ವಿಜಯಪುರ ರೈಲಿಗೆ ಅನಿಶ್ಚಿತತೆಯ ಆತಂಕ

ನಿರೀಕ್ಷಿತ ಆದಾಯ ಬರುತ್ತಿಲ್ಲ; ಸದ್ಯಕ್ಕೆ ಆರು ತಿಂಗಳು ವಿಸ್ತರಣೆ

Team Udayavani, Feb 15, 2020, 5:37 AM IST

1402MLR32A

ಮಂಗಳೂರು: ಮಂಗಳೂರು ಜಂಕ್ಷನ್‌-ವಿಜಯಪುರ ನಡುವೆ ತಾತ್ಕಾಲಿಕ ನೆಲೆಯಲ್ಲಿ ಸಂಚರಿಸುತ್ತಿರುವ ರೈಲು ಇಲಾಖೆಗೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ನೀಡುತ್ತಿಲ್ಲ. ಆದರೂ 6 ತಿಂಗಳು ವಿಸ್ತರಣೆ ಮಾಡಲಾಗಿದ್ದು ಜೂನ್‌ ಅಂತ್ಯಕ್ಕೆ ಮುಕ್ತಾಯ ವಾಗಲಿದೆ. ವಿಸ್ತರಣೆ ಅವಧಿಯಲ್ಲಿ ಆದಾಯದಲ್ಲಿ ಸುಧಾರಣೆ ಕಾಣದಿದ್ದರೆ ಮುಂದುವರಿಕೆ ಅನಿಶ್ಚಿತವಾಗುವ ಸಾಧ್ಯತೆಯಿದೆ.

ಪ್ರಸ್ತುತ ಇಲಾಖೆಯ ಮಾಹಿತಿ ಯಂತೆ ನ. 11ರಿಂದ ಜ. 10ರ ವರೆಗೆ ಈ ಮಾರ್ಗದಲ್ಲಿ 3.89 ಕೋ.ರೂ. ಆದಾಯ ನಿರೀಕ್ಷಿಸಲಾಗಿತ್ತು. ಆದರೆ 1.37 ಕೋ.ರೂ. ಮಾತ್ರ ಗಳಿಕೆ ಯಾಗಿದೆ. 65,582 ಪ್ರಯಾಣಿಕರನ್ನು ಇಲಾಖೆ ನಿರೀಕ್ಷಿಸಿ ದ್ದರೂ ಈ ವರೆಗೆ ಸಂಚರಿಸಿದ ಪ್ರಯಾಣಿಕರ ಸಂಖ್ಯೆ 29,308ರಲ್ಲೇ ಇದೆ.

ರೈಲಿನಲ್ಲಿ 1 ಎಸಿ ಟು-ಟೈರ್‌, 1 ಎಸಿ ತ್ರಿ ಟೈರ್‌, 6 ದ್ವಿತೀಯ ದರ್ಜೆ ಸ್ಲಿàಪರ್‌ ಮತ್ತು 4 ಸಾಮಾನ್ಯ ದ್ವಿತೀಯ ದರ್ಜೆಯ ಬೋಗಿಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಎಸಿ ಟು ಟೈರ್‌ ಮತ್ತು ಎಸಿ ತ್ರಿ ಟೈರ್‌ ಬೋಗಿಗಳಿಗೆ ಪ್ರಸ್ತುತ ಪ್ರಯಾಣಿಕರಿಂದ ಹೆಚ್ಚಿನ ಸ್ಪಂದನೆ ಕಂಡುಬಂದಿಲ್ಲ. ಈ ಬೋಗಿಗಳು ಶೇ. 35ರಿಂದ 40ರಷ್ಟು ಮಾತ್ರ ಭರ್ತಿಯಾಗುತ್ತಿವೆ. ದ್ವಿತೀಯ ದರ್ಜೆ ಸ್ಲಿàಪರ್‌ ಬೋಗಿಗಳಿಗೆ ಸ್ಪಂದನೆ ಸಾಮಾನ್ಯವಾಗಿದೆ. ಆದರೆ ನಾಲ್ಕು ಜನರಲ್‌ ಬೋಗಿಗಳು ಭರ್ತಿಯಾಗುತ್ತಿವೆ.

ಪೂರಕ ಕ್ರಮಗಳು ಅಗತ್ಯ
ಈ ರೈಲನ್ನು ಉಳಿಸಿಕೊಳ್ಳಲು ಪೂರಕ ಕ್ರಮಗಳು ಅವಶ್ಯ. ರೈಲು ಪ್ರಸ್ತುತ ಮಂಗಳೂರು ಜಂಕ್ಷನ್‌ ವರೆಗೆ ಮಾತ್ರ ಇದೆ. ಇದನ್ನು ಮಂಗಳೂರು ಸೆಂಟ್ರಲ್‌ವರೆಗೆ ವಿಸ್ತರಿಸಬೇಕು ಮತ್ತು ಸಂಚಾರ ವೇಳಾಪಟ್ಟಿಯನ್ನು ಬದಲಾಯಿಸಬೇಕು, ಅವಧಿಯನ್ನು ಕಡಿಮೆಗೊಳಿಸಬೇಕು ಎಂದು ರೈಲ್ವೇ ಹೋರಾಟಗಾರ ಜಿ.ಕೆ. ಭಟ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರೈಲು ಸಂಜೆ 6.40ಕ್ಕೆ ವಿಜಯಪುರದಿಂದ ಹೊರಟು ರಾತ್ರಿ 12.30ಕ್ಕೆ ಹುಬ್ಬಳ್ಳಿ ತಲುಪುತ್ತದೆ. ಮರು ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್‌ಗೆ ಬರುತ್ತದೆ. ಮಧ್ಯಾಹ್ನ 1ಕ್ಕೆ ವಿಜಯಪುರದಿಂದ ಹೊರಟು ರಾತ್ರಿ 7ಕ್ಕೆ ಹುಬ್ಬಳ್ಳಿಗೆ ಬಂದು, ಮರು ಬೆಳಗ್ಗೆ 8.30ಕ್ಕೆ ಮಂಗಳೂರು ತಲುಪುವಂತಾದರೆ ಹಾಗೂ ಮಂಗಳೂರಿನಿಂದ ಸಂಜೆ 4.30ರ ಬದಲು ರಾತ್ರಿ 7 ಗಂಟೆಗೆ ಹೊರಟು ಮರು 8 ಗಂಟೆಗೆ ಹುಬ್ಬಳ್ಳಿಗೆ ತಲುಪುವಂತೆ ಆದರೆ ಹೆಚ್ಚು ಅನುಕೂಲ.

ಸಾಮಾನ್ಯ ಬೋಗಿ ಹೆಚ್ಚಿಸಿದರೆ ಆದಾಯ ವೃದ್ಧಿ ಸಾಧ್ಯ
ಉತ್ತರ ಕರ್ನಾಟಕದಿಂದ ಕರಾವಳಿಗೆ ಗಣನೀಯ ಸಂಖ್ಯೆಯಲ್ಲಿ ಬರುವವರು ವಿದ್ಯಾರ್ಥಿಗಳು, ಕಾರ್ಮಿಕರು. ಮುಖ್ಯವಾಗಿ ಬಾಗಲಕೋಟೆ, ಬಾದಾಮಿ, ಗದಗ, ಹಾವೇರಿ, ರಾಣೆಬೆನ್ನೂರು, ಬನವಾಸಿ, ಬಾಗೇವಾಡಿ, ಆಲಮಟ್ಟಿ ಮುಂತಾದೆಡೆಗಳ ಕಾರ್ಮಿಕರ ಸಂಖ್ಯೆಯೇ ಹೆಚ್ಚು. ಅವರಿಗೆ ಈ ರೈಲು ಅತಿ ಉಪಯುಕ್ತ. ಈ ಸಾಮಾನ್ಯ ವರ್ಗದ ಜನತೆ ಜನರಲ್‌ ಅಥವಾ ದ್ವಿತೀಯ ದರ್ಜೆ ಸ್ಲಿàಪರ್‌ ಬೋಗಿಗಳಲ್ಲಿಯೇ ಪ್ರಯಾಣಿಸುತ್ತಾರೆ. ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಜಾಸ್ತಿ ಮಾಡುವುದರಿಂದ ಇಲಾಖೆಗೆ ಹೆಚ್ಚಿನ ಆದಾಯ ಬರಲಿದೆ.

ಲಭ್ಯ ಮಾಹಿತಿ ಪ್ರಕಾರ ಈ ರೈಲಿಗೆ ನಿರೀಕ್ಷಿತ ಆದಾಯ ಬರುತ್ತಿಲ್ಲವಾದರೂ ನಷ್ಟವಾಗುತ್ತಿಲ್ಲ. ಅದುದರಿಂದ ಈ ರೈಲನ್ನು ಖಾಯಂ ನೆಲೆಯಲ್ಲಿ ಓಡಿಸಬೇಕು. ನಿರೀಕ್ಷಿತ ಆದಾಯ ಬರುತ್ತಿಲ್ಲ ಎಂಬ ಕಾರಣ ನೀಡಿ ಇದನ್ನು ಕೈಬಿಡುವ ಪ್ರಯತ್ನ ನಡೆದರೆ ಪ್ರಬಲ ಹೋರಾಟ ನಡೆಸುತ್ತೇವೆ ಮತ್ತು ಈ ರೈಲನ್ನು ಉಳಿಸಿಕೊಳ್ಳುತ್ತೇವೆ.
– ಕುತುದ್ದೀನ್‌ ಖಾಜಿ,
ಅಧ್ಯಕ್ಷರು ಕರ್ನಾಟಕ ರಾಜ್ಯ
ರೈಲ್ವೇ ಅಭಿವೃದ್ಧಿ ಹೋರಾಟ ಸಮಿತಿ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.