ಆಪ್ತ ಸಮಾಲೋಚಕರ ನೇಮಕ: ಉಪಕುಲಪತಿ ಸುತ್ತೋಲೆ
ಮಂಗಳೂರು ವಿವಿ ಸಂಯೋಜಿತ 210 ಕಾಲೇಜು
Team Udayavani, Jul 22, 2019, 5:05 AM IST
ಮಂಗಳೂರು: ವಿದ್ಯಾರ್ಥಿಗಳು ತಪ್ಪು ದಾರಿ ತುಳಿಯದಂತೆ ಮುಂಜಾಗ್ರತೆ ವಹಿಸಲು ಮಂಗಳೂರು ವಿವಿ ಸಂಯೋಜಿತ ಎಲ್ಲ 210 ಕಾಲೇಜುಗಳಲ್ಲಿ ಆಪ್ತ ಸಮಾಲೋಚಕರ ನೇಮಕವಾಗಲಿದೆ. ವಾರಕ್ಕೊಮ್ಮೆ ಅಥವಾ ಪ್ರತಿ ದಿನ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಲಭಿಸಲಿದೆ.
ಆಪ್ತ ಸಮಾಲೋಚಕರನ್ನು ನೇಮಿಸಬೇಕು ಎಂದು ಮಂಗಳೂರು ವಿವಿ ಉಪಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಈಗಾಗಲೇ ಪ್ರಾಂಶುಪಾಲರಿಗೆ ಸುತ್ತೋಲೆ ಕಳುಹಿಸಿದ್ದಾರೆ. ಕೋಪ, ಒತ್ತಡಗಳಿಂದ, ಅಲ್ಪಾವಧಿಯ ಸಂತೋಷಕ್ಕಾಗಿ ಅಥವಾ ಇತರ ಕಾರಣಗಳಿಂದಾಗಿ ವಿದ್ಯಾರ್ಥಿಗಳು ಭವಿಷ್ಯಕ್ಕೆ ಮಾರಕವಾಗುವಂತಹ ಚಟುವಟಿಕೆಗಳಲ್ಲಿ ತೊಡಗದಂತೆ ಮುನ್ನೆಚ್ಚರಿಕೆ ವಹಿಸುವ ಮತ್ತು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ದುರ್ಘಟನೆ ಕಾರಣ
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ತೊಕ್ಕೊಟ್ಟು ಇರಿತ ಸೇರಿದಂತೆ ದಕ್ಷಿಣ ಕನ್ನಡಜಿಲ್ಲೆಯಲ್ಲಿ ಒಂದೆರಡು ತಿಂಗಳಲ್ಲಿ ನಡೆದ ದುರ್ಘಟನೆಗಳನ್ನು ಗಮನದಲ್ಲಿರಿಸಿ, ಇಂಥವು ಮರುಕಳಿಸಬಾರದು ಎಂಬ ಉದ್ದೇಶವನ್ನು ವಿವಿ ಹೊಂದಿದೆ.
ಅಲ್ಲದೆ ಕೆಲವು ಕಾಲೇಜು ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಕ್ಕೆ ಬಲಿ ಬೀಳುತ್ತಿದ್ದಾರೆ. ಅಂಥವರ ಬಗ್ಗೆ ಗಮನಕ್ಕೆ ಬಂದಲ್ಲಿ ಆಪ್ತ ಸಮಾಲೋಚನೆ ನೀಡಿ ಪಾರು ಮಾಡುವ ಉದ್ದೇಶವನ್ನೂ ಇದು ಹೊಂದಿದೆ. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಕಂಡುಬಂದಲ್ಲಿ ಅಥವಾ ಇತರರು ಮಾಹಿತಿ ನೀಡಿದಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಕಾಲೇಜುಗಳ ಆಡಳಿತ ಮಂಡಳಿಗಳು ಮುಂದಾಗಬೇಕು ಎಂದು ವಿವಿ ಉಪ ಕುಲಪತಿ ಪ್ರೊ| ಎಡಪಡಿತ್ತಾಯ ತಿಳಿಸಿದ್ದಾರೆ.
ವಾರಕ್ಕೊಮ್ಮೆ ಕೌನ್ಸೆಲಿಂಗ್
ಕಾಲೇಜುಗಳಲ್ಲಿ ಈಗಾಗಲೇ ಕೌನ್ಸೆಲಿಂಗ್ ವ್ಯವಸ್ಥೆ ಇದ್ದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿಸಬೇಕು. ಇಲ್ಲವಾದಲ್ಲಿ ಶೀಘ್ರ ನೇಮಕ ಮಾಡಬೇಕು. ಆಪ್ತಸಮಾಲೋಚನೆ ಅವಶ್ಯವಿರುವ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಕೌನ್ಸೆಲಿಂಗ್ ನಡೆಸಬಹುದು. ಅಥವಾ ಶಾಶ್ವತ ಸಿಬಂದಿ ನೇಮಿಸಿಕೊಂಡು ದಿನಂಪ್ರತಿ ಕೌನ್ಸೆಲಿಂಗ್ ಅವಶ್ಯವಿರುವವರಿಗೆ ಒದಗುವಂತೆ ನೋಡಿಕೊಳ್ಳಬಹುದು.
– ಪ್ರೊ| ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ, ಉಪ ಕುಲಪತಿ, ಮಂಗಳೂರು ವಿಶ್ವವಿದ್ಯಾನಿಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್