ಧರ್ಮಸ್ಥಳ: ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ, ವಿಜೇತರಿಗೆ ಪುರಸ್ಕಾರ ವಿತರಣೆ
ಮನಸೆಳೆದ ಕುಂಚ-ಗಾನ ನೃತ್ಯ ವೈಭವ
Team Udayavani, Feb 13, 2021, 12:25 PM IST
ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಂತೆ ಆಯೋಜಿಸಲಾದ 18ನೇ ವರ್ಷದ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಚಾಲನೆ ದೊರೆಯಿತು.
ಬೆಂಗಳೂರಿನ ಚಿತ್ರ ಕಲಾವಿದ ಬಾಗೂರು ಮಾರ್ಕಂಡೇಯ ಅವರಿಂದ ಕುಂಚ ಹಾಗೂ ಮಂಗಳೂರು ಸನಾತನ ನಾಟ್ಯಾಲಯದಿಂದ ಗಾನ-ನೃತ್ಯ ವೈಭವ ಕಾರ್ಯಕ್ರಮ ನೆರೆದವರ ಕರತಾಡನಕ್ಕೆ ಸಾಕ್ಷಿಯಾಯಿತು.
ಇದನ್ನೂ ಓದಿ:ಪ್ರೇಮಿಗಳ ದಿನದಂದು ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಕ್ರಮ: ಮಂಗಳೂರು ಡಿಸಿಪಿ
ಖ್ಯಾತ ಚಲನಚಿತ್ರ ನಟ ಬೆಂಗಳೂರಿನ ಡಾ.ಶ್ರೀಧರ್ ಪುರಸ್ಕಾರ ನೀಡಿ ವಿಜೇತರನ್ನು ಗೌರವಿಸಲು ಆಗಮಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದರು.
ಅಂಚೆ-ಕುಂಚ ಸ್ಪರ್ಧೆ: ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ಬಿಡಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ – ಹೀಗೆ ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆ. ಕಳೆದ 18 ವರ್ಷಗಳಲ್ಲಿ 2,22,950 ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ:ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು
ಶ್ರೀ ಕ್ಷೇ.ಧ. ಶಾಂತಿವನ ಟ್ರಸ್ಟ್ ಟ್ರಸ್ಟಿ ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್