ಅಂಗನವಾಡಿ ಕಾರ್ಯಕರ್ತೆಯರಿಂದ ಸಮಾಜ ತಿದ್ದುವ ಕೆಲಸ: ಶಾಸಕಿ


Team Udayavani, Apr 10, 2017, 3:29 PM IST

0904rjh4.jpg

ನಗರ : ಮಕ್ಕಳ ಎರಡನೇ ತಾಯಿ ಎಂಬ ಗೌರವವನ್ನು ಹೊಂದಿರುವ, ಸಮಾಜವನ್ನು ತಿದ್ದುವ ಕೆಲಸ ಮಾಡುವ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರು ಸಮಯಪ್ರಜ್ಞೆ, ಸ್ವತ್ಛತೆ, ಸಮಾಜಮುಖೀ ಚಿಂತನೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದು ಸಂಸದೀಯ ಕಾರ್ಯದರ್ಶಿ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾ ಯಕಿಯರ ಸಂಘ ಪುತ್ತೂರು ಇದರ ವತಿಯಿಂದ ಪುರಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ, ನಿವೃತ್ತರಿಗೆ ಸಮ್ಮಾನ, ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಮಕ್ಕಳನ್ನು ತಿದ್ದಿ ತೀಡುವವಳು ತಾಯಿ.ಮಹಾಭಾರತದಲ್ಲಿ ಶ್ರೀಕೃಷ್ಣನಿಗೆ ಯಶೋದಾ ತುಂಬಿದ ಸ್ಥಾನವನ್ನು ಇಂದು ಅಂಗನಧಿವಾಡಿ ಕಾರ್ಯಕರ್ತರು ನಿಭಾಯಿಸುತ್ತಿದ್ದಾರೆ. ಸಮಾಜದಲ್ಲಿ ನಾಯಕತ್ವ ಬೆಳೆ ಸುವ ಜವಾಧಿಬ್ದಾರಿ ನಿಭಾಧಿಯಿಸುವ ಜತೆಗೆ ಸಮಾಜಕ್ಕೆ ತಾಯಿಯಾಗಬೇಕು, ಮಹಿಳಾ ಶಕ್ತಿಯ ಧ್ವನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ನಿಷ್ಪತ್ತಿ ಪಾಲಿಸುತ್ತಿಲ್ಲ
ಅಂಗನವಾಡಿ ವ್ಯವಸ್ಥೆ ಆರಂಭವಾದ ಸಂದರ್ಭ ಕಾರ್ಯಕರ್ತರಿಗೆ 100 ರೂ., ಸಹಾಯಕಿಯರಿಗೆ 50 ರೂ. ಮಾತ್ರ ಗೌರವ ಧನ ಸಿಗುತ್ತಿತ್ತು. ಆಗ ಕೇಂದ್ರ ಮತ್ತು ರಾಜ್ಯದ 90:10 ನಿಷ್ಪತ್ತಿಯ ವೇತನ ನೀಡಲಾಗುತ್ತಿತ್ತು. ಆ ಬಳಿಕ ಅದನ್ನು 60;40 ನಿಷ್ಪತ್ತಿಗೆ ಬದಲಾಯಿಸಲಾಯಿತು. ಆದರೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಹೇಳಿದ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಸರಕಾರ 5,200 ರೂ. ನೀಡುವಾಗ ಕೇಂದ್ರ ಕನಿಷ್ಠ 6,000 ರೂ. ಆದರೂ ವೇತನ ಕೊಡಬೇಕಿತ್ತು ಎಂದು ಅಭಿಪ್ರಾಯಿಸಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ಅವರು ಮಾತನಾಡಿ, ಸಮಾಜದಲ್ಲಿ ಗುರುತಿಸಿಕೊಳ್ಳುವ ಗೌರವ ಕಾರ್ಯಕರ್ತೆಯರು ನಾವು. ಭಾರತೀಯ ಸಂಸ್ಕೃತಿ ಯನ್ನು ಅಳವಡಿಸಿಕೊಳ್ಳುವ ಮೂಲಕ ಮಕ್ಕಳನ್ನು ಬೆಳೆಸಬೇಕು ಎಂದರು. ಅಂಗನವಾಡಿ ಕಾರ್ಯ ಕರ್ತರಿಗೇ ಇರುವ ಬ್ಯಾಂಕ್‌ ವ್ಯವಸ್ಥೆಯನ್ನು ಬಳಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತಿಗೊಳ್ಳುತ್ತಿರುವ ಕೋಡಿಂಬಾಡಿ ವಲಯದ ರಾಧಾ ಹಾಗೂ ಮುಕ್ರಂಪಾಡಿ ವಲಯದ ಶಿವಮ್ಮ ಅವರನ್ನು ಶಾಸಕರು ಸಮ್ಮಾನಿಸಿದರು. ತಾಲೂಕು ಸಂಘದ ಉಪಾಧ್ಯಕ್ಷೆ ಶೋಭಾ, ಕಾರ್ಯದರ್ಶಿ ಜಯಲತಾ, ಜತೆ ಕಾರ್ಯದರ್ಶಿ ರಾಜರಾಜೇಶ್ವರಿ, ಕೋಶಾಧಿಕಾರಿ ಪುಷ್ಪಾವತಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷೆ ಮೀನಾಕ್ಷಿ ಸ್ವಾಗತಿಸಿ, ಶ್ರೀಲತಾ ವಂದಿಸಿದರು. ಪ್ರಶಸ್ತಿ ಪುರಸ್ಕೃತ ಕಾರ್ಯಕರ್ತೆ ಅರುಣಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಮಹಾಸಭೆ
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಪುತ್ತೂರು ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಸಿಡಿಪಿಒ ಶಾಂತಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮ ನಡೆಧಿಯಿತು. ನಿವೃತ್ತಿ ಹೊಂದಿದ ಒಟ್ಟು 9 ಮಂದಿ ಕಾರ್ಯಕರ್ತೆಯವರು ಹಾಗೂ ಸಹಾಯಕಿಯನ್ನು ಗೌರವಿಸಲಾಯಿತು.

ಸಿಎಂಗೆ ಬೇಸರ
ರಾಜ್ಯ ಸರಕಾರ 3 ವರ್ಷಗಳಲ್ಲಿ 500 ರೂ. ನಂತೆ ಹಾಗೂ ಈ ವರ್ಷ 1,000 ರೂ. ನಂತೆ ಗೌರವ ಧನ ಏರಿಕೆ ಮಾಡಿದೆ. ಹೋರಾಟ ಪ್ರತಿಯೊಬ್ಬರ ಹಕ್ಕು. ಆದರೆ ರಾಜಕೀಯ ಮಿಶ್ರಿತ ಹೋರಾಟ ಸರಿಯಲ್ಲ. ಯಾರ ವಿರುದ್ಧ ಹೋರಾಟ ನಡೆಸ ಬೇಕಿತ್ತೋ ಅಲ್ಲಿ ನಡೆಸಬೇಕಿತ್ತು. ಅದರಲ್ಲೂ ಪ್ರತಿಭಟನೆಯಲ್ಲಿ ಎಷ್ಟು ಅಂಗನವಾಡಿ ಕಾರ್ಯಕರ್ತೆಯರಿದ್ದರು ಎಂಬುದೂ ಪ್ರಶ್ನಾರ್ಹ ? ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸು ತ್ತಿದ್ದರೂ ಪ್ರತಿಭಟನೆ ನಡೆಸಿರುವುದು ಮುಖ್ಯಮಂತ್ರಿಗಳಿಗೆ ಬೇಸರ ತರಿಸಿದೆ ಎಂದು ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯೂ ಆಗಿರುವ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಆದರೆ ದ.ಕ. ಜಿಲ್ಲೆಯಲ್ಲಿ ಇಂತಹ ರಾಜಕೀಯ ಪ್ರೇರಿತ ಸಂಘಟನೆ ಇರದಿರುವುದು ಖುಷಿಯ ವಿಚಾರ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.