ಅನಾಥ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಪಡೆದುಕೊಳ್ಳಲು ಪ್ರಾಣಿ ಪ್ರಿಯರ ಉತ್ಸಾಹ

ಅನಿಮಲ್‌ ಕೇರ್‌ ಟ್ರಸ್ಟ್‌ ವತಿಯಿಂದ ನಗರದಲ್ಲಿ ಮಾದರಿ ಶಿಬಿರ ; ಪ್ರಾಣಿಪ್ರಿಯರ ಪಾಲಾಯ್ತು 9 ನಾಯಿ ಮತ್ತು 3 ಬೆಕ್ಕಿನ ಮರಿಗಳು

Team Udayavani, Apr 30, 2019, 5:40 PM IST

Animal-Care-2-726

ಮಂಗಳೂರು: ‘ಪ್ರಾಣಿಯೊಂದನ್ನು ರಕ್ಷಿಸುವುದರಿಂದ ಜಗತ್ತೇನೂ ಬದಲಾಗುವುದಿಲ್ಲ ಆದರೆ ಹಾಗೆ ರಕ್ಷಿಸಲ್ಪಟ್ಟ ಪ್ರಾಣಿಯ ಜಗತ್ತು ಮಾತ್ರ ಖಂಡಿತವಾಗಿಯೂ ಬದಲಾಗುತ್ತದೆ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅನಿಮಲ್‌ ಕೇರ್‌ ಟ್ರಸ್ಟ್‌ (ACT) ಆಪತ್ತಿನಲ್ಲಿರುವ ಬೀಡಾಡಿ ಪ್ರಾಣಿಗಳಿಗೆ ಸುರಕ್ಷಿತ ತಾಣವನ್ನು ಒದಗಿಸುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಸಕ್ರಿಯ ಕಾರ್ಯವನ್ನು ನಿರ್ವಹಿಸುತ್ತಿದೆ.

ಈ ಟ್ರಸ್ಟ್‌ನ ಕಾರ್ಯಕರ್ತರು ಒಂದೆಡೆಯಲ್ಲಿ ಗಾಯಗೊಂಡ, ರೋಗಗ್ರಸ್ತ, ಮತ್ತು ತೊರೆಯಲ್ಪಟ್ಟ ಪ್ರಾಣಿಗಳನ್ನು ರಕ್ಷಿಸುವ ಕೆಲಸವನ್ನು ಮಾಡಿದರೆ, ಇನ್ನೊಂದೆಡೆಯಲ್ಲಿ ಹೀಗೆ ರಕ್ಷಿಸಲ್ಪಟ್ಟ ಪ್ರಾಣಿಗಳಿಗೆ ಒಂದು ಉತ್ತಮ ನೆಲೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ನಾಯಿ ಮರಿಗಳ ಹಾಗೂ ಬೆಕ್ಕಿನ ಮರಿಗಳನ್ನು ದತ್ತು ನೀಡುವ ಶಿಬಿರಗಳನ್ನು ನಡೆಸುತ್ತಲೇ ಇದ್ದಾರೆ. ಈ ಮಾದರಿ ಕಾರ್ಯದ ಒಂದು ಭಾಗವಾಗಿ ಅನಿಮಲ್‌ ಕೇರ್‌ ಸಂಸ್ಥೆ ಕಳೆದ ಶನಿವಾರ ಮತ್ತು ಭಾನುವಾರಗಳಂದು ದತ್ತು ನೀಡುವ ಶಿಬಿರಗಳನ್ನು ಹಮ್ಮಿಕೊಂಡಿತ್ತು.

ಎಪ್ರಿಲ್‌ 27ರ ಶನಿವಾರದಂದು ನಗರದ ಕಂಕನಾಡಿ ಬೈಪಾಸ್‌ ರಸ್ತೆಯಲ್ಲಿರುವ ಅನಿರ್ವೇದ – ಮಾನಸಿಕ ಸ್ವಾಸ್ಥ್ಯ ಸಂಪನ್ಮೂಲ ಕೇಂದ್ರದಲ್ಲಿ ಈ ಶಿಬಿರ ನಡೆಯಿತು. ಇದೇ ಶಿಬಿರದಲ್ಲಿ ಪ್ರಾಣಿ ಸಂಬಂಧಿ ಥೆರಪಿ ಕಾರ್ಯಾಗಾರವನ್ನೂ ಸಹ ನಡೆಸಲಾಗಿತ್ತು. ಮುಖ್ಯವಾಗಿ ಭಿನ್ನ ಸಾಮರ್ಥ್ಯದ ಮಕ್ಕಳಲ್ಲಿ ಚಿಕಿತ್ಸಕ ಬದಲಾವಣೆಯನ್ನು ತರುವಲ್ಲಿ ಸಾಕು ಪ್ರಾಣಿಗಳ ಸಂಸರ್ಗವನ್ನು ಮೂಡಿಸುವುದು ಈ ಥೆರಪಿಯ ಉದ್ದೇಶವಾಗಿತ್ತು.

ಎಪ್ರಿಲ್‌ 28ರ ಭಾನುವಾರದಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ಕೊಲ್ಯದಲ್ಲಿರುವ ಶ್ರೀ ಮೂಕಾಂಬಿಕ ಇಂಡಸ್ಟ್ರೀಸ್‌ ಆವರಣದಲ್ಲಿ ದತ್ತು ಶಿಬಿರವನ್ನು ಆಯೋಜಿಸಲಾಗಿತ್ತು. ಮತ್ತು ಈ ಶಿಬಿರದಲ್ಲಿ ನಾಯಿ ಮರಿಗಳು ಹಾಗೂ ಬೆಕ್ಕಿನ ಮರಿಗಳನ್ನು ದತ್ತು ನೀಡುವಿಕೆಗಾಗಿ ಇಡಲಾಗಿತ್ತು.
ಇವುಗಳಲ್ಲಿ ಹೆಣ್ಣು ನಾಯಿಮರಿಗಳ ದತ್ತು ನೀಡುವಿಕೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ನಾಯಿಮರಿಗಳನ್ನು ದತ್ತು ಸ್ವೀಕಾರ ಮಾಡಿಕೊಂಡವರಿಗೆ ಅವುಗಳಿಗೆ ನೀಡಬೇಕಾದ ಆಹಾರಗಳ ಕುರಿತಾಗಿ ಮತ್ತು ಹೆಣ್ಣು ನಾಯಿಮರಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯ ಅಗತ್ಯತೆಯ ಕುರಿತಾಗಿಯೂ ಈ ಶಿಬಿರದಲ್ಲಿ ಮನವರಿಕೆ ಮಾಡಿಕೊಡಲಾಯ್ತು.

ಶಿಬಿರಕ್ಕೆ ಪ್ರಾಣಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಒಟ್ಟು 9 ನಾಯಿಮರಿಗಳು ಹಾಗೂ 3 ಬೆಕ್ಕಿನ ಮರಿಗಳನ್ನು ಪ್ರಾಣಿಪ್ರಿಯರು ದತ್ತು ಪಡೆದುಕೊಂಡಿದ್ದಾರೆ. 9 ನಾಯಿಮರಗಳಲ್ಲಿ 7 ಹೆಣ್ಣು ನಾಯಿಮರಿಗಳನ್ನು ದತ್ತು ಪಡೆದುಕೊಂಡಿರುವುದು ಆಯೋಜಕರಿಗೆ ಖುಷಿ ನೀಡಿದೆ.

ಮಂಗಳೂರು ಪೂರ್ವ ರೋಟರಿ ಕ್ಲಬ್‌, ರೋಟರಿ ಸಮುದಾಯ ದಳ, ಕೊಲ್ಯ, ಸೋಮೇಶ್ವರ ಮತ್ತು ಯುವ ವಾಹಿನಿ (ರಿ.) ಕೊಲ್ಯ ವಿಭಾಗ ಇವುಗಳ ಸಹಯೋಗದಲ್ಲಿ ಈ ದತ್ತು ನೀಡುವಿಕೆ ಶಿಬಿರ ಯಶಸ್ವಿಗೊಂಡಿತು.

ಅನಿಮಲ್‌ ಕೇರ್‌ ಟ್ರಸ್ಟ್‌ ನೋಂದಾವಣೆಗೊಂಡು ಇದೀಗ ಇಪ್ಪತ್ತು ವರ್ಷಗಳು ಸಂದಿವೆ. ಬೀದಿಬದಿಯಲ್ಲಿ ಅನಾಥವಾಗಿರುವ ಮತ್ತು ಗಾಯಗೊಂಡು ಸಾಯುವ ಸ್ಥಿತಿಯಲ್ಲಿರುವ ಮೂಕಪ್ರಾಣಿಗಳನ್ನು ರಕ್ಷಿಸಿ ಅವುಗಳ ಆರೈಕೆ ಮಾಡಿ ಬಳಿಕ ಅವುಗಳನ್ನು ಪ್ರಾಣಿಪ್ರಿಯರು ಸಾಕಿಕೊಳ್ಳಲು ಅನುಕೂಲವಾಗುವಂತೆ ದತ್ತು ನೀಡುವ ಮೂಲಕ ಮಂಗಳೂರು ನಗರಾದ್ಯಂತ ಪ್ರಶಂಸಾರ್ಹ ಕಾರ್ಯವನ್ನು ಈ ಸಂಸ್ಥೆ ಕಳೆದ ಎರಡು ದಶಕಗಳಿಂದ ಮಾಡುತ್ತಿದೆ.

ಭಾರತೀಯರಾದ ನಾವು ಭಾರತೀಯ ತಳಿಯ ಪ್ರಾಣಿಗಳನ್ನೇ ಸಾಕುವ ಮೂಲಕ ಅವುಗಳ ಪಾಲಿಗೂ ನಮ್ಮ ಪ್ರಾಣಿಪ್ರೀತಿ, ಕಾಳಜಿಯನ್ನು ತೋರಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ACTಯ ಟ್ರಸ್ಟೀಗಳಲ್ಲಿ ಒಬ್ಬರಾಗಿರುವ ಸುಮಾ ಅರ್‌.ನಾಯಕ್‌ ಅವರು ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.