ಅರಂತೋಡು: ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಮತ್ತೆ ಗ್ರಹಣ!

ಅನುದಾನದ ಕೊರತೆಯಿಂದ ಹಿನ್ನಡೆಯಾಗುತ್ತಿದೆ ಎಂದ ಅಧಿಕಾರಿಗಳು

Team Udayavani, Mar 27, 2019, 10:39 AM IST

27-March-3

ಅರಂತೋಡು ಗ್ರಾ.ಪಂ. ಗ್ರಂಥಾಲಯದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ.

ಅರಂತೋಡು : ಅರಂತೋಡು ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಎರಡು ವರ್ಷ ಕಳೆದು ಅನಂತರದಲ್ಲಿ ಕಾಮಗಾರಿ ಪ್ರಾರಂಭ ಗೊಂಡರೂ, ಮತ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿರುವ ಅರಂತೋಡು ಸಾರ್ವಜನಿಕ ಗ್ರಂಥಾಲಯ ಈಗ ಗ್ರಾ.ಪಂ. ಪಕ್ಕದ ಹಳೆಯ ಕಟ್ಟಡದಲ್ಲಿದೆ. ಮೂರು ವರ್ಷಗಳ ಹಿಂದೆ ಇಲಾಖೆಯಿಂದ ಮಂಜೂರಾದ 10 ಲಕ್ಷ ರೂ. ಅನುದಾನಕ್ಕೆ ತಕ್ಕಂತೆ ನೀಲ ನಕಾಶೆ ತಯಾರಿಸಿ ಸರಕಾರಿ ಹಿ.ಪ್ರಾ. ಶಾಲೆ ಸಮೀಪ ಇಲಾಖೆಯ ಗ್ರಂಥಾಲಯ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು.
ನಿರ್ಮಿತಿ ಕೇಂದ್ರದವರು ಕಾಮಗಾರಿಯ ಉಸ್ತುವಾರಿ ವಹಿಸಿ ಕೊಂಡಿದ್ದರು. ಮಂಜೂರುಗೊಂಡ 10 ಲಕ್ಷ ರೂ. ಅನುದಾನದಲ್ಲಿ ಮೊದಲ ಹಂತದಲ್ಲಿ 5 ಲಕ್ಷ ರೂ. ಮಾತ್ರ ಬಿಡುಗಡೆ ಗೊಂಡಿತ್ತು. ಉಳಿದ 5 ಲಕ್ಷ ರೂ. ಅನುದಾನ ಬಿಡುಗಡೆಗೊಳ್ಳದ ಹಿನ್ನೆಲೆ ಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಕಳೆದ ಜನವರಿ ತಿಂಗಳಲ್ಲಿ ಮತ್ತೆ 5 ಲಕ್ಷ ರೂ. ಅನುದಾನ ಬಿಡುಗಡೆ ಗೊಂಡು ಕಾಮಗಾರಿಯನ್ನು ಪುನರಾರಂಭಿಸಲಾಗಿತ್ತು. ಇದೀಗ ಆಮೆ ನಡಿಗೆಯಲ್ಲಿ ಕಾಮಗಾರಿ ಸಾಗುತ್ತಿದೆ. ವಾರಕ್ಕೆ ಒಂದೆರಡು ದಿನ ಮಾತ್ರ ಕೆಲಸ ನಡೆಸಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.
ಕೆಲಸಗಳೆಲ್ಲ ಬಾಕಿ ಇವೆ
ಶೌಚಾಲಯ ನಿರ್ಮಾಣವಾಗಿದ್ದರೂ ಅದಕ್ಕೆ ಬಾಗಿಲು ನಿರ್ಮಿಸಿಲ್ಲ. ವಿದ್ಯುತ್‌ ಸಂಪರ್ಕಕ್ಕೆ ವೈರಿಂಗ್‌ ಆಗಿಲ್ಲ. ಪೈಪ್‌ ಲೈನ್‌ ಆಗಿಲ್ಲ. ನೀರಿನ ಸೌಲಭ್ಯಕ್ಕೆ ಟ್ಯಾಂಕ್‌ ಅಳವಡಿಸಿಲ್ಲ. ಆವರಣಗೋಡೆ ಆಗಿಲ್ಲ. ಗ್ರಂಥಾಲಯಕ್ಕೆ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿಲ್ಲ. ಹೀಗೆ ಇತರ ಕೆಲಸಗಳು ಬಾಕಿ ಉಳಿದಿವೆ.
ಅರಂತೋಡು ಗ್ರಂಥಾಲಯ ಕಟ್ಟಡದ ಕಾಮಗಾರಿ ಆರಂಭಿಸಿ 8 ತಿಂಗಳ ಬಳಿಕ ಕಾಮಗಾರಿ ಪ್ರಾರಂಭಿಸಿದ್ದ ದೇವಚಳ್ಳ ಗ್ರಂಥಾಲಯ ಕಾಮಗಾರಿ ಪೂರ್ಣಗೊಂಡು ಒಂದು ವರ್ಷದಿಂದ ಹೊಸ ಕಟ್ಟಡದಲ್ಲಿ ಕಾರ್ಯ ನಿರ್ವಾಹಿಸುತ್ತಿದೆ. ದೇವಚಳ್ಳ ಗ್ರಂಥಾಲಯಕ್ಕಿಂತ 8 ತಿಂಗಳು ಮೊದಲು ಪ್ರಾರಂಭಿಸಿದ್ದ ಅರಂತೋಡು ಗ್ರಂಥಾಲಯ ಕಾಮಗಾರಿ ಮಾತ್ರ ಪೂರ್ಣಗೊಳ್ಳದಿರುವುದು ವಿಪರ್ಯಾಸ.
ಸೂಕ್ತ ಕ್ರಮ ಕೈಗೊಳ್ಳಿ
ಅರಂತೋಡು ಲೈಬ್ರೆರಿ ಕಟ್ಟಡ ಕಾಮಗಾರಿ ಕೆಲಸ ನಿಲ್ಲಿಸಿ ಎರಡು ವರ್ಷ ಕಳೆದ ಬಳಿಕ ಮತ್ತೆ ಕಾಮಗಾರಿ ಆರಂಭಿಸಿ ತಿಂಗಳು ಎರಡು ಹತ್ತಿರವಾಗುತ್ತಿದ್ದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳದಿರುವುದು ವಿಪರ್ಯಾಸ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಮಗಾರಿ ಸ್ಥಗಿತಗೊಳಿಸಿರುವುದು ವಾಚಕರಿಗೆ ಬೇಸರ ತರಿಸಿದೆ ಎಂದು ಗ್ರಂಥಾಲಯದ ಒದುಗ ಆಶ್ರಫ್ ಗುಂಡಿ ಹೇಳಿದ್ದಾರೆ.
ಚರ್ಚಿಸಲಾಗಿದೆ
ಲೈಬ್ರೆರಿ ಕಾಮಗಾರಿ ಕೊನೆ ಹಂತದಲ್ಲಿದೆ. ಈ ಹಿಂದೆ ನಾನು ಕೂಡ ಸಂಬಂಧಪಟ್ಟವರಲ್ಲಿ ಈ ಬಗ್ಗೆ ಚರ್ಚಿಸಿದ್ದೆ. ಸದ್ಯದಲ್ಲಿಯೇ ಲೈಬ್ರೆರಿ ಜನರ ಉಪಯೋಗಕ್ಕೆ ಲಭ್ಯವಾಗುವ ಆಶಾಭಾವನೆ ಇದೆ.
– ಶಿವಾನಂದ ಉಪಾಧ್ಯಕ್ಷರು,
ಅರಂತೋಡು ಗ್ರಾ.ಪಂ.
ಶೀಘ್ರ ಪೂರ್ಣ
ಎರಡನೇ ಹಂತದ ಅನುದಾನ ಬಿಡುಗಡೆ ತಡವಾದ ಕಾರಣ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿ ನಿರಂತರವಾಗಿ ನಡೆಸಲು ಸಮಸ್ಯೆಯಾಗಿದೆ. ಆದಷ್ಟು ಬೇಗನೆ ಕಾಮಗಾರಿ ಮಗಿಸಿಕೊಡುತ್ತೇವೆ.
– ರಾಜೇಂದ್ರ, 
ನಿರ್ದೇಶಕ ನಿರ್ಮಿತಿ ಕೇಂದ್ರ, ಸುರತ್ಕಲ್‌
ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.