ತೋಟಕ್ಕೆ ಮದ್ದು ಬಿಟ್ಟರೂ ಉದುರುತ್ತಿವೆ ಎಳೆ ಅಡಿಕೆ!


Team Udayavani, Jul 27, 2018, 1:45 AM IST

adike-26-7.jpg

ವಿಶೇಷ ವರದಿ – ಸುಳ್ಯ: ಮಳೆ ಅಬ್ಬರದ ಮಧ್ಯೆ ಅಡಿಕೆ ತೋಟಕ್ಕೆ ಮದ್ದು ಔಷಧ ಸಿಂಪಡಣೆ ತ್ರಾಸದ ಸಂಗತಿ. ಹಾಗಂತ ಮದ್ದು ಬಿಟ್ಟು ನಿರಾಳ ಆದೆವು ಅಂದರೆ, ಪ್ರಯೋಜನ ಇಲ್ಲ. ಕಾರಣ ಉದುರುತ್ತಿರುವ ಎಳೆ ಅಡಿಕೆ ಸಂಖ್ಯೆ ದಿನೇ-ದಿನೇ ವೃದ್ಧಿಯಾಗುತ್ತಿದೆ. ಸುಳ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿಯ ಕೆಲವು ತೋಟಗಳಲ್ಲಿ ಎಳೆ ಅಡಕೆ ಕಾಯಿ ಉದುರುವ ರೋಗ ಕಾಣಿಸಿ ಕೊಂಡಿದೆ. ಕೆಲವರು ಇದು ಕೊಳೆ ರೋಗ ಅನ್ನುತ್ತಾರೆ. ಉಳಿದವರು ಕೀಟ ಸಂಬಂಧಿ ರೋಗ ಆಗಿರುವ ಶಂಕೆ ವ್ಯಕ್ತಪಡಿಸುತ್ತಾರೆ. ಅದೇನಿದ್ದರೂ, ಔಷಧಕ್ಕೆ ಬಗ್ಗದ ರೋಗದಿಂದ ಕೃಷಿಕರು ಕಂಗಲಾಗಿದ್ದಾರೆ. ಕೊಳೆರೋಗದಲ್ಲಿ ಅಡಿಕೆ ಕೊಳೆತು ಉದುರಿದರೆ, ಇಲ್ಲಿ ಕೊಳೆಯದೆ ಬೀಳುತ್ತಿದೆ. ವಿಜ್ಞಾನಿಗಳು ನಾನಾ ಕಾರಣ ಹೇಳಿದರೂ, ರೋಗ ನಿಯಂತ್ರಣ ಸಾಧ್ಯವಾಗುತ್ತಿಲ್ಲ ಅನ್ನುತ್ತಾರೆ ಅಡಿಕೆ ಕೃಷಿಕ ಪೂವಪ್ಪ ಅವರು.

ಏನು ರೋಗ..?
ಇದು ಕೀಟಬಾಧೆಯೋ ಅಥವಾ ಕೊಳೆ ರೋಗವೋ ಎಂಬ ಬಗ್ಗೆ ಬೆಳೆಗಾರರಿಗೆ ಜಿಜ್ಞಾಸೆ ಇದೆ. ಕೀಟ ಬಾಧಿಸಿ ರುವ ತೋಟಗಳಲ್ಲಿ ಉದುರಿರುವ ಎಳೆ ಅಡಿಕೆಗಳಲ್ಲಿ ಕೀಟಗಳು ಪತ್ತೆಯಾಗುತ್ತಿವೆ ಎನ್ನುತ್ತಾರೆ ಕೆಲ ಕೃಷಿಕರು. ವಿಟ್ಲ CPCRIನಲ್ಲಿ ರೋಗದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯುತ್ತಿದೆ. ತೋಟಗಾರಿಕೆ ಇಲಾಖೆ ನಿರ್ದಿಷ್ಟ ಹೆಸರಿನ ಕೀಟನಾಶಕ ಸಿಂಪಡಿಸಿದರೆ ಅದರಿಂದ ಪರಿಹಾರ ಸಾಧ್ಯ ಎಂದಿದ್ದರೂ, ಅದರಿಂದ ಪ್ರಯೋಜನ ಆಗಿಲ್ಲ.

ಮದ್ದು ಸಿಂಪಡಣೆ ಸವಾಲು
ಅನಿರೀಕ್ಷಿತ ಮಳೆಯಿಂದ ಶೇ. 70ಕ್ಕೂ ಅಧಿಕ ಅಡಿಕೆ ಬೆಳೆಗಾರರು ಮದ್ದು ಸಿಂಪಡಣೆ ಮಾಡಿಲ್ಲ. ಬಹುತೇಕ ಕೃಷಿಕರು ಬೋರ್ಡೋ ದ್ರಾವಣ ಬಳಸುವುದು ಸರ್ವೆ ಸಾಮಾನ್ಯ. ಆದರೆ ಮೊದಲ ಹಂತದ ಮದ್ದು ಸಿಂಪಡಣೆಗೆ ಮಳೆ ವಿರಾಮ ಕೊಟ್ಟಿಲ್ಲ. ಕಳೆದ ವರ್ಷ ಇದೇ ಅವಧಿಯಲ್ಲಿ ಕೆಲ ತೋಟಗಳಲ್ಲಿ ಮೂರನೇ ಬಾರಿ ಮದ್ದು ಸಿಂಪಡಿಸಲಾಗಿತ್ತು. ಹಾಗಾಗಿ ಮದ್ದು ಬಿಡದೆ ಇನ್ನಷ್ಟು ರೋಗ ಬಾಧೆಯ ಆತಂಕವೂ ಮೂಡಿದೆ.

ಮದ್ದು ಸಿಂಪಡಣೆಗೆ ಸಿದ್ಧತೆ ನಡೆಸಿದವರಿಗೆ ಜಡಿಮಳೆ ಅಡ್ಡಿಯಾಗಿತ್ತು. ಅಪರೂಪಕ್ಕೆ ಬಿಸಿಲು ಕಾಣಿಸಿಕೊಂಡಾಗ ಸಣ್ಣಪುಟ್ಟ ತೋಟಗಳಿಗೆ ಔಷಧ ಸಿಂಪಡಿಸಿದ್ದೂ ಇದೆ. ಈ ವೇಳೆ ಕಾರ್ಮಿಕರು ಸಿಗುತ್ತಿಲ್ಲ. ಅಷ್ಟೊಂದು ಬೇಡಿಕೆ ಇದೆ. ಬೇಸಗೆಯಲ್ಲಿ ನೀರಿಲ್ಲದೆ ಬರಡಾಗಿದ್ದ ಅಡಿಕೆ ತೋಟಗಳಿಗೆ ಈ ಬಾಧೆ ತುಸು ಕಡಿಮೆ. ಬೇಸಗೆಯಲ್ಲಿ ಯಥೇತ್ಛವಾಗಿ ನೀರು ಹಾಯಿಸಿದ ತೋಟಗಳಲ್ಲಿ, ನದಿತಟದ ಭಾಗಗಳಲ್ಲಿ ರೋಗ ಹೆಚ್ಚು ಕಾಣುತ್ತಿದೆ.

ರೋಗಗಳ ಸಾಲು
ತಾಲೂಕಿನಲ್ಲಿ  ಹಳದಿ ರೋಗ, ಬೇರು ಹುಳ ರೋಗ ಸಹಿತ ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ತತ್ತರಿಸಿದ್ದಾರೆ. ವರ್ಷದಿಂದ ವರ್ಷಕ್ಕೆ ಈ ಸಮಸ್ಯೆ ಕಡಿಮೆಯಾಗುತ್ತಿಲ್ಲ. ಈಗ ಕೀಟಬಾಧೆ, ಅಬ್ಬರದ ಮಳೆಯಿಂದ ಕೊಳೆರೋಗ ಭೀತಿ. ಬೆಳೆಗಾರರು ನೀಡುವ ಮಾಹಿತಿ ಪ್ರಕಾರ ಈ ಬಾರಿ ನಷ್ಟದ ಪ್ರಮಾಣ ದುಪ್ಪಟ್ಟಾಗಲಿದೆ.

ರೋಗ ಇದೆ
ಮದ್ದು ಸಿಂಪಡಣೆ ಕಷ್ಟ. ನಿರಂತರ ಮಳೆಯ ಪರಿಣಾಮ ಮದ್ದು ಸಿಂಪಡಣೆ ಸಾಧ್ಯವಾಗುತ್ತಿಲ್ಲ. 2013ರಲ್ಲೂ ಇದೇ ರೀತಿಯ ಮಳೆಯಾಗಿ ಕೊಳೆರೋಗ ಬಾಧಿಸಿತ್ತು. ಹಲವು ತೋಟಗಳಲ್ಲಿ ಅಡಿಕೆ ಉದುರುತ್ತಿರುವ ಮಾಹಿತಿ ಇದೆ. 
– ಎಂ.ಡಿ.ವಿಜಯಕುಮಾರ್‌, ಅಡಿಕೆ ಕೃಷಿಕರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.