ಅಂಗನವಾಡಿ ಕಾರ್ಯಕರ್ತೆಯರಿಂದ ಸಮಾಜ ತಿದ್ದುವ ಕೆಲಸ: ಶಾಸಕಿ


Team Udayavani, Apr 10, 2017, 3:29 PM IST

0904rjh4.jpg

ನಗರ : ಮಕ್ಕಳ ಎರಡನೇ ತಾಯಿ ಎಂಬ ಗೌರವವನ್ನು ಹೊಂದಿರುವ, ಸಮಾಜವನ್ನು ತಿದ್ದುವ ಕೆಲಸ ಮಾಡುವ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರು ಸಮಯಪ್ರಜ್ಞೆ, ಸ್ವತ್ಛತೆ, ಸಮಾಜಮುಖೀ ಚಿಂತನೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದು ಸಂಸದೀಯ ಕಾರ್ಯದರ್ಶಿ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾ ಯಕಿಯರ ಸಂಘ ಪುತ್ತೂರು ಇದರ ವತಿಯಿಂದ ಪುರಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ, ನಿವೃತ್ತರಿಗೆ ಸಮ್ಮಾನ, ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಮಕ್ಕಳನ್ನು ತಿದ್ದಿ ತೀಡುವವಳು ತಾಯಿ.ಮಹಾಭಾರತದಲ್ಲಿ ಶ್ರೀಕೃಷ್ಣನಿಗೆ ಯಶೋದಾ ತುಂಬಿದ ಸ್ಥಾನವನ್ನು ಇಂದು ಅಂಗನಧಿವಾಡಿ ಕಾರ್ಯಕರ್ತರು ನಿಭಾಯಿಸುತ್ತಿದ್ದಾರೆ. ಸಮಾಜದಲ್ಲಿ ನಾಯಕತ್ವ ಬೆಳೆ ಸುವ ಜವಾಧಿಬ್ದಾರಿ ನಿಭಾಧಿಯಿಸುವ ಜತೆಗೆ ಸಮಾಜಕ್ಕೆ ತಾಯಿಯಾಗಬೇಕು, ಮಹಿಳಾ ಶಕ್ತಿಯ ಧ್ವನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ನಿಷ್ಪತ್ತಿ ಪಾಲಿಸುತ್ತಿಲ್ಲ
ಅಂಗನವಾಡಿ ವ್ಯವಸ್ಥೆ ಆರಂಭವಾದ ಸಂದರ್ಭ ಕಾರ್ಯಕರ್ತರಿಗೆ 100 ರೂ., ಸಹಾಯಕಿಯರಿಗೆ 50 ರೂ. ಮಾತ್ರ ಗೌರವ ಧನ ಸಿಗುತ್ತಿತ್ತು. ಆಗ ಕೇಂದ್ರ ಮತ್ತು ರಾಜ್ಯದ 90:10 ನಿಷ್ಪತ್ತಿಯ ವೇತನ ನೀಡಲಾಗುತ್ತಿತ್ತು. ಆ ಬಳಿಕ ಅದನ್ನು 60;40 ನಿಷ್ಪತ್ತಿಗೆ ಬದಲಾಯಿಸಲಾಯಿತು. ಆದರೆ ಇದನ್ನು ಪಾಲಿಸಲಾಗುತ್ತಿಲ್ಲ ಎಂದು ಹೇಳಿದ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಸರಕಾರ 5,200 ರೂ. ನೀಡುವಾಗ ಕೇಂದ್ರ ಕನಿಷ್ಠ 6,000 ರೂ. ಆದರೂ ವೇತನ ಕೊಡಬೇಕಿತ್ತು ಎಂದು ಅಭಿಪ್ರಾಯಿಸಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ಅವರು ಮಾತನಾಡಿ, ಸಮಾಜದಲ್ಲಿ ಗುರುತಿಸಿಕೊಳ್ಳುವ ಗೌರವ ಕಾರ್ಯಕರ್ತೆಯರು ನಾವು. ಭಾರತೀಯ ಸಂಸ್ಕೃತಿ ಯನ್ನು ಅಳವಡಿಸಿಕೊಳ್ಳುವ ಮೂಲಕ ಮಕ್ಕಳನ್ನು ಬೆಳೆಸಬೇಕು ಎಂದರು. ಅಂಗನವಾಡಿ ಕಾರ್ಯ ಕರ್ತರಿಗೇ ಇರುವ ಬ್ಯಾಂಕ್‌ ವ್ಯವಸ್ಥೆಯನ್ನು ಬಳಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತಿಗೊಳ್ಳುತ್ತಿರುವ ಕೋಡಿಂಬಾಡಿ ವಲಯದ ರಾಧಾ ಹಾಗೂ ಮುಕ್ರಂಪಾಡಿ ವಲಯದ ಶಿವಮ್ಮ ಅವರನ್ನು ಶಾಸಕರು ಸಮ್ಮಾನಿಸಿದರು. ತಾಲೂಕು ಸಂಘದ ಉಪಾಧ್ಯಕ್ಷೆ ಶೋಭಾ, ಕಾರ್ಯದರ್ಶಿ ಜಯಲತಾ, ಜತೆ ಕಾರ್ಯದರ್ಶಿ ರಾಜರಾಜೇಶ್ವರಿ, ಕೋಶಾಧಿಕಾರಿ ಪುಷ್ಪಾವತಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷೆ ಮೀನಾಕ್ಷಿ ಸ್ವಾಗತಿಸಿ, ಶ್ರೀಲತಾ ವಂದಿಸಿದರು. ಪ್ರಶಸ್ತಿ ಪುರಸ್ಕೃತ ಕಾರ್ಯಕರ್ತೆ ಅರುಣಾ ಡಿ. ಕಾರ್ಯಕ್ರಮ ನಿರ್ವಹಿಸಿದರು.

ಮಹಾಸಭೆ
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಪುತ್ತೂರು ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಸಿಡಿಪಿಒ ಶಾಂತಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ವಲಯದ ಉತ್ತಮ ಕಾರ್ಯಕರ್ತೆ, ಸಹಾಯಕಿಯರ ಗುರುತಿಸುವ ಕಾರ್ಯಕ್ರಮ ನಡೆಧಿಯಿತು. ನಿವೃತ್ತಿ ಹೊಂದಿದ ಒಟ್ಟು 9 ಮಂದಿ ಕಾರ್ಯಕರ್ತೆಯವರು ಹಾಗೂ ಸಹಾಯಕಿಯನ್ನು ಗೌರವಿಸಲಾಯಿತು.

ಸಿಎಂಗೆ ಬೇಸರ
ರಾಜ್ಯ ಸರಕಾರ 3 ವರ್ಷಗಳಲ್ಲಿ 500 ರೂ. ನಂತೆ ಹಾಗೂ ಈ ವರ್ಷ 1,000 ರೂ. ನಂತೆ ಗೌರವ ಧನ ಏರಿಕೆ ಮಾಡಿದೆ. ಹೋರಾಟ ಪ್ರತಿಯೊಬ್ಬರ ಹಕ್ಕು. ಆದರೆ ರಾಜಕೀಯ ಮಿಶ್ರಿತ ಹೋರಾಟ ಸರಿಯಲ್ಲ. ಯಾರ ವಿರುದ್ಧ ಹೋರಾಟ ನಡೆಸ ಬೇಕಿತ್ತೋ ಅಲ್ಲಿ ನಡೆಸಬೇಕಿತ್ತು. ಅದರಲ್ಲೂ ಪ್ರತಿಭಟನೆಯಲ್ಲಿ ಎಷ್ಟು ಅಂಗನವಾಡಿ ಕಾರ್ಯಕರ್ತೆಯರಿದ್ದರು ಎಂಬುದೂ ಪ್ರಶ್ನಾರ್ಹ ? ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸು ತ್ತಿದ್ದರೂ ಪ್ರತಿಭಟನೆ ನಡೆಸಿರುವುದು ಮುಖ್ಯಮಂತ್ರಿಗಳಿಗೆ ಬೇಸರ ತರಿಸಿದೆ ಎಂದು ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯೂ ಆಗಿರುವ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಆದರೆ ದ.ಕ. ಜಿಲ್ಲೆಯಲ್ಲಿ ಇಂತಹ ರಾಜಕೀಯ ಪ್ರೇರಿತ ಸಂಘಟನೆ ಇರದಿರುವುದು ಖುಷಿಯ ವಿಚಾರ ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.