ಬೆಳ್ತಂಗಡಿ ತಾಲೂಕಿನ 18 ಕೆರೆಗಳು ಆಯ್ಕೆ: ಅಮೃತ ಸರೋವರ ಯೋಜನೆ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಅಮೃತ ಸರೋವರ ಯೋಜನೆ
Team Udayavani, Aug 11, 2022, 11:53 AM IST
ಬೆಳ್ತಂಗಡಿ: ಮಾನವನ ಅತಿಯಾದ ಚಟುವಟಿಕೆಗಳಿಂದ ಪಾರಂಪರಿಕ ಕೆರೆಗಳು ನಶಿಸುತ್ತಿವೆ. ಹೀಗೆ ಮುಂದುವರಿದರೆ ಭವಿಷ್ಯದ ಪೀಳಿಗೆಗೆ ಕೆರೆ ನೋಡಲು ಸಿಗುವುದೇ ಅಪರೂಪವಾಗಬಹುದು ಎನ್ನುವ ಆತಂಕವಿದೆ. ಇದನ್ನು ತಡೆಯುವ ಸಲುವಾಗಿ ಸರಕಾರವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಅಮೃತ ಸರೋವರ ಯೋಜನೆ ಮೂಲಕ ರಾಜ್ಯದ 750 ಕೆರೆಗಳ ಪುನಶ್ಚೇತನ ಹಾಗೂ ಸಮಗ್ರ ಅಭಿವೃದ್ಧಿಗೆ ಮುಂದಡಿಯಿಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ನಡೆಸಲು ಉದ್ದೇಶಿಸಿದ್ದರಿಂದ ಈ ಯೋಜನೆಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಧಾನಿ ನರೇಂದ್ರ ಮೋದಿ ಅಮೃತ ಸರೋವರ ಯೋಜನೆ ಎಂದು ಹೆಸರಿಡಲಾಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 75 ಕೆರೆ ಪುನಶ್ಚೇತನಗೊಂಡರೆ ಬೆಳ್ತಂಗಡಿ ತಾಲೂಕಿನಲ್ಲಿ 18 ಕೆರೆಗಳನ್ನು ಆಯ್ಕೆ ಮಾಡಲಾಗಿದೆ.
ಗಣ್ಯರಿಗೆ ಆಹ್ವಾನ
ತಾಲೂಕಿನಲ್ಲಿ ಈಗಾಗಲೇ ಆಯ್ಕೆ ಮಾಡಿರುವ 18 ಕೆರೆಗಳ ಪುನಶ್ಚೇತನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಮಧ್ಯೆ ಆ. 15ರ ಸ್ವಾತಂತ್ರ್ಯದಿನಾಚರಣೆ ನಡೆಸಲು 3 ಕೆರೆಗಳನ್ನು ಆಯ್ಕೆ ಮಾಡಲಾಗಿದೆ. ಮಡಂತ್ಯಾರು ಗ್ರಾ.ಪಂ. ಹೊಂದಿಕೊಂಡಿರುವ ಪಾರೆಂಕಿ ಗ್ರಾಮದ 0.65 ಎಕ್ರೆಯ ಅಂಕರಕಟ್ಟೆ ಕೆರೆ, ಅಳದಂಗಡಿ ಗ್ರಾಮದ 1.06 ಎಕ್ರೆಯಲ್ಲಿ ವ್ಯಾಪಿಸಿರುವ ಪಿಲ್ಯ ಗುತ್ತು ಕೆರೆ ಹಾಗೂ ಅಂಡಿಂಜೆ ಗ್ರಾಮದಲ್ಲಿ 2 ಎಕ್ರೆ ದೊಡ್ಡದಾದ ಕಂಚಕೆರೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಯಲಿದೆ. ಸಂಬಂಧಪಟ್ಟ ಗ್ರಾ.ಪಂ. ವ್ಯಾಪ್ತಿಯ ನಿವೃತ್ತ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ಪದ್ಮಶ್ರೀ, ಪದ್ಮ ವಿಭೂಷಣ ಪಡೆದ ಗಣ್ಯರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಣೆಗೆ ಮುಂದಾಗಿದೆ.
ಅಭಿವೃದ್ಧಿಗೆ ಅನುದಾನ
ಈಗಾಗಲೇ ಆಯ್ಕೆಯಾಗಿರುವ ಕೆರೆಗಳ ಪುನಶ್ಚೇತನ ಕಾರ್ಯಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಮಳೆ ಹೆಚ್ಚಿದ್ದರಿಂದ ಕಾಮಗಾರಿ ವಿಳಂಬವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಸೇರಿ ಸ್ಥಳೀಯ ಆರ್ಥಿಕ ಮೂಲವನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ. ಮುಖ್ಯಮಂತ್ರಿ ಬಜೆಟ್ ಘೋಷಣೆಯಲ್ಲಿ ಕೆರೆಗೆ ತಲಾ 10 ಲಕ್ಷ ರೂ.ನಂತೆ ಪಂಚಾಯತ್ರಾಜ್ ಎಂಜಿನಿಯರ್ ಇಲಾಖೆಯಡಿ ಅನುದಾನ ಲಭ್ಯವಾಗಲಿದೆ. ಪೂರಕವಾಗಿ 15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಿ ಮಾದರಿ ಕೆರೆಯನ್ನಾಗಿ ರೂಪಿಸುವುದು ಇದರ ಉದ್ದೇಶ.
ಜಾಗೃತಿಗಾಗಿ ಯೋಜನೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ನೀರಿಂಗಿಸುವಿಕೆ ಹಾಗೂ ನೀರಿನ ಬಳಕೆಯ ಜಾಗೃತಿಗಾಗಿ ಅಮೃತ ಸರೋವರ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ಭವಿಷ್ಯದಲ್ಲಿ ಈ ಕೆರೆಗಳನ್ನು ಒಂದು ಮಾದರಿ ರೂಪದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬೆಳ್ತಂಗಡಿ ತಾಲೂಕಿನಲ್ಲಿ 18 ಕೆರೆ ಗಳನ್ನು ಗುರುತಿಸಿದ್ದು, ಆ. 15ರಂದು ಮೂರು ಕೆರೆಗಳ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ಧ್ವಜಾ ರೋಹಣ ನಡೆಯಲಿದೆ. –ಕುಸುಮಾಧರ್ ಬಿ., ತಾ.ಪಂ. ಇಒ, ಬೆಳ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ