ಆಪ್ತ ಸಮಾಲೋಚಕರ ನೇಮಕ: ಉಪಕುಲಪತಿ ಸುತ್ತೋಲೆ

ಮಂಗಳೂರು ವಿವಿ ಸಂಯೋಜಿತ 210 ಕಾಲೇಜು

Team Udayavani, Jul 22, 2019, 5:05 AM IST

MANGA-VV

ಮಂಗಳೂರು: ವಿದ್ಯಾರ್ಥಿಗಳು ತಪ್ಪು ದಾರಿ ತುಳಿಯದಂತೆ ಮುಂಜಾಗ್ರತೆ ವಹಿಸಲು ಮಂಗಳೂರು ವಿವಿ ಸಂಯೋಜಿತ ಎಲ್ಲ 210 ಕಾಲೇಜುಗಳಲ್ಲಿ ಆಪ್ತ ಸಮಾಲೋಚಕರ ನೇಮಕವಾಗಲಿದೆ. ವಾರಕ್ಕೊಮ್ಮೆ ಅಥವಾ ಪ್ರತಿ ದಿನ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌ ಲಭಿಸಲಿದೆ.

ಆಪ್ತ ಸಮಾಲೋಚಕರನ್ನು ನೇಮಿಸಬೇಕು ಎಂದು ಮಂಗಳೂರು ವಿವಿ ಉಪಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಈಗಾಗಲೇ ಪ್ರಾಂಶುಪಾಲರಿಗೆ ಸುತ್ತೋಲೆ ಕಳುಹಿಸಿದ್ದಾರೆ. ಕೋಪ, ಒತ್ತಡಗಳಿಂದ, ಅಲ್ಪಾವಧಿಯ ಸಂತೋಷಕ್ಕಾಗಿ ಅಥವಾ ಇತರ ಕಾರಣಗಳಿಂದಾಗಿ ವಿದ್ಯಾರ್ಥಿಗಳು ಭವಿಷ್ಯಕ್ಕೆ ಮಾರಕವಾಗುವಂತಹ ಚಟುವಟಿಕೆಗಳಲ್ಲಿ ತೊಡಗದಂತೆ ಮುನ್ನೆಚ್ಚರಿಕೆ ವಹಿಸುವ ಮತ್ತು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ದುರ್ಘ‌ಟನೆ ಕಾರಣ
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ತೊಕ್ಕೊಟ್ಟು ಇರಿತ ಸೇರಿದಂತೆ ದಕ್ಷಿಣ ಕನ್ನಡಜಿಲ್ಲೆಯಲ್ಲಿ ಒಂದೆರಡು ತಿಂಗಳಲ್ಲಿ ನಡೆದ ದುರ್ಘ‌ಟನೆಗಳನ್ನು ಗಮನದಲ್ಲಿರಿಸಿ, ಇಂಥವು ಮರುಕಳಿಸಬಾರದು ಎಂಬ ಉದ್ದೇಶವನ್ನು ವಿವಿ ಹೊಂದಿದೆ.

ಅಲ್ಲದೆ ಕೆಲವು ಕಾಲೇಜು ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಕ್ಕೆ ಬಲಿ ಬೀಳುತ್ತಿದ್ದಾರೆ. ಅಂಥವರ ಬಗ್ಗೆ ಗಮನಕ್ಕೆ ಬಂದಲ್ಲಿ ಆಪ್ತ ಸಮಾಲೋಚನೆ ನೀಡಿ ಪಾರು ಮಾಡುವ ಉದ್ದೇಶವನ್ನೂ ಇದು ಹೊಂದಿದೆ. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಕಂಡುಬಂದಲ್ಲಿ ಅಥವಾ ಇತರರು ಮಾಹಿತಿ ನೀಡಿದಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಕಾಲೇಜುಗಳ ಆಡಳಿತ ಮಂಡಳಿಗಳು ಮುಂದಾಗಬೇಕು ಎಂದು ವಿವಿ ಉಪ ಕುಲಪತಿ ಪ್ರೊ| ಎಡಪಡಿತ್ತಾಯ ತಿಳಿಸಿದ್ದಾರೆ.

ವಾರಕ್ಕೊಮ್ಮೆ ಕೌನ್ಸೆಲಿಂಗ್‌
ಕಾಲೇಜುಗಳಲ್ಲಿ ಈಗಾಗಲೇ ಕೌನ್ಸೆಲಿಂಗ್‌ ವ್ಯವಸ್ಥೆ ಇದ್ದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿಸಬೇಕು. ಇಲ್ಲವಾದಲ್ಲಿ ಶೀಘ್ರ ನೇಮಕ ಮಾಡಬೇಕು. ಆಪ್ತಸಮಾಲೋಚನೆ ಅವಶ್ಯವಿರುವ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಕೌನ್ಸೆಲಿಂಗ್‌ ನಡೆಸಬಹುದು. ಅಥವಾ ಶಾಶ್ವತ ಸಿಬಂದಿ ನೇಮಿಸಿಕೊಂಡು ದಿನಂಪ್ರತಿ ಕೌನ್ಸೆಲಿಂಗ್‌ ಅವಶ್ಯವಿರುವವರಿಗೆ ಒದಗುವಂತೆ ನೋಡಿಕೊಳ್ಳಬಹುದು.

ಅಂಗಡಿಗಳ ಮಾಹಿತಿ ಕಲೆ ಹಾಕಿ

ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷಿದ್ಧವಾದರೂ ಕೆಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಸುಲಭವಾಗಿ ತಂಬಾಕು ಉತ್ಪನ್ನಗಳು, ಮಾದಕ ದ್ರವ್ಯಗಳು ಸಿಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿ ಕಾಲೇಜುಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳ ಸರ್ವ ಮಾಹಿತಿಯನ್ನು ಕಾಲೇಜು ಸಂಬಂಧಿಸಿದವರು ಕಲೆ ಹಾಕಬೇಕು. ಅಲ್ಲದೆ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳನ್ನು ನೀಡುತ್ತಿರುವ ಜಾಲ, ಅದರಲ್ಲಿ ಭಾಗಿಯಾದವರ ಬಗ್ಗೆ ಸಂಶಯವಿದ್ದಲ್ಲಿ ವಿಚಾರಿಸಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪ್ರೊ| ಎಡಪಡಿತ್ತಾಯ ಮನವಿ ಮಾಡಿದ್ದಾರೆ.

ಕಾಲೇಜುಗಳ ವಿದ್ಯಾರ್ಥಿಗಳು ಅನ್ಯ ಮಾರ್ಗ ತುಳಿಯದಂತೆ ಸೂಕ್ತ ಮಾರ್ಗದರ್ಶನ ಮತ್ತು ಅವರ ಮನಃಪರಿವರ್ತನೆ ಮಾಡಲು ಆಪ್ತ ಸಮಾಲೋಚಕರ ಅಗತ್ಯವಿದೆ. ಹಾಗಾಗಿ ವಿವಿ ಸಂಯೋಜಿತ ಎಲ್ಲ ಕಾಲೇಜುಗಳಲ್ಲಿ ಆಪ್ತಸಮಾಲೋಚಕರನ್ನು ನೇಮಿಸಿಕೊಳ್ಳಬೇಕು ಎಂದು ಸುತ್ತೋಲೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಬೆಳಗಿಸುವುದು ಇದರ ಉದ್ದೇಶ.‌
– ಪ್ರೊ| ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ, ಉಪ ಕುಲಪತಿ, ಮಂಗಳೂರು ವಿಶ್ವವಿದ್ಯಾನಿಲಯ

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.