ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ; ಕಾಡುತ್ತಿದೆ ಶಿಕ್ಷಕರ ಕೊರತೆ


Team Udayavani, Sep 14, 2021, 3:40 AM IST

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ; ಕಾಡುತ್ತಿದೆ ಶಿಕ್ಷಕರ ಕೊರತೆ

ಕಾವೂರು: ಪಂಜಿಮೊಗರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಲು 2017ರಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದ ಬಳಿಕ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ಮಕ್ಕಳ ಸಂಖ್ಯೆಯೂ ಹೆಚ್ಚಳವಾಯಿತು. ಆದರೆ ಶಿಕ್ಷಕರ ಕೊರತೆ ಕಾಡುತ್ತಿದೆ.

ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆ ಯಿಂದ ಬಡವಾದಂತೆ ಕಂಡರೂ ಊರವರ, ಗ್ರಾಮಸ್ಥರ, ದಾನಿಗಳ ನೆರವಿನೊಂದಿಗೆ ಸತತ ಪ್ರಯತ್ನದಿಂದ ಕೊರೊನಾ ಅವಧಿಯಲ್ಲಿ ಮತ್ತೆ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕ ಕಾಲನಿ ಸುತ್ತಮುತ್ತ ಇರುವುದರಿಂದ ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಇದು ಸಕಾಲವಾಗಿದೆ. ಇದೀಗ 1 ಮತ್ತು 2ನೇ ತರಗತಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆಗೆ ಅನುಮತಿ ಲಭಿಸಿದೆ. ಪ್ರಾಥಮಿಕ ಪೂರ್ವ ತರಗತಿಯನ್ನು ಸ್ಮಾರ್ಟ್‌ ಕ್ಲಾಸ್‌ನ ಕೊಠಡಿ ನಿರ್ಮಿಸಲಾಗಿದೆ. ಆಟದ ಮೈದಾನವಿದ್ದು, ಕ್ರೀಡೆಗಳಲ್ಲಿಯೂ ಪರಿಣಿತಿ ಪಡೆಯಲು ಎಲ್ಲ ಅವಕಾಶವಿದೆ.

ಸರಕಾರಿ ಶಾಲೆ ಎಂದಾಕ್ಷಣ ಕೆಲವು ವಿದ್ಯಾರ್ಥಿ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕು ತ್ತಾರೆ. ಆದರೆ ಈ ಸರಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳನ್ನು ಮೀರಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಇದರಿಂದ ಇಲ್ಲಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಾ ಹೋಗುತ್ತಿದೆ. ಕೊರೊನಾ ಬಳಿಕ ಮಧ್ಯಮ ವರ್ಗ, ಬಡ ವರ್ಗ ಕೆಲವೊಂದು ಕುಟುಂಬಗಳು ಶುಲ್ಕ ಪಾವತಿಗೆ ಸಮಸ್ಯೆಯಾಗಿ ಆಂಗ್ಲ ಮಾಧ್ಯಮ ಶಾಲೆಯಿಂದ ಈ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಲು ಮುಂದಾಗಿದ್ದಾರೆ ಇದೊಂದು ಉತ್ತಮ ಅರಂಭ ಎನ್ನುತ್ತಾರೆ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಪಂಜಿಮೊಗರು.

2020ರಲ್ಲಿ ಸುಮಾರು 250 ಇದ್ದ ಮಕ್ಕಳ ಸಂಖ್ಯೆ, 2021ರಲ್ಲಿ 285ರ ಗಡಿ ದಾಟಿದೆ. ಶೈಕ್ಷಣಿಕ ವರ್ಷದಲ್ಲಿ ಎಲ್‌ಕೆಜಿ ಗೆ 90 ಮಕ್ಕಳು ಈ ಶಾಲೆಯಲ್ಲಿ ಕಲಿಯಲು ಸೇರ್ಪಡೆಯಾಗಿದ್ದಾರೆ. 1ನೇ ತರಗತಿಗೆ ಒಟ್ಟು ಮಕ್ಕಳ ಸೇರ್ಪಡೆ 71.

ಶಿಕ್ಷಕರ ಕೊರತೆಯೇ ಇಲ್ಲಿರುವ ಸಮಸ್ಯೆ:

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದ ಸಂದರ್ಭ ಶಿಕ್ಷಕರನ್ನು ಸರಕಾರ ವರ್ಗಾಯಿಸಿತ್ತು. ಇದೀಗ ಮತ್ತೆ ಏರಿಕೆ ಆಗಿರುವುದರಿಂದ ಶಿಕ್ಷಕರ ನೇಮಕವಾಗ ಬೇಕಿದೆ. 7 ಸರಕಾರಿ ಶಿಕ್ಷಕರು ಇದ್ದಾರೆ. 4 ಮಂದಿ ಶಿಕ್ಷಕರನ್ನು ನೇಮಿಸಿ ಸರಕಾರ ಆಡಳಿತ ಮಂಡಳಿಗೆ  ನೆರವು ನೀಡಬೇಕಿದೆ. ಕೊಠಡಿಗಳು ಈಗಿನ ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ 4 ಹೆಚ್ಚುವರಿ ಕೊಠಡಿಗಳು ಬೇಕಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಗತ್ಯವಾಗಿದೆ.

ಪೀಠೊಪಕರಣ, ಶೌಚಾಲಯ ಸಮಸ್ಯೆ:

ಶಾಲೆಯಲ್ಲಿ ಈಗಿರುವ ಮಕ್ಕಳ ಸಂಖ್ಯೆಗನು ಗುಣವಾಗಿ ಹೆಚ್ಚಿನ ಪೀಠೊಪಕರಣಗಳನ್ನು ಒದಗಿಸಬೇಕಾಗಿದೆ. ಸೋರುತ್ತಿರುವ ಕಟ್ಟಡಗಳ ದುರಸ್ತಿ, ಆವರಣ ಗೋಡೆಯ ದುರಸ್ತಿ ಆಗಬೇಕಿದೆ.

ಪಂಜಿಮೊಗರು ಸರಕಾರಿ ಹಿರಿಯ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಬೋಧನೆ ಆರಂಭಿಸಿರುವುದರಿಂದ ಮಕ್ಕಳ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. ಆದ್ದರಿಂದ ಶಿಕ್ಷಕರ ನೇಮಕ, ಸೋರುತ್ತಿರುವ ಕಟ್ಟಡದ ದುರಸ್ತಿ, ಕೊಠಡಿ ನಿರ್ಮಾಣ, ಮೂಲಸೌಕರ್ಯ ಒದಗಿಸಬೇಕಿದೆ. ಸ್ಥಳೀಯ ಶಾಸಕರು ಶಾಲೆಯನ್ನು ದತ್ತು ತೆಗೆದುಕೊಂಡು ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಮನಪಾ ಸದಸ್ಯರು, ಶಾಲಾ ಮೇಲುಸ್ತುವಾರಿ ಸಮಿತಿ, ಪಿಟಿಎ ಸಹ ಶಾಲೆಯ ಸರ್ವಾಂಗೀಣ ಪ್ರಗತಿಗೆ ಕೈ ಜೋಡಿಸಿದೆ. -ಚಂದ್ರಾವತಿ, ಮುಖ್ಯೋಪಾಧ್ಯಾಯಿನಿ

-ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.