ಹೊಸ ಮನೆಗಾಗಿ ಕನವರಿಸುತ್ತಿರುವ ವೃದ್ಧೆ


Team Udayavani, Sep 18, 2017, 10:05 AM IST

18-mng-city-1.jpg

ಕಿನ್ನಿಗೋಳಿ: ಸುಮಾರು 40 ವರ್ಷಗಳಿಂದ ಕಿನ್ನಿಗೋಳಿ ಮುಖ್ಯ ರಸ್ತೆಯ ರಾಜಾಂಗಣ ಮುಂಭಾಗದಲ್ಲಿ (ಅಂದಿನ ಅಶೋಕ ಚಿತ್ರಮಂದಿರ) ಪ್ಲಾಸ್ಟಿಕ್‌ ಛಾವಣಿಯಿರುವ ಸುಬ್ಬಮ್ಮನ ಚಿಕ್ಕ ಗುಡಿಸಲು ಕುಸಿದು ಬೀಳುವ ಸ್ಥಿತಿಯಲ್ಲಿದೆ.

ಮತದಾರರ ಗುರುತು ಚೀಟಿ ಇದೆ, ಆಧಾರ್‌ ಕಾರ್ಡ್‌ ಕೂಡ ಮಾಡಿಸಿದ್ದಾರೆ. ಈ “ಮನೆ’ಗೆ ಸಂಖ್ಯೆಯೂ ಇದೆ, ಪಡಿತರ ಚೀಟಿ ಇದೆ, ವೃದ್ಧಾಪ್ಯ ವೇತನವೂ ಬರುತ್ತದೆ. ಆದರೆ, ಪುಟ್ಟದೊಂದು ಹೊಸ ಮನೆ ಕಟ್ಟಿಕೊಳ್ಳುವ ಅವರ ಕನಸು ನನಸಾಗಲೇ ಇಲ್ಲ. ಸುಮಾರು 45 ವರ್ಷಗಳ ಹಿಂದೆ ದೂರದ ತಮಿಳುನಾಡಿನಿಂದ ಕೆಲಸ ಅರಸಿ ಮಂಗಳೂರಿಗೆ ಬಂದಿದ್ದ ಸುಬ್ಬಮ್ಮ ಹಾಗೂ ಪೊನ್ನಯ್ಯ ದಂಪತಿ, ಬಂಗಾರದ ಅಂಗಡಿಯವರ ಅಂಗಳದ ಕಸದಿಂದ ಬಂಗಾರ ಆರಿಸುವ ಕುಲ ಕಸುಬು ಮಾಡುತ್ತಿದ್ದರು. ಕಿನ್ನಿಗೋಳಿ ರಾಜಾಂಗಣದ ಮುಂಭಾಗದಲ್ಲಿ ಡೇರೆ ಹಾಕಿ ಠಿಕಾಣಿ ಹೂಡಿದ್ದರು. ಸಂಸಾರ ಶುರುವಾಯಿತು. ಸುಮಾರು 15 ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡ ಸುಬ್ಬಮ್ಮನಿಂದ ಮಕ್ಕಳೂ ದೂರವಾದರು. ಈಗ ಆಕೆಗೆ ಈ ಡೇರೆಯೇ ಸರ್ವಸ್ವ.

ಮನವಿ ಮಾಡಿದರೂ ಪ್ರಯೋಜನ ಇಲ್ಲ
ಇಂದಿರಾ ಗಾಂಧಿ, ರಾಮಕೃಷ್ಣ ಹೆಗಡೆ ಕಾಲದಿಂದ ಚುನಾವಣೆಯಲ್ಲಿ ಮತ ಕೇಳಲು ಬರುವವರೆಲ್ಲ ಮನೆ ಕಟ್ಟಿಕೊಡುವುದಾಗಿ ಹೇಳುತ್ತಿದ್ದರೂ ಈವರೆಗೂ ಈ ವೃದ್ಧೆಯ ನೋವಿಗೆ ಸ್ಪಂದಿಸಿದವರಿಲ್ಲ.  ಮನೆಯ ಬಗ್ಗೆ ಮಂಡಲ   ಪಂಚಾ ಯತ್‌ ಇದ್ದ ಸಂದರ್ಭದಿಂದಲೂ ಮನವಿ ಮಾಡಲಾಗಿದೆ. ಪಕ್ಕದವರು ಜಾಗದ ವಿಷಯದಲ್ಲಿ ತಕರಾರು ತೆಗೆದಿದ್ದರಿಂದ ನ್ಯಾಯಾಲಯಕ್ಕೆ ಅಲೆದಾಡಿ ಅವರ ಮುಪ್ಪು ಇನ್ನಷ್ಟು ಹೆಚ್ಚಿದೆ. ಈಗ ಗುಡಿಸಲಿಗೆ ಹೊದಿಸಿರುವ ಪ್ಲಾಸ್ಟಿಕ್‌ ಹಾಳೆ ಹರಿದಿದೆ. ಹೊಸ ಹಾಳೆ ಹಾಕಿಸುವಂತೆ ಹೇಳಿ ಪಂಚಾಯತ್‌ನಿಂದ ಹಣ ಕೊಟ್ಟು ಒಂದು ತಿಂಗಳು ಕಳೆಯಿತು. 
ಪ್ಲಾಸ್ಟಿಕ್‌ ಹೊದಿಸಲು ಜನ ಸಿಗದ ಕಾರಣ ಮಳೆ ನೀರೆಲ್ಲ ಗುಡಿಸಲಿನೊಳಗೆ ಸೋರುತ್ತಿದೆ. ಇರುವ ಈ ಮುರುಕಲು ಆಸರೆಯೂ ಯಾವಾಗ ಕುಸಿದು ಬೀಳುವುದೋ ಎಂಬ ಆತಂಕದಲ್ಲಿದ್ದಾರೆ ಸುಬ್ಬಮ್ಮ.

ಮನೆ ಕೊಡಲು ವ್ಯವಸ್ಥೆ
ಪ್ರಸ್ತುತ ಸುಬ್ಬಮ್ಮ ವಾಸ ಮಾಡುತ್ತಿರುವ ಸ್ಥಳ ರಾಜ್ಯ ಹೆದ್ದಾರಿ ವ್ಯಾಪ್ತಿಗೆ ಬರುತ್ತಿದ್ದು, ಅಲ್ಲಿ ಮನೆ ಕಟ್ಟಲು ಅವಕಾಶ ನೀಡುವಂತಿಲ್ಲ. ಅದಕ್ಕಾಗಿ ಗ್ರಾ.ಪಂ. ವ್ಯಾಪ್ತಿಯ ಕೆಮ್ಮಡೆಯಲ್ಲಿ ಸರಕಾರಿ ಜಾಗವಿದ್ದು, ಅದನ್ನು ನಿವೇಶನ ರಹಿತರಿಗೆ ಕಾದಿರಿಸಲಾಗಿದೆ. ಅದರಲ್ಲಿ ಆದ್ಯತೆಯ ಮೇರೆಗೆ ಮನೆ ಕೊಡಲು ವ್ಯವಸ್ಥೆ ಮಾಡಲಾಗುವುದು.
ರಮ್ಯಾ,  ಪಿಡಿಒ, ಮೆನ್ನಬೆಟ್ಟು ಗ್ರಾ.ಪಂ.

ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.