ಅರಂತೋಡು: ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಸ್ಥಗಿತ 


Team Udayavani, Feb 15, 2018, 11:27 AM IST

15-Feb-6.jpg

ಬೆಳ್ಳಾರೆ : ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಿ ಮೂರು ವರ್ಷ ಸಂದರೂ ಇನ್ನೂ ಅಪೂರ್ಣಗೊಂಡಿದೆ.

ಈ ಗ್ರಂಥಾಲಯ ರಾಜ್ಯ ಗ್ರಂಥಾಲಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು, ಜಿಲ್ಲಾ ಗ್ರಂಥಾಲಯದ ಅಧೀನಲ್ಲಿದೆ. ಹಲವಾರು ವರ್ಷಗಳಿಂದ ಸ್ವಂತ ಕಟ್ಟಡ ಇಲ್ಲದೆ ಇಲ್ಲಿಯ ಗ್ರಾಮ ಪಂಚಾಯತ್‌ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ನಿರ್ಮಿಸುವಂತೆ ಸ್ಥಳಿಯ ಗ್ರಾಮ ಪಂಚಾಯತ್‌ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಮಂಜೂರಾಯಿತು.

2016ರ ಎ. 20ರಂದು ಗ್ರಂಥಾಲಯ ಕಟ್ಟಡದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಇದೀಗ ಗ್ರಂಥಾಲಯ ಕಾಮಗಾರಿ ಕೈಗೆತ್ತಿಕೊಂಡು ಎರಡು ವರ್ಷ ಕಳೆಯುತ್ತ ಬಂದರೂ ಇನ್ನೂ ಕಾಮಗಾರಿ ಅಪೂರ್ಣವಾಗಿರುವುದು ಸ್ಥಳೀಯರಲ್ಲಿ ಅಸಮಾಧಾನ ಮೂಡಿಸಿದೆ.

ನಿರ್ಮಿತಿ ಕೇಂದ್ರದವರು ಕಟ್ಟಡ ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇಲಾಖೆಯಿಂದ ಒಟ್ಟು 10 ಲಕ್ಷ ರೂ. ಅನುದಾನದಲ್ಲಿ 5 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ. ಇನ್ನೂ ಅರ್ಧಾಂಶ ಹಣ ಬಿಡುಗಡೆಯಾಗಲು ಬಾಕಿ ಉಳಿದಿದ್ದು, ಕಾಮಗಾರಿ ಮುಂದುವರಿಸಲು ಅಸಾಧ್ಯವಾಗಿದೆ. ಕಟ್ಟಡದ ಸ್ಲ್ಯಾಬ್‌ ಕೆಲಸ ತನಕ ಪೂರ್ಣವಾಗಿದೆ.

ಶೌಚಾಲಯ, ನೀರಿನ ವ್ಯವಸ್ಥೆ, ವಿದ್ಯುತ್‌ ಸಂಪರ್ಕ ಮುಂತಾದ ಪ್ರಮುಖ ಕೆಲಸಗಳು ಬಾಕಿ ಉಳಿದಿವೆ. ಕಟ್ಟಡದ ಒಳಗಡೆ ಕೆಲವರು ಈ ಹಿಂದೆ ಮೋಜು-ಮಸ್ತಿ ಮಾಡಿ ಗಲೀಜು ಮಾಡುತ್ತಿದ್ದರು. ತಿಂಗಳ ಹಿಂದೆಯಷ್ಟೆ ಕಟ್ಟಡಕ್ಕೆ ಬಾಗಿಲು ನಿರ್ಮಾಣ ಮಾಡಿ ಬೀಗ ಜಡಿಯಲಾಗಿದೆ.

ದೇವಚಳ್ಳದಲ್ಲಿ…
2016ನೇ ಅಕ್ಟೋಬರ್‌ ತಿಂಗಳಿನಲ್ಲಿ ದೇವಚಳ್ಳದಲ್ಲಿ ಗ್ರಂಥಾಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗಿತ್ತು. ಇದಕ್ಕೂ ಇಲಾಖೆಯಿಂದ ರೂ.10 ಲಕ್ಷ ರೂ. ಅನುದಾನ ಮಂಜೂರಾಗಿ ಬಿಡುಗಡೆಯೂ ಆಗಿದೆ. ಆದರೆ. ಅದಕ್ಕೂ ಐದು ತಿಂಗಳ ಮೊದಲೇ ಅರಂತೋಡು ಗ್ರಂಥಾಲಯದ ಕಾಮಗಾರಿ ಶುರು ಮಾಡಿದ್ದರೂ ಪೂರ್ಣ ಅನುದಾನ ದೊರೆಯದಿರುವುದು ಅಚ್ಚರಿ ಮೂಡಿಸಿದೆ. ಇಲಾಖೆ ಅರಂತೋಡು ಗ್ರಂಥಾಲಯಕ್ಕೆ ಬಾಕಿ ಉಳಿದ 5 ಲಕ್ಷ ರೂ. ಅನುದಾನವನ್ನು ತತ್‌ ಕ್ಷಣ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೂಡಲೇ ಆರಂಭ
ಬಿಡುಗಡೆಯಾಗಿದೆ. ಇನ್ನೂ 5 ಲಕ್ಷ ರೂ. ಬಿಡುಗಡೆಯಾಗಲು ಬಾಕಿ ಉಳಿದಿದೆ. ಅನುದಾನ ಬಿಡುಗಡೆಯಾದ ಕೂಡಲೇ
ಕಾಮಗಾರಿ ಪ್ರಾರಂಭಿಸಲಾಗುವುದು.
– ಹರೀಶ್‌
ಎಂಜಿನಿಯರ್‌ ನಿರ್ಮಿತಿ ಕೇಂದ್ರ

ಅನುದಾನ ಕೊಡಿ
ಗ್ರಂಥಾಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಿ ಎರಡು ವರ್ಷವಾಗುತ್ತಿದೆ. ಅನುದಾನದ ಕೊರತೆಯಿಂದ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ಇಲಾಖೆ ತಕ್ಷಣ ಅನುದಾನ ಬಿಡುಗಡೆ ಮಾಡಿ ಕಟ್ಟಡ ಸಾರ್ವಜನಿಕ ಅನುಕೂಲಕ್ಕೆ ಅವಕಾಶ ಮಾಡಿಕೊಡಬೇಕು.
– ಅಶ್ರಫ್ ಗುಂಡಿ
  ಸ್ಥಳೀಯರು

ಕಾಮಗಾರಿ ಮುಗಿಸಲಿ
ಈ ಗ್ರಂಥಾಲಯ ಅನೇಕ ವರ್ಷಗಳಿಂದ ನಮ್ಮ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಲೈಬ್ರರಿ ಇರುವ ಕಟ್ಟಡದ ವಿಸ್ತರಣೆ ಕಾಮಗಾರಿ ನಡೆಯಲಿದೆ. ನಮ್ಮ ಕಟ್ಟಡ ನಮಗೆ ಬಹಳ ಅಗತ್ಯ ಇದೆ. ಇಲಾಖೆ ಇದರ ಬಗ್ಗೆ ಗಮನ ಹರಿಸಿ ಸ್ಥಗಿತಗೊಂಡ ಗ್ರಂಥಾಲಯ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಬೇಕಾಗಿದೆ.
– ಜಯಪ್ರಕಾಶ್‌
 ಅರಂತೋಡು ಪಿಡಿಒ

ತೇಜೇಶ್ವರ್‌ ಕುಂದಲ್ಪಾಡಿ 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.