ಯಜಮಾನನ ದಾರಿ ಕಾಯುತ್ತಿವೆ ಸಾಕು ಪ್ರಾಣಿಗಳು


Team Udayavani, Aug 24, 2018, 11:56 AM IST

24-agust-7.jpg

ಸುಳ್ಯ : ಯಜಮಾನ ಯಾವಾಗ ಬರುವೆನೆಂದು ರಸ್ತೆಯಲ್ಲಿ ಕಾದು ಕುಳಿತ ಮೂಕ ಪ್ರಾಣಿಗಳ ದಂಡು, ಬೀಗ ಹಾಕಿದ ಮನೆ ಅಂಗಳದಲ್ಲಿ ಜೀವ ಕಳೆ ಇಲ್ಲದ ಸ್ಥಿತಿ, ಸಂತ್ರಸ್ತರ ಪಾಲಿಗೆ ಯಮನಂತೆ ಕಾಡಿದ ತೋಡಲ್ಲಿ ಶಾಂತವಾಗಿ ಹರಿಯುವ ನೀರು. ವಾರದ ಹಿಂದೆ ಕಣ್ಣ ಮುಂದೆ ಕಂಡಿದ್ದ ಜೋಡುಪಾಲ ಈಗ ಬದಲಾಗಿದೆ!

ಅಬ್ಬರಿಸಿ ಬೊಬ್ಬಿರಿದ ಜೋಡುಪಾಲ ಈಗ ಜನರ ಓಡಾಟ ಇಲ್ಲದೆ ಅಕ್ಷರಶಃ ಬಿಕೋ ಎನ್ನುತ್ತಿದೆ. ನಾಯಿ, ಬೆಕ್ಕು, ದನಗಳು ರಸ್ತೆಯಲ್ಲಿಯೇ ಬೀಡುಬಿಟ್ಟಿವೆ. ಬೆರಳೆಣಿಕೆಯ ಸಿಬಂದಿ ಕಾರ್ಯಾಚರಣೆ ಸ್ಥಳದಲ್ಲಿದ್ದಾರೆ. ಜೆಸಿಬಿ ಯಂತ್ರಗಳು ದುರಸ್ತಿ ಮುಂದುವರಿಸಿವೆ. ಜೋಡುಪಾಲ ವೀಕ್ಷಣೆಗೆ ಬಂದವರು ಹಾಕಿದ ಬಿಸ್ಕೆಟ್‌ ಮೂಕ ಪ್ರಾಣಿಗಳ ಪಾಲಿನ ಆಹಾರವಷ್ಟೆ. ಸಂತ್ರಸ್ತರ ಕುಟುಂಬಗಳು ಪರಿಹಾರ ಕೇಂದ್ರದೊಳಗೆ ಮನೆ ಪರಿಸ್ಥಿತಿ ಕುರಿತು ಚಿಂತೆಯಲ್ಲಿದ್ದರೆ, ಸಾಕು ಪ್ರಾಣಿಗಳು ಯಜಮಾನ ಬರುವಿಕೆ ನಿರೀಕ್ಷೆಯಲ್ಲಿದ್ದುದು ಮನ ಕಲಕುತಿದೆ.

ಗುರುವಾರ ಕೊಂಚ ಖುಷಿ
ರಸ್ತೆಯಲ್ಲಿ ಮಲಗಿದ್ದ ಸಾಕು ಪ್ರಾಣಿಗಳಿಗೆ ಗುರುವಾರ ಕೊಂಚ ಖುಷಿ ಕೊಟ್ಟಿತ್ತು. ವಾಹನಗಳಿಂದ ಇಳಿದು ಮನೆಗೆ ಬರುತ್ತಿದ್ದ ಮನೆ ಮಂದಿಯನ್ನು ಕಂಡು ನೋವು, ದುಮ್ಮಾನಗಳನ್ನು ಹಾವಭಾವಗಳಲ್ಲೇ ತೋರ್ಪಡಿಸಿದವು. ಹೊತ್ತು-ಹೊತ್ತು ಊಟ, ತಿಂಡಿ ನೀಡಿ, ಮನೆ ಮಕ್ಕಳಂತೆ ಬೆಳೆಸಿದ ಸಾಕು ಪ್ರಾಣಿಗಳು ಹಸಿವಿನಿಂದ ಬಳಲಿ ಬೆಂಡಾದದನ್ನು ಕಂಡು ಸಂತ್ರಸ್ತರ ಕಣ್ಣಲ್ಲಿಯೂ ನೀರು ತೊಟ್ಟಿಕ್ಕಿತ್ತು. ತಲೆ ನೇವರಿಸುತ್ತ ಸಂತೈಸಿದರು. ನಾವು ಮನೆಗೆ ಬಂದಿದ್ದೇವೆ. ಸಾಕು ಪ್ರಾಣಿಗಳು ನಮ್ಮನ್ನು ಕಂಡು ಜೀವ ಸಿಕ್ಕಿದಷ್ಟು ಖುಷಿ ಪಟ್ಟವು. ಈಗ ಸುಬ್ರಹ್ಮಣ್ಯಕ್ಕೆ ಹೊರಟಿದ್ದೇವೆ. ಇವು ನಮ್ಮ ಜತೆಗೆ ಬರುತ್ತಿದೆ. ಮರಳಿ ಹೋಗುತ್ತಿದ್ದಾರೆ ಎಂಬ ಭಯ ಎಂದು ಎರಡನೆ ಮೊಣ್ಣಂಗೇರಿ ನಿವಾಸಿ ಬೆಕ್ಕಿನ ತಲೆ ನೇವರಿಸಿಸುತ್ತಲೇ ನುಡಿದರು.

ಯಾವಾಗ ಬರುವನು ಯಜಮಾನ?
ಸಂಪಾಜೆ, ದೇವರಕೊಲ್ಲಿ, ಅರೆಕ್ಕಳ್‌, ಎರಡನೆ ಮೊಣ್ಣಂಗೇರಿ ಭಾಗದ ಕೆಲ ಕುಟುಂಬಗಳು ಮನೆಗೆ ಮರಳಿವೆ. ಆದರೆ ಜೋಡುಪಾಲದಲ್ಲಿ ಪರಿಸ್ಥಿತಿ ಪೂರ್ತಿ ತಹಬದಿಗೆ ಬಾರದ ಕಾರಣ ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿಯೇ ಉಳಿದಿದ್ದಾರೆ. ಇಲ್ಲಿ 50ಕ್ಕೂ ಅಧಿಕ ಮನೆಯ ಸಾಕು ಪ್ರಾಣಿಗಳ ಮೂಕರೋದನ ಮುಂದುವರಿದಿದೆ. ಮನೆ ನೋಡಲು ಬರುವವರು, ದುರಂತ ಸ್ಥಳದಲ್ಲಿ ಕಾರ್ಯಾಚರಣೆ ಮಾಡುವವರು ಹಾಕುವ ತಿಂಡಿ ತಿನಿಸುಗಳಿಗೆ ಕಾಯುವ ಸ್ಥಿತಿ. ಮನೆ ಯಜಮಾನ ಮರಳಿ ಯಾವಾಗ ಬರಬಹುದು ಎಂಬ ಮೂಕ ಪ್ರಾಣಿಗಳ ನಿರೀಕ್ಷೆಗೆ ಪ್ರಕೃತಿ ಉತ್ತರ ಹೇಳಬೇಕಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.