ಮಚ್ಚಿನ ಕೋಡ್ಯೇಲು ಕೆರೆ: ಹೂಳೆತ್ತಿದರೆ ಜನೋಪಯೋಗಿ


Team Udayavani, Jan 6, 2018, 2:05 PM IST

6-Jan-13.jpg

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಕೋಡ್ಯೇಲು ಎಂಬಲ್ಲಿ ಒಂದು ಎಕರೆಯಷ್ಟು ವಿಸ್ತೀರ್ಣವಿರುವ ಕೋಡ್ಯೇಲು ಕೆರೆ ಅಭಿವೃದ್ಧಿ ಕಾಣದೆ ಸೊರಗಿದೆ. ಬಳ್ಳಮಂಜದಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿ ಕಾಡುಗಳ ನಡುವಿರುವ ಈ ಕೆರೆಯಲ್ಲಿ ಯಥೇತ್ಛ ಶುದ್ಧ ನೀರಿದ್ದರೂ ಹೂಳೆತ್ತುವ ಕಾರ್ಯ ನಡೆದಿಲ್ಲ.

50 ವರ್ಷಗಳಿಂದ ಹೂಳೆತ್ತಿಲ್ಲ
ಕೆರೆಯ ಹೂಳೆತ್ತದೆ ಸುಮಾರು 50 ವರ್ಷಗಳೇ ಸಂದಿವೆ. ಮಚ್ಚಿನ ಪೇಟೆಯಿಂದ ದೂರದಲ್ಲಿ ಕಾಡುದಾರಿಯಲ್ಲಿರುವುದರಿಂದ ಕೆರೆಯ ಅಭಿವೃದ್ಧಿ ನೇಪಥ್ಯಕ್ಕೆ ಸರಿದಿದೆ. ನೀರಿನ ಸಮಸ್ಯೆ ಅನೇಕ ಎದುರಾದರೂ ಕೆರೆಯ ದುರಸ್ತಿ ಮಾಡುವ ವಿಚಾರದ ಬಗ್ಗೆ ಯಾರೂ ಮುಂದಾಳತ್ವ ವಹಿಸಿಕೊಂಡಿರಲಿಲ್ಲ. ಹೀಗಾಗಿ, ನೀರಿದ್ದರೂ ಅದು ಬಳಕೆಗೆ ಸಿಗುತ್ತಿಲ್ಲ. ಈ ಬಾರಿ ಕೆರೆಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಚ್ಚಿನ ಗ್ರಾ.ಪಂ. ಸ್ವಲ್ಪ ಉಮೇದು ತೋರಿಸಿದ್ದು, ಕಾಮಗಾರಿ ಪ್ರಾರಂಭಿಸುವ ಬಗ್ಗೆ ಯೋಜನೆ ರೂಪಿಸುತ್ತಿದೆ.

ಕೋಡ್ಯೇಲು ಕೆರೆಯಲ್ಲಿ ನೀರಿಗೆ ಕೊರತೆ ಇಲ್ಲ. ಆದರೆ ಬೋರ್‌ವೆಲ್‌ಗ‌ಳ ಭರಾಟೆಯ ನಡುವೆ ಕೆರೆಯ ಅಭಿವೃದ್ಧಿ ಮರೀಚಿಕೆಯಾಗಿದೆ. ಕೆರೆಯ ನೀರನ್ನು ಯಾರೊಬ್ಬರೂ ಬಳಕೆ ಮಾಡದಿರುವ ಕಾರಣ ಉಪಯೋಗಿಸಲು ಯೋಗ್ಯವಾದರೂ ಪಾಳುಬಿದ್ದ ಸ್ಥಿತಿಯಲ್ಲಿದೆ. ಹತ್ತಿರದಲ್ಲಿ ಎರಡು – ಮೂರು ಮನೆಗಳಿದ್ದರೂ ಕೊಳವೆ ಬಾವಿಗಳಿರುವುದರಿಂದ ಕೆರೆಯ ನೀರು ನಿರುಪಯೋಗವಾಗಿದೆ.

ಮಚ್ಚಿನ ಗ್ರಾಮಕ್ಕೆ ಸಾಕಾಗುವಷ್ಟು ನೀರಿದೆ
ಪ್ರಸ್ತುತ ಮಚ್ಚಿನ ಗ್ರಾಮಕ್ಕೆ ಬೋರ್‌ವೆಲ್‌ ನೀರೇ ಗತಿ. ಬೇಸಗೆಯಲ್ಲಿ ಬಂಗೇರಕಟ್ಟೆ ಹಾಗೂ ಮಚ್ಚಿನದಲ್ಲಿರುವ ಕೊಳವೆ ಬಾವಿಯ ನೀರನ್ನು ಗ್ರಾ.ಪಂ. ಬಳಸುತ್ತಿದೆಯಾದರೂ ವರುಷದಿಂದ ವರುಷಕ್ಕೆ ಕೆಲ ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕುಸಿದು ನೀರಿನ ಸಮಸ್ಯೆಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಕೋಡ್ಯೇಲು ಕೆರೆ ಅಭಿವೃದ್ಧಿಪಡಿಸಿದರೆ ಗ್ರಾಮಕ್ಕೆ ಬೇಕಾಗುವಷ್ಟು ನೀರು ದೊರೆಯುತ್ತದೆ.
ಚಂದ್ರಶೇಖರ್‌ ಎಸ್‌. ಅಂತರ

ಬಂಗೇರಕಟ್ಟೆಕೆರೆ ಅಭಿವೃದ್ಧಿ ಪ್ರೇರಣೆ
ಬಂಗೇರಕಟ್ಟೆಯಲ್ಲಿ ಪ್ರಾರಂಭಗೊಂಡಿರುವ ಬಂಗೇರಕಟ್ಟೆ ಕೆರೆ ಉಳಿಸಿ ಅಭಿಯಾನ ಹತ್ತಿರದ ಮಚ್ಚಿನ ಗ್ರಾಮಕ್ಕೂ ಪ್ರೇರಣೆ ನೀಡಿ ಅಲ್ಲಿನ ಕೆರೆಯ ಅಭಿವೃದ್ಧಿಗೆ ಅಡಿಗಲ್ಲು ಹಾಕಿದೆ. ಈಗಾಗಲೇ ಗಡಿ ಗುರುತು ಕಾರ್ಯದ ಬಗ್ಗೆ ತಹಸೀಲ್ದಾರ್‌ ಅವರಿಗೆ ವಿನಂತಿಸಲಾಗಿದೆ. ಬಂಗೇರಕಟ್ಟೆ ಕೆರೆಯ ಜತೆ-ಜತೆಗೂ ಕೋಡ್ಯೇಲು ಕೆರೆಯ ಅಭಿವೃದ್ಧಿ ಆಗಬೇಕೆಂಬುದು ಮಚ್ಚಿನ ಗ್ರಾಮಸ್ಥರ ಒತ್ತಾಸೆ.
ಧರ್ಮಸ್ಥಳ ಯೋಜನೆ ಸಹಕಾರ
ಕೆರೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಥಮ ಹಂತದ ಮಾತುಕತೆ ಮಚ್ಚಿನ ಗ್ರಾ.ಪಂ.ನಲ್ಲಿ ಆಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಕೇಳುವ ಬಗ್ಗೆ ನಿರ್ಣಯಿಸಲಾಗಿದೆ. ಶೀಘ್ರದಲ್ಲಿ ಸಮಿತಿ ರಚಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಡಾ|ಹೆಗ್ಗಡೆ ಅವರಲ್ಲಿ ಕೆರೆ ಅಭಿವೃದ್ಧಿಗೆ ಸಹಕಾರ ನೀಡಲು ಮನವಿ ಸಲ್ಲಿಕೆ ಮಾಡಲಿದೆ.

ಕೋಡ್ಯೇಲು ಕೆರೆ ಅಭಿವೃದ್ಧಿ ವಿಚಾರವಾಗಿ ಗ್ರಾ.ಪಂ. ಸಭೆಯಲ್ಲಿ ಪ್ರಸ್ತಾವಿಸಲಾಗಿದೆ. ಸಮಿತಿ ರಚನೆ ಕಾರ್ಯ ಶೀಘ್ರ ನಡೆಯಲಿದೆ. ಕೆರೆಯ ಹೂಳೆತ್ತ ದಿದ್ದರೂ ಪ್ರಸ್ತುತ ಎಪ್ರಿಲ್‌ ಅಂತ್ಯದವರೆಗೂ ಕೆರೆಯಲ್ಲಿ ನೀರು ಬತ್ತುವುದಿಲ್ಲ. ಹಾಗಾಗಿ ದುರಸ್ತಿಗೊಳಿಸಿದರೆ ಬೇಸಗೆಗೆ ಮಚ್ಚಿನ ಗ್ರಾಮಕ್ಕೆ ಬೇಕಾಗುವಷ್ಟು ನೀರು ಸಿಗಲಿದೆ. ಈ ನಿಟ್ಟಿನಲ್ಲಿ ಗ್ರಾ.ಪಂ. ಕೆರೆ ಅಭಿವೃದ್ಧಿಗೆ ಮುಂದಾಗಿದೆ.
 – ಹರ್ಷಲತಾ
   ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ 

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.