ಅಂಜುಶ್ರೀ ಸಾವಿಗೆ ಕಾರಣ ಆಹಾರವಲ್ಲ; ಕರುಳು ನಿಷ್ಕ್ರಿಯ… ಪ್ರಾಥಮಿಕ ವರದಿ
Team Udayavani, Jan 9, 2023, 8:00 AM IST
ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಹೇಳಿದೆ. ಕರುಳು ನಿಷ್ಕ್ರಿಯವಾಗಿತ್ತು ಹಾಗೂ ಹಳದಿ ಜ್ವರ ಬಾಧಿಸಿತ್ತು ಎಂದು ವರದಿಯಲ್ಲಿ ತಿಳಿಸಿದೆ. ಹೆಚ್ಚಿನ ತನಿಖೆಗಾಗಿ ಅವರ ಆಂತರಿಕ ಅವಯವಗಳನ್ನು ರಾಸಾಯನಿಕ ತಪಾಸಣೆಗಾಗಿ ಕಳುಹಿಸಲಾಗಿದೆ.
ಇದೇ ವೇಳೆ ಅಂಜುಶ್ರೀ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆಯೆಂದೂ ವರದಿಯಲ್ಲಿ ಹೇಳಿದೆ. ಆಹಾರದಲ್ಲಿನ ವಿಷ ಅಲ್ಲವೆಂದು ಫಾರೆನ್ಸಿಕ್ ಸರ್ಜನ್ ಅವರ ಅಭಿಪ್ರಾಯವಾಗಿದೆ. ವಿಷ ಕರುಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ವರದಿಯಲ್ಲಿ ವ್ಯಕ್ತಪಡಿಸಿದೆ.
ಶನಿವಾರ ಬೆಳಗ್ಗೆ ಅಂಜುಶ್ರೀ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಡಿ. 31ರಂದು ಕುಳಿಮಂದಿ ಸೇವಿಸಿದ ಕಾರಣ ಅಸ್ವಾಸ್ಥ್ಯ ಕಾಣಿಸಿಕೊಂಡಿತ್ತು. ವಿಷಾಹಾರ ಸೇವನೆಯಿಂದ ಸಾವು ಸಂಭವಿಸಿತ್ತೆಂದು ಸಂಶಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಟೇಲ್ ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ವಿದ್ಯಾರ್ಥಿಗಳು, ಅಧ್ಯಾಪಕರು ಆಸ್ಪತ್ರೆಗೆ: ಪತ್ತನಂತಿಟ್ಟ ಚಂದನಪಳ್ಳಿ ರೋಸ್ ಡೈಲ್ ಶಾಲೆಯಲ್ಲಿ ವಿಷ ಆಹಾರ ಸೇವನೆಯಿಂದ 13 ಮಂದಿ ವಿದ್ಯಾರ್ಥಿಗಳು ಹಾಗು ಅಧ್ಯಾಪಕಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕನ್ ಬಿರಿಯಾನಿ ಸೇವಿಸಿದವರಿಗೆ ಅಸ್ವಾಸ್ಥ್ಯ ತಲೆದೋರಿದೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಬಿರಿಯಾನಿ ನೀಡಲಾಗಿತ್ತು. ಬೆಳಗ್ಗೆ 11ಕ್ಕೆ ತಲುಪಿದ್ದ ಬಿರಿಯಾನಿ ವಿತರಣೆ ಸಂಜೆ ನಡೆದಿರುವುದಾಗಿ ಹೊಟೇಲ್ ಮಾಲಕ ತಿಳಿಸಿದ್ದಾರೆ. ಆಹಾರ ಸೇವಿಸಿದ ದಿನ ಯಾರಿಗೂ ಸಮಸ್ಯೆಯಾಗಿರಲಿಲ್ಲ. ಮರುದಿನ ಉದರ ಬೇನೆ ತಲೆದೋರಿತು. ವಿದ್ಯಾರ್ಥಿಗಳನ್ನು ಪತ್ತನಂತಿಟ್ಟದ ಮೂರು ಆಸ್ಪತ್ರೆಗಳಿಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!