊಂಡಿದ್ದರು. ಸುಮಾರು 20 ಕಡೆ ಪಾನೀಯದ ವ್ಯವಸ್ಥೆ, ಆ್ಯಂಬುಲೆನ್ಸ್‌ ಸೇವೆ ಮಾಡಲಾಗಿತ್ತು. 8 ಗಂಟೆ ಕಾಲ ಸಾಗಿದ ಪಾದಯಾತ್ರೆ ಅಪರಾಹ್ನ1 ಗಂಟೆಗೆ ಕಟೀಲಿಗೆ ತಲುಪಿ ಶ್ರೀದೇವಿಯ ದರ್ಶನ ಪಡೆಯುವ ಮೂಲಕ ಸಂಪನ್ನಗೊಂಡಿತು. ದೇವಿಯ ಚಿತ್ರಪಟ ಇರುವ ಪುಷ್ಪಾಲಂಕೃತ ದೇವರ ರಥ, ಬ್ರಹ್ಮ ವಿಷ್ಣು, ಮಹೇಶ್ವರ ಯಕ್ಷಗಾನ ವೇಷಧಾರಿಗಳು, ಭಜನ ಸಂಕೀರ್ತನೆಯೊಂದಿಗೆ ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.