ಸುರತ್ಕಲ್: ಮಂಜುಗಡ್ಡೆ ಉತ್ಪಾದನಾ ಘಟಕದಿಂದ ಅಮೋನಿಯಾ ಸೋರಿಕೆ, ಆತಂಕದಲ್ಲಿ ಸ್ಥಳೀಯರು
Team Udayavani, Feb 22, 2020, 11:18 AM IST
ಸುರತ್ಕಲ್: ಇಲ್ಲಿನ ಕುಳಾಯಿಯ ಬಳಿಯ ಮಂಜುಗಡ್ಡೆ ಉತ್ಪಾದನಾ ಘಟಕದಲ್ಲಿ ಅಮೋನಿಯಾ ಸೋರಿಕೆಯಾಗಿ ಪರಿಸರದಲ್ಲಿ ಆತಂಕದ ಪರಿಸ್ಥಿತಿ ಉಂಟಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಇಲ್ಲಿನ ವಿಜಯ ಮಂಜುಗಡ್ಡೆ ಉತ್ಪಾದನಾ ಘಟಕದಲ್ಲಿ ಅವಗಢ ನಡೆದಿದ್ದು, ಸ್ಥಳಕ್ಕೆ ಹಲವು ಅಗ್ನಿ ಶಾಮಕ ದಳಗಳು ದೌಡಾಯಿಸಿದೆ.
ಶನಿವಾರ ಬೆಳಿಗ್ಗೆ ಎಂಟು ಗಂಟೆಗೆ ಘಟನೆ ನಡೆದಿದ್ದು, ಸ್ಥಳೀಯರಿಗೆ ಉಸಿರು ಕಟ್ಟಿದ ಅನುಭವವಾಗಿದೆ. ಕೂಡಲೇ ಸ್ಥಳೀಯ ನಿವಾಸಿಗಳನ್ನು ಮನೆಯಿಂದ ಹೊರಗೆ ದೂರದ ಪ್ರದೇಶಕ್ಕೆ ಕಳುಹಿಸಲಾಯಿತು. ಹಲವರಿಗೆ ಉಸಿರಾಟದ ಸಮಸ್ಯೆ ಮತ್ತು ಕಣ್ಣುಉರಿಯಂತಹ ಅನುಭವವಾಗಿದೆ.
ಮಂಜುಗಡ್ಡೆ ತಯಾರಿಕೆಗೆ ಬಳಸುವ ಅಮೋನಿಯಾ ಇದಾಗಿದ್ದು, ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಅಮೋನಿಯಾ ಸೋರಿಕೆಯ ಪರಿಣಾಮ ಪರಿಸರದ ಮರಗಿಡಗಳು ಬಾಡಿ ಹೋಗಿವೆ.
ಸ್ಥಳಕ್ಕೆ ರಾಜ್ಯ ಅಗ್ನಿ ಶಾಮಕ ದಳ, ಎಂಸಿಎಫ್ ಮತ್ತು ಎನ್ ಎಂಪಿಟಿಯ ಅಗ್ನಿ ಶಾಮಕ ದಳಗಳು ಆಗಮಿಸಿದೆ. ಎಂಸಿಎಫ್ ನ ತುರ್ತು ರಕ್ಷಣಾ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ