ಅರ್ಜಿ ವಿಲೇವಾರಿ ಗೊಂದಲ ಆರೋಪ:  ಕಾರ್ಮಿಕರಿಂದ ಪ್ರತಿಭಟನೆ


Team Udayavani, Aug 8, 2017, 6:00 AM IST

0708mlr51.jpg

ಮಹಾನಗರ: ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ವಿವಿಧ ಸವಲತ್ತುಗಳಿಗಾಗಿ ಸಲ್ಲಿಸಿದ ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಕಾರ್ಮಿಕ ಇಲಾಖೆ ಗೊಂದಲ ಹಾಗೂ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನ ಪ್ರದರ್ಶನ ನಡೆಸಿದರು.

ಅರ್ಜಿಗಳ ವಿಲೇವಾರಿ ಮಾಡಲೇಬೇಕು ಹಾಗೂ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲೇ ಬೇಕು ಎಂದು ಕಾರ್ಮಿಕರು ಘೋಷಣೆ ಕೂಗಿದರು. 

ವಿನಾ ಕಾರಣ ಕಿರುಕುಳ 
ಪ್ರತಿಭಟನೆಯನ್ನು ಉದ್ಘಾಟಿಸಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್‌ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸುಮಾರು 12 ಲಕ್ಷ ಕಾರ್ಮಿಕರು ನೋಂದಣಿ ಮಾಡಿದ್ದು, ಈಗಾಗಲೇ 5,600 ಕೋಟಿ ರೂ. ಹಣ ಸಂಗ್ರಹವಾಗಿದೆ. ಅದರಲ್ಲಿ ಕಳೆದ 11 ವರ್ಷಗಳಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಖರ್ಚು ಮಾಡಿದ್ದು ಕೇವಲ 171 ಕೋಟಿ ರೂ. ಮಾತ್ರ. ದೀರ್ಘ‌ ಕಾಲದ ಹೋರಾಟ ನಡೆದು ಕಲ್ಯಾಣ ಮಂಡಳಿ ರಚನೆಯಾಗಿ 12 ಬಗೆಯ ಸವಲತ್ತುಗಳು ಜಾರಿಗೊಂಡಿವೆ. ಅವುಗಳು ಕಟ್ಟಡ ಕಾರ್ಮಿಕರಿಗೆ ಸಿಗುವಲ್ಲಿ ಸಿಐಟಿಯು ಅವಿರತ ಪ್ರಯತ್ನ ನಡೆಸುತ್ತಿದೆ. ಆದರೆ ಕಾರ್ಮಿಕ ಇಲಾಖೆಯು ಈ ಸವಲತ್ತುಗಳು ಸಿಗದ ರೀತಿಯಲ್ಲಿ ಹತಾಶ ಪ್ರಯತ್ನ ನಡೆಸುತ್ತಿದೆ. ವಿನಾ ಕಾರಣ ಕಿರುಕುಳ ನೀಡಿ ಕಟ್ಟಡ ಕಾರ್ಮಿಕರನ್ನು ಸತಾಯಿಸುತ್ತಿದೆ ಎಂದು ಆರೋಪಿಸಿದರು.

ದುರುದ್ದೇಶದಿಂದ ಅರ್ಜಿ ರದ್ದು 
ಮದುವೆ, ಮರಣ ಹಾಗೂ ಮಕ್ಕಳ ಸ್ಕಾಲರ್‌ಶಿಪ್‌ಮುಂತಾದವುಗಳಿಗೆ ಸಂಬಂ ಧಿಸಿದ ಅರ್ಜಿಗಳನ್ನು ದುರುದ್ದೇಶದಿಂದಲೇ ರದ್ದುಪಡಿಸಿ ಕಾರ್ಮಿಕರನ್ನು ಸಂಕಷ್ಟಕ್ಕೊಳ ಪಡಿಸಿದೆ. ಮತ್ತೂಂದು ಕಡೆ ರಾಜ್ಯ ಸರಕಾರ ಕೂಡ ಮಂಡಳಿಯಲ್ಲಿ ಜಮಾವಣೆಗೊಂಡ ಹಣದ ಮೇಲೆ ಕಣ್ಣಿಟ್ಟಿದ್ದು ,ಅದನ್ನು ದುರುಪಯೋಗ ಪಡಿಸಲು ಹೊಂಚು ಹಾಕುತ್ತಿದೆ ಎಂದು   ಆರೋಪಿಸಿದ ಅವರು, ಸರಕಾರದ ಈ ಪ್ರಯತ್ನವನ್ನು ತಡೆದು ಕಟ್ಟಡ ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೊಳಿಸಲು ಸಂಘಟಿತ ಹೋರಾಟ ರೂಪಿಸಲು ಕಂಕಣ ಬದ್ಧರಾಗಿ ದುಡಿಯ ಬೇಕೆಂದು ಕರೆ ನೀಡಿದರು.

ಅರ್ಧದಷ್ಟು ಸದಸ್ಯತ್ವ  ಬೋಗಸ್‌
ಸಿಐಟಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ಕಲ್ಯಾಣ ಮಂಡಳಿಯಲ್ಲಿ  ಜಿಲ್ಲೆಯ ಸುಮಾರು 45,000 ಸದಸ್ಯರು ನೋಂದಣಿಯಾಗಿದ್ದರೂ ಅದರಲ್ಲಿ ಅರ್ಧದಷ್ಟು ಸದಸ್ಯತ್ವ  ಬೋಗಸ್‌ ಆಗಿದೆ ಎಂದು ಆಪಾದಿಸಿದರು.  

ಸಿಬಂದಿ ಅಸಹಕಾರ
ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಸುನಿಲ್‌ ಕುಮಾರ್‌ ಬಜಾಲ್‌ ಮಾತನಾಡಿ, ಕಾರ್ಮಿಕರಿಗೆ ಸವಲತ್ತುಗಳನ್ನು ವಿಸ್ತರಿಸಲು ಇಲಾಖೆ ಸಿಬಂದಿ ಅಸಹಕಾರ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್‌ ಜಪ್ಪಿನಮೊಗರು ಮಾತನಾಡಿದರು. ಹೋರಾಟದ ನೇತೃತ್ವವನ್ನು ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ, ಸಂತೋಷ್‌ ಶಕ್ತಿನಗರ, ಜಯಂತ ನಾಯ್ಕ, ಕೆ. ಪಿ. ಜೋನಿ, ವಸಂತಿ ಕುಪ್ಪೆಪದವು, ಪ್ರೇಮನಾಥ್‌ ಜಲ್ಲಿಗುಡ್ಡೆ, ಶಿವರಾಮ್‌ ಗೌಡ, ಬಿಜು ಅಗಸ್ಟಿನ್‌, ಶಂಕರ ಮೂಡಬಿದಿರೆ, ವಸಂತ ನಡ, ರಾಮಣ್ಣ ವಿಟ್ಲ, ಸೀತಾರಾಮ್‌ ಶೆಟ್ಟಿ, ಜನಾರ್ದನ ಕುತ್ತಾರ್‌ ಮುಂತಾದವರು ವಹಿಸಿದ್ದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.