ಶತಮಾನೋತ್ಸವ ಸಂಭ್ರಮದಲ್ಲಿ ಅರಂತೋಡು ಹಿರಿಯ ಪ್ರಾಥಮಿಕ ಶಾಲೆ


Team Udayavani, Jun 5, 2018, 6:30 PM IST

aranthodu-5-6.jpg

ಬೆಳ್ಳಾರೆ: ಅರಂತೋಡು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಹಲವು ಬೇಡಿಕೆಗಳ ಈಡೇರಿಕೆಗೆ ಎದುರು ನೋಡುತ್ತಿದೆ. ಈ ಶಾಲೆ ಸಾಂಸ್ಕೃತಿಕ, ಕ್ರೀಡಾ ಸಾಧನೆಯಿಂದ ತಾಲೂಕು ಮಟ್ಟದಲ್ಲಿ ಗಮನ ಸೆಳೆದಿದ್ದು, ಉತ್ತಮ ಶಿಕ್ಷಕ, ಎಸ್‌ಡಿಎಂಸಿ ವೃಂದವನ್ನು ಹೊಂದಿದೆ. 162 ವಿದ್ಯಾರ್ಥಿಗಳು ಪ್ರಾಥಮಿಕ ತರಗತಿಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಉನ್ನತೀಕರಿಸಿದ ಶಾಲೆಯಾದರೂ ಪದವೀಧರ ಶಿಕ್ಷಕರ ಕೊರತೆಯಿಂದ ಒಂದು ವರ್ಷ ಮಾತ್ರ ತರಗತಿ ನಡೆಸಲು ಸಾಧ್ಯವಾಗಿದೆ. ಇಲ್ಲಿ ಒಟ್ಟು 8 ಮಂಜೂರಾತಿ ಶಿಕ್ಷಕರ ಹುದ್ದೆ ಇದ್ದು, ಈಗ ಆರು ಶಿಕ್ಷಕರು ಮಾತ್ರ ಇದ್ದಾರೆ. ಎಂಟು ವರ್ಷಗಳಿಂದ ಇಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಬಿದ್ದಿದೆ. ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿ ಅವರು ಪ್ರಭಾರ ಮುಖ್ಯ ಶಿಕ್ಷಕ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

ಬೇಡಿಕೆಗಳು
ಇಲ್ಲಿಯ 6ನೇ ತರಗತಿ ಮತ್ತು ಕಂಪ್ಯೂಟರ್‌ ಕೊಠಡಿ ಇರುವ ಆರ್‌ಸಿಸಿ ಕಟ್ಟಡ ಸೋರುತ್ತಿದೆ. ವಾಚನಾಲಯಕ್ಕೆ ಪೀಠೊಪಕರಣದ ಕೊರತೆಯಿದೆ. ಮುಖ್ಯ ಶಿಕ್ಷಕರಿಲ್ಲ. ಕ್ರೀಡಾಂಗಣಕ್ಕೆ ಆವರಣ ಗೋಡೆ ಇಲ್ಲ. ಸೋರುತ್ತಿರುವ ಆರ್‌.ಸಿ.ಸಿ. ಕಟ್ಟಡಕ್ಕೆ ತಗಡಿನ ಮೇಲ್ಛಾವಣಿ ನಿರ್ಮಿಸಬೇಕಿದೆ. ಶಾಲೆಯ ಬಳಿರುವ ಕ್ರೀಡಾಂಗಣಕ್ಕೆ ಸಂಪೂರ್ಣ ಆವರಣ ಗೋಡೆ ಇಲ್ಲ. ಇದಕ್ಕೆ ಸಂಪೂರ್ಣ ಆವರಣ ಗೋಡೆ ಹಾಗೂ ಶಾಲೆಯಿಂದ 150 ಮೀಟರ್‌ ಅಂತರದಲ್ಲಿ ಇರುವ ಕ್ರೀಡಾಂಗಣಕ್ಕೆ ಆವರಣ ಗೋಡೆ ನಿರ್ಮಾಣ ಮಾಡಬೇಕಾಗಿದೆ.ಬಿಸಿಯೂಟದ ಸಹಭೋಜನ ಕೊಠಡಿ, ಕಲಿಕೋದ್ಯಾನವನ ನಿರ್ಮಾಣದ ಜತೆಗೆ ವೃತ್ತಿ ಶಿಕ್ಷಕರ ನೇಮಕ ಆಗಬೇಕಾಗಿದೆ. ವಾಚನಾಲಯ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅದಕ್ಕೆ ನೂತನ ಕಟ್ಟಡ, ಪೀಠೊಪಕರಣ ಒದಗಿಸಬೇಕಿದೆ. ವಿಷಯ ಶಿಕ್ಷಕರು ಬೇಕು. ಗುಮಾಸ್ತ, ಜವಾನರ ನೇಮಕವಾಗಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ. 

ಹೆಚ್ಚು ದಾಖಲಾತಿ
ಪ್ರಸ್ತುತ ಶೈಕ್ಷಣಿಕ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿ ಆಗಿದ್ದಾರೆ. ಕಳೆದ ವರ್ಷ 11 ವಿದ್ಯಾರ್ಥಿಗಳು ದಾಖಲುಗೊಂಡರೆ, ಈ ವರ್ಷ 19 ವಿದ್ಯಾರ್ಥಿಗಳು ಶಾಲೆಗೆ ಸೇರಿದ್ದಾರೆ. 2019ನೇ ಇಸವಿಯಲ್ಲಿ ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ನಡೆಸುವ ಬಗ್ಗೆ ಈಗಾಗಲೇ ಸಮಿತಿ ರಚನೆಗೊಂಡಿದೆ.

ಶಾಲೆಗೆ ಭೇಟಿ ನೀಡುವೆ
ಅರಂತೋಡು ಸರಕಾರಿ ಉನ್ನತೀಕರಿಸಿದ ಶಾಲೆ ಶತಮಾನೋತ್ಸವ ಆಚರಣೆ ಸಂಭ್ರಮದಲ್ಲಿರುವುದು ತಿಳಿದಿದೆ. ಇಲ್ಲಿಯ ಸಮಸ್ಯೆಯ ಬಗ್ಗೆ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿ, ಇಲಾಖೆಗೆ ಬರೆಯುತ್ತೇನೆ.
– ಲಿಂಗರಾಜ್‌ ಅರಸ್‌, ಕ್ಷೇತ್ರ ಶಿಕ್ಷಣಾಧಿಕಾರಿ, ಸುಳ್ಯ

ಕಟ್ಟಡ ಸೋರುತ್ತಿದೆ
ಶಾಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಮುಖ್ಯವಾಗಿ ಆರ್‌ಸಿಸಿ ಕಟ್ಟಡ ಸೋರುತ್ತಿದ್ದು, ಇದಕ್ಕೆ ತಗಡಿನ ಮೇಲ್ಛಾವಣಿಯ ನಿರ್ಮಾಣ, ಕ್ರೀಡಾಂಗಣಕ್ಕೆ ಆವರಣ ಗೋಡೆ, ಬಿಸಿಯೂಟ ಭೋಜನ ಕೊಠಡಿ ಸಹಿತ ಕೆಲವು ಮುಖ್ಯ ಬೇಡಿಕೆಗಳಿವೆ.
– ವೆಂಕಟ್ರಮಣ ಮೇರ್ಕಜೆ, ಎಸ್‌.ಡಿ.ಎಂ.ಸಿ. ಅಧ್ಯಕ್ಷ

— ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.