ಅಂಗಾರ ಅವರಿಗೆ ಕೈ ತಪ್ಪಿದ ಮಂತ್ರಿ ಸ್ಥಾನ : 70 ಕ್ಕೂ ಅಧಿಕ ಮಂದಿ ರಾಜಿನಾಮೆ
Team Udayavani, Aug 21, 2019, 11:55 PM IST
ಸುಳ್ಯ : ಶಾಸಕ ಎಸ್. ಅಂಗಾರ ಅವರಿಗೆ ಕೊನೇ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿರುವ ಸುಳ್ಯ ಬಿಜೆಪಿ ತುರ್ತು ಸಭೆ ಸಡೆಸಿದ್ದು, 70 ಕ್ಕೂ ಅಧಿಕ ಚುನಾಯಿತ ಜನಪ್ರತಿನಿಧಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು ಮಂಡಲ ಸಮಿತಿಗೆ ಪತ್ರ ನೀಡಿದ್ದಾರೆ.
ಜತೆಗೆ ಪಕ್ಷದಿಂದ ಅಸಹಕಾರ ಚಳವಳಿ ನಡೆಸಲು ಬುಧವಾರ ನಡೆದ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು.
ಬಿಜೆಪಿ ಪಕ್ಷದ ಮೂಲಕ ಗೆದ್ದ ಜನಪ್ರತಿನಿಧಿಗಳು ತಮ್ಮ
ಕಛೇರಿಗೆ ಹೋಗುವುದಿಲ್ಲ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವುದಿಲ್ಲ. ಪಕ್ಷದ ಜಿಲ್ಲಾ ಮತ್ತು ರಾಜ್ಯ ಘಟಕದೊಂದಿಗೆ ಅಸಹಕಾರ ಧೋರಣೆ ತಳೆಯಲಾಗುತ್ತದೆ ಎಂದು ಮಂಡಲ ಸಮಿತಿ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಸಭೆಯಲ್ಲಿ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ರಾಕೇಶ್ ರೈ ಕೆಡೆಂಜಿ, ಭಾಗೀರಥಿ ಮುರುಳ್ಯ, ಚನಿಯ ಕಲ್ತಡ್ಕ, ಸುಭೋದ್ ಶೆಟ್ಟಿ ಮೇನಾಲ, ಹರೀಶ್ ಕಂಜಿಪಿಲಿ, ದಿನೇಶ್ ಮೆದು, ಚಂದ್ರಶೇಖರ ಪನ್ನೆ, ಮುಳಿಯ ಕೇಶವ ಭಟ್, ಪಿ.ಕೆ. ಉಮೇಶ್, ಸುರೇಶ್ ಕಣೆಮರಡ್ಕ, ಮಹೇಶ್ ಕುಮಾರ್ ಮೇನಾಲ, ಮಾಧವ ಚಾಂತಾಳ, ರಾಧಾಕೃಷ್ಣ ಬೊಳ್ಳೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ