Anganwadi; ಘೋಷಣೆಯಾದರೂ ಕೈಸೇರದ “ಗ್ರಾಚುಯಿಟಿ’!

ಸರಕಾರ ತಿಳಿಸಿದರೂ ಅಂಗನವಾಡಿ ನೌಕರರಿಗೆ ಇನ್ನೂ ಸಿಗದ "ಉಪಧನ'

Team Udayavani, Oct 15, 2023, 12:19 AM IST

1-assa–d

ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಜನವರಿಯಲ್ಲಿ ನಡೆಸಿದ್ದ ಪ್ರತಿಭಟನೆಗೆ ಮಣಿದು ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದ ಗ್ರಾಚುಯಿಟಿ (ಉಪಧನ) ನೀಡಲು ಸರಕಾರ ಒಪ್ಪಿಗೆ ಸೂಚಿಸಿತ್ತು. ಬಳಿಕ ಬಜೆಟ್‌ನಲ್ಲೂ ಈ ಬಗ್ಗೆ ಪ್ರಸ್ತಾವಿಸಿ ಸುಮಾರು 40 ಕೋ.ರೂ. ಮೀಸಲಿರಿಸಲಾಗಿತ್ತು. ಆದರೆ ಯಾವೊಬ್ಬ ನಿವೃತ್ತರಿಗೂ ಇಲ್ಲಿಯವರೆಗೆ ಗ್ರಾಚುಯಿಟಿ ಪಾವತಿಯಾಗಿಲ್ಲ.

ಎಲ್ಲ ಅರ್ಹ ಅಂಗ ನವಾಡಿ ಕಾರ್ಯ ಕರ್ತೆಯರು ಮತ್ತು ಸಹಾ ಯಕಿಯರಿಗೆ ಗ್ರಾಚುಯಿಟಿ ನೀಡುವ ಬಗ್ಗೆ 2022ರ ಎಪ್ರಿಲ್‌ 25ರಂದು ಸುಪ್ರೀಂ ಕೋರ್ಟ್‌ ಗುಜರಾತ್‌ ಸರಕಾರಕ್ಕೆ ಆದೇಶ ನೀಡಿತ್ತು. ಗ್ರಾಚುಯಿಟಿ ಕಾಯ್ದೆಯಲ್ಲಿ ನಮೂದಿಸಿರುವಂತೆ ವಾರ್ಷಿಕ ಶೇ. 10ರ ಸರಳ ಬಡ್ಡಿಯನ್ನು ನೀಡುವಂತೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ನ ಈ ಆದೇಶದಂತೆ ರಾಜ್ಯದಲ್ಲಿಯೂ ಗ್ರಾಚುಯಿಟಿ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಜನವರಿಯಲ್ಲಿ 10 ದಿನ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೆ ಮಣಿದ ಆಗಿನ ಸರಕಾರ 2023-24ನೇ ಸಾಲಿನಿಂದ ನಿವೃತ್ತರಾಗುವವರಿಗೆ ಗ್ರಾಚುಯಿಟಿಗೆ ಒಪ್ಪಿಗೆ ನೀಡಿತ್ತು. ಬಳಿಕ ಬಜೆಟ್‌ನಲ್ಲಿ ಜಾರಿಗೊಳಿಸಿ 2023ರ ಎಪ್ರಿಲ್‌ನಿಂದ ಯಾರೆಲ್ಲ ನಿವೃತ್ತರಾಗುತ್ತಾರೆ ಅವರಿಗೆ ಗ್ರಾಚುಯಿಟಿ ನೀಡುವುದಾಗಿ ಘೋಷಿಸಿತ್ತು. ಸದ್ಯ ಸರಕಾರದ ಮಟ್ಟದಲ್ಲಿ ಹೆಚ್ಚಿನ ಬೆಳವಣಿಗೆಯಾದಂತಿಲ್ಲ. ಜಿಲ್ಲಾ ಉಪನಿರ್ದೇಶಕರಿಗೆ ಗ್ರಾಚುಯಿಟಿ ಕುರಿತಂತೆ ಯಾರಾದರೂ ಅರ್ಜಿ ನೀಡಿದರೆ ತೆಗೆದುಕೊಳ್ಳುವಂತೆ ಮಾತ್ರ ಸೂಚನೆ ನೀಡಿದೆ. ಎಷ್ಟು ಮಂದಿ ನಿವೃತ್ತರಿದ್ದಾರೆ ಎನ್ನುವ ಮಾಹಿತಿಯೂ ಇಲಾಖೆಯಲ್ಲಿ ಇಲ್ಲ. ಅಂದಾಜಿನ ಪ್ರಕಾರ ಉಭಯ ಜಿಲ್ಲೆಗಳಲ್ಲಿ ಸುಮಾರು 75-80 ಮಂದಿ ನಿವೃತ್ತಿಯಾಗಿದ್ದಾರೆ.

ಅಂಗನವಾಡಿ ನೌಕರರಿಗೆ ನಿವೃತ್ತಿ ಅಧಿಕೃತವಾಗಿ ಜಾರಿಗೆ ಬಂದಿರುವುದು 2011ರಲ್ಲಿ. 60 ವರ್ಷಕ್ಕೆ ನಿವೃತ್ತರಾಗುತ್ತಾರೆ. ತಿಂಗಳ ಗೌರವಧನ ಪಡೆಯುತ್ತಿದ್ದವರಿಗೆ ನಿವೃತ್ತಿಯ ಬಳಿಕ ಏಕಾಏಕಿ ಆರ್ಥಿಕ ಮೂಲವೇ ಇಲ್ಲದಂತಾಗುತ್ತದೆ. ನಿತ್ಯ ಖರ್ಚು, ವೈದ್ಯಕೀಯ ವೆಚ್ಚ ಇತ್ಯಾದಿಗಳಿಗೆ ಮನೆಯವರನ್ನು ಅವಲಂಬಿಸಬೇಕಾಗುತ್ತದೆ. ಗ್ರಾಚುಯಿಟಿ ಸಿಕ್ಕಿದರೆ ಒಂದಷ್ಟು ಕಾಲ ತಮ್ಮ ಖರ್ಚು ವೆಚ್ಚಗಳನ್ನು ತಾವೇ ನೋಡಿಕೊಳ್ಳಲು ಸಾಧ್ಯವಾಗಲಿದೆ. ಈ ನಡುವೆ ಸರಕಾರ 2023-24ನೇ ಸಾಲಿನಿಂದ ಗ್ರಾಚುಯಿಟಿ ನೀಡುವುದಾಗಿ ತಿಳಿಸಿದ್ದು, 2023ರ ಮಾರ್ಚ್‌ ತಿಂಗಳಿನಲ್ಲಿ ನಿವೃತ್ತರಾದವರು ಏನು ತಪ್ಪು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಾರೆ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯ ಸಂಘದ ಕಾರ್ಯದರ್ಶಿ ಸುಶೀಲಾ ನಾಡ.

ಏನಿದು ಗ್ರಾಚುಯಿಟಿ?
ತಮ್ಮಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಉದ್ಯೋಗದಾತ ನೀಡುವ ಹಣಕಾಸಿನ ಅಂಶವಾಗಿದೆ. ಗ್ರಾಚುಯಿಟಿ ಕಾಯ್ದೆ 1972ರ ಪ್ರಕಾರವೇ ಇದನ್ನು ನೀಡಲಾಗುತ್ತದೆ. ಉದ್ಯೋಗಿ ಪಡೆಯುವ ಸಂಬಳದ ಒಂದು ಭಾಗವಾಗಿದ್ದು, ನಿವೃತ್ತಿಗೆ ಸಹಾಯ ಮಾಡಲು ವಿನ್ಯಾಸ ಮಾಡಲಾದ ಲಾಭದ ಯೋಜನೆಯಾಗಿದೆ. ಕನಿಷ್ಠ 5 ವರ್ಷಗಳ ಕಾಲ ಒಂದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಉದ್ಯೋಗವನ್ನು ತೊರೆದಾಗಲೂ ಗ್ರಾಚುಯಿಟಿ ಪಾವತಿಸಬೇಕು.

*ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗ್ರಾಚುಯಿಟಿ ಸೌಲಭ್ಯ ಒದಗಿಸುವ ಸಂಬಂಧ ಸರಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ. ಆದರೆ 2011ರಿಂದ ನಿವೃತ್ತಿ ಅಧಿಕೃತವಾಗಿ ಜಾರಿಗೆ ಬಂದಿದ್ದು, ಅಂದಿನಿಂದಲೇ ಅನ್ವಯವಾಗುವಂತೆ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ಸರಕಾರ ಈ ನಿಟ್ಟಿನಲ್ಲಿ ಗಮನ ಹರಿಸಿ ಎಲ್ಲರಿಗೂ ಅನುಕೂಲವಾಗುವಂತೆ ನೋಡಿಕೊಳ್ಳಬೇಕು.
– ಜಯಲಕ್ಷ್ಮೀ ಬಿ.ಆರ್‌.,
ಗೌರವಾಧ್ಯಕ್ಷೆ, ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರ ಸಂಘ

 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.