ಮನೆಗೆ ಬಂದ ಬೇರೊಂದು ಯುವತಿಯ ದಿಬ್ಬಣ!

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕ ಆತ್ಮಹತ್ಯೆ ಪ್ರಕರಣ

Team Udayavani, Nov 23, 2021, 7:02 AM IST

ಮನೆಗೆ ಬಂದ ಬೇರೊಂದು ಯುವತಿಯ ದಿಬ್ಬಣ!

ಸಾಂದರ್ಭಿಕ ಚಿತ್ರ.

ಪುತ್ತೂರು: ಕೆಲವೇ ದಿನಗಳಲ್ಲಿ ವಿವಾಹ ನಿಶ್ಚಿತಾರ್ಥ ನಡೆಯಲಿದ್ದ ನೆಟ್ಟಣಿಗೆ ಮುಟ್ನೂರು ಗ್ರಾಮದ ಮುಂಡ್ಯಕರೆಂಟಿಯಡ್ಕದ ಯುವಕನ ಆತ್ಮಹತ್ಯೆ ಪ್ರಕರಣ ಕುತೂಹಲ ತಿರುವು ಪಡೆದುಕೊಂಡಿದೆ.

ಯುವಕನನ್ನು ಮದುವೆಯಾಗಲು ಬೇರೊಂದು ಹುಡುಗಿ ಮನೆಯವರು ದಿಢೀರ್‌ ದಿಬ್ಬಣ ಸಮೇತರಾಗಿ ಬಂದ ಸಂದರ್ಭ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿಷಯ ಬೆಳಕಿಗೆ ಬಂದಿದ್ದು, ದಿಬ್ಬಣ ಹಿಂದಕ್ಕೆ ಹೋಗಿದೆ.

ಹೊಸ ಮನೆಯಲ್ಲಿ ಆತ್ಮಹತ್ಯೆ
ರವಿರಾಜ್‌ ಅವರನ್ನು ವಿವಾಹವಾ ಗಲೆಂದು ರವಿವಾರ ಕುಂದಾಪುರದಿಂದ ಬೇರೊಂದು ಹುಡುಗಿಯ ದಿಬ್ಬಣ ದಿಢೀರ್‌ ಆಗಿ ಆಗಮಿಸಿತ್ತು. ಇದರಿಂದ ಗೊಂದಲಕ್ಕೆ ಒಳಗಾದ ಕುಟುಂಬಸ್ಥರು ರವಿರಾಜ್‌ ಅವರಿಗಾಗಿ ಹುಡುಕಾಟ ನಡೆಸಿದ್ದರು. ಈ ಸಂದರ್ಭ ಅವರು ನೆಟ್ಟಣಿಗೆ ಮುಟ್ನೂರು ಗ್ರಾಮದ ಮುಂಡ್ಯಕರೆಂಟಿಯಡ್ಕದಲ್ಲಿ ತನ್ನ ಸಹೋದರ ನಿರ್ಮಿಸಿದ್ದ ಇನ್ನೂ ಗ್ರಹಪ್ರವೇಶ ನಡೆಯದ ನೂತನ ಮನೆಯ ಬಚ್ಚಲು ಕೋಣೆಯಲ್ಲಿ ವೆಂಟಿಲೇಟರ್‌ಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು
ಹೆದರಿ ಜೀವವನ್ನೇ ಕಳೆದುಕೊಂಡರೇ?

ರವಿರಾಜ್‌ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯು ತ್ತಿದ್ದಂತೆಯೇ ಕುಂದಾಪುರದಿಂದ ಬಂದಿದ್ದ ಮದುವೆ ದಿಬ್ಬಣ ಹಿಂದಿರುಗಿ ಹೋಗಿದೆ. ರವಿರಾಜ್‌ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಸಂದರ್ಭ ಕುಂದಾಪುರದ ಹುಡುಗಿಯೊಂದಿಗೆ ಪ್ರೇಮಾಂಕುರವಾಗಿರುವ ಸಾಧ್ಯತೆ ಇದೆ. ಈ ವಿಚಾರ ತಿಳಿದೋ ಅಥವಾ ತಿಳಿಯದೆಯೋ ಯುವಕನ ಮನೆಯವರು ಬೇರೆ ಹುಡುಗಿಯ ಜತೆಗೆ ವಿವಾಹ ನಿಶ್ಚಿತಾರ್ಥಕ್ಕೆ ಮುಂದಾಗಿರಬಹುದು. ಈ ವಿಚಾರ ಕುಂದಾಪುರದ ಯುವತಿಯ ಕಡೆಯವರಿಗೆ ತಿಳಿದು ಯುವತಿ ರವಿರಾಜ್‌ ಅವರನ್ನೇ ಮದುವೆ ಯಾಗುವುದೆಂದು ನಿರ್ಧರಿಸಿ ಕುಂದಾಪುರದಿಂದ ದಿಬ್ಬಣ ಸಮೇತ ಬಂದಂತಿದೆ. ಇದರಿಂದ ದಿಕ್ಕು ತೋಚದಂತಾದ ರವಿರಾಜ್‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

“ಮಳೆ ಬರುತ್ತಿದೆ, ಮನೆಗೆ ನಾಳೆ ಬರುತ್ತೇನೆ’
ಸುಳ್ಯಪದವು ಶಬರಿ ನಗರ ನಿವಾಸಿ ರವಿರಾಜ್‌ ಪೂಜಾರಿ (31) ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ರವಿರಾಜ್‌ ಅವರಿಗೆ ಮದುವೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದು, ವಿಟ್ಲ ಸಮೀಪದ ಹುಡುಗಿಯನ್ನು ನೋಡಿದ್ದರು. ಮಾತ್ರವಲ್ಲದೆ ನ. 25ರಂದು ವಿವಾಹ ನಿಶ್ಚಿತಾರ್ಥಕ್ಕೆ ದಿನ ನಿಗದಿಪಡಿಸಿಕೊಂಡಿದ್ದರು. ನಿಶ್ಚಿತಾರ್ಥಕ್ಕಾಗಿ ರವಿರಾಜ್‌ ಬೆಂಗಳೂರಿನಿಂದ ನ. 19ರಂದು ಊರಿಗೆ ಆಗಮಿಸಿದ್ದರು. ನ. 20ರಂದು ಮನೆಯವರಿಗೆ “ಪುತ್ತೂರಿನಲ್ಲಿರುವ ಸ್ನೇಹಿತನ ಮನೆಗೆ ಹೋಗಿ ನಾಳೆ ಸಂಜೆ ಬರುತ್ತೇನೆ’ ಎಂದು ಹೇಳಿ ಮನೆಯಿಂದ ತೆರಳಿದ್ದರು. ಅಂದು ರಾತ್ರಿ ತನ್ನ ಮನೆಗೆ ಮೊಬೈಲ್‌ ಕರೆ ಮಾಡಿ “ಮಳೆ ಬರುತ್ತಿದೆ, ಮನೆಗೆ ನಾನು ನಾಳೆ ಬರುತ್ತೇನೆ’ ಎಂದಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.