ಅರಂತೋಡಿನ ಸಂತೆ ಮಾರುಕಟ್ಟೆ ಪ್ರಾಂಗಣ  ಈಗ ವಾಹನ ಶೆಡ್‌


Team Udayavani, Mar 17, 2018, 11:55 AM IST

17-March-6.jpg

ಅರಂತೋಡು: ಅರಂತೋಡು ಸಂತೆ ಮಾರುಕಟ್ಟೆ ಪ್ರಾಂಗಣ ಈಗ ವಾಹನ ಶೆಡ್‌ ಆಗಿ ಪರಿವರ್ತನೆಗೊಂಡಿದೆ. 7 ವರ್ಷಗಳ ಹಿಂದೆ ಸುಳ್ಯ ಎಪಿಎಂಸಿ ವತಿಯಿಂದ ಸಂತೆ ಮಾರುಕಟ್ಟೆ ಪ್ರಾಂಗಣವನ್ನು ಅರಂತೋಡಿನ ಗ್ರಾಮಕರಣಿಕರ ಕಚೇರಿ ಬಳಿ ನಿರ್ಮಿಸಿ ಬಳಿಕ ಅದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗಿತ್ತು. ಅನಂತರದ 2-3 ವರ್ಷಗಳ ಕಾಲ ವಾರದ ಸಂತೆಯು ಇಲ್ಲಿ ಸರಾಗವಾಗಿ ನಡೆಯುತ್ತಿತ್ತು. ಆದರೆ ಇಂದು ಈ ಸಂತೆ ಮಾರುಕಟ್ಟೆಯ ಪ್ರಾಂಗಣ ಸುಸಜ್ಜಿತವಾಗಿದ್ದರೂ ವಾರದ ಸಂತೆ ನಡೆಯುತ್ತಿಲ್ಲ. ಒಂದೆರಡು ತರಕಾರಿ ವ್ಯಾಪರಸ್ಥರು ಅಪರೂಪಕ್ಕೊಮ್ಮೆ ಬಂದು ರಸ್ತೆ ಬದಿಯಲ್ಲೇ ವ್ಯಾಪಾರ ಮಾಡಿ ಹೋಗುತ್ತಾರೆ. ಬರೀ ಇಷ್ಟಕ್ಕೇ ಇದು ಬಳಕೆಯಾಗುತ್ತಿದೆ.

ಸುಸಜ್ಜಿತ ಕಟ್ಟಡ
ಅರಂತೋಡಿನಲ್ಲಿ ಎಪಿಎಂಸಿ ವತಿಯಿಂದ ನಿರ್ಮಾಣವಾದ ಸಂತೆ ಮಾರುಕಟ್ಟೆ ಪ್ರಾಂಗಣ ಸುಸಜ್ಜಿತವಾಗಿದೆ. ಪ್ರತಿವಾರ ಸಂತೆ ವಹಿವಾಟು ನಡೆಯದ ಕಾರಣ ಇತರ ವಾಣಿಜ್ಯ ವ್ಯವಹಾರ ನಡೆಸಲು ಸ್ಥಳೀಯ ಗ್ರಾ. ಪಂ. ಈ ಬಗ್ಗೆ ಕಾರ್ಯ ಪ್ರವೃತ್ತವಾಗಬೇಕು. ಪ್ರತಿವಾರ ಸಂತೆ ಮಾರುಕಟ್ಟೆ ನಡೆಯುವುದರಿಂದ ಸ್ಥಳೀಯ ಗ್ರಾ.ಪಂ.ಗಳಿಗೂ ಆದಾಯ ಬರುತ್ತದೆ. ವಾಣಿಜ್ಯ ವ್ಯವಹಾರ ನಡೆಸುವವರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಇದು ಬಹಳ ಉಪಯುಕ್ತವಾದ ಅವಕಾಶ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಮೀಪದಲ್ಲೂ ಸಂತೆ ಇಲ್ಲ
ಸಮೀಪದ ಭಜನ ಮಂದಿರದ ಬಳಿ ಸುಮಾರು 15 ವರ್ಷಗಳ ಹಿಂದೆ ಸ್ಥಳೀಯ ಗ್ರಾ.ಪಂ. ವತಿಯಿಂದ ನಿರ್ಮಾಣವಾದ ಸಂತೆ ಮಾರುಕಟ್ಟೆಯಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಂತೆ ಮಾರುಕಟ್ಟೆ ಪ್ರಾಂಗಣ ಈಗ ಸಂಪುರ್ಣ ನಾದುರಸ್ತಿಯಲ್ಲಿದ್ದು, ಅಭಿವೃದ್ಧಿಯನ್ನು ಎದುರುನೋಡುತ್ತಿದೆ.

ಬಳಕೆಯಾಗಲಿ
ಸಂತೆ ಮಾರುಕಟ್ಟೆಯ ವಿನ್ಯಾಸ ಹಾಗೂ ಅನುಕೂಲಗಳು ಒಳ್ಳೆಯ ಸ್ಥಿತಿಯಲ್ಲಿವೆ. ಆದರೆ ವ್ಯಾಪಾರಸ್ಥರು ಇದನ್ನು ಸದ್ಭಳಕೆ ಮಾಡುತ್ತಿಲ್ಲ. ಸಂತೆ ಮಾರುಕಟ್ಟೆಯನ್ನು ಗ್ರಾಮ ಪಂಚಾಯತ್‌ ಇತರ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುವಂತೆ ಕ್ರಮಕೈಗೊಳ್ಳಲಿ.
– ಹರೀಶ್‌, ಸ್ಥಳೀಯರು

‌ಚರ್ಚಿಸಿ ನಿರ್ಣಯ
ಇದೀಗ ಅನೇಕ ವರ್ಷಗಳಿಂದ ಸಂತೆ ಮಾರುಕಟ್ಟೆ ಪ್ರಾಂಗಣ ಈಗ ವಾಹನ್‌ ಪಾರ್ಕಿಂಗ್‌ ಶೆಡ್ಡ್ ಆಗಿ ಪರಿವರ್ತನೆಗೊಂಡಿದೆ. ಯಾರು ಕೂಡ ಇಲ್ಲಿ ವ್ಯಾಪಾರ ವ್ಯವಹಾರ ನಡೆಸುವುದಿಲ್ಲ. ಜನರಿಂದ ಬೇಡಿಕೆ ಬರುತ್ತಿಲ್ಲ. ವ್ಯಾಪಾರಸ್ಥರು ಇದನ್ನು ಉಪಯೋಗಿಸಿಕೊಳ್ಳಬಹುದು. ಮುಂದಿನ ಗ್ರಾಮ ಸಭೆಯಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು.
– ಜಯಪ್ರಕಾಶ್‌ ಪಿ.ಡಿ.ಒ.
ಗ್ರಾಮ ಪಂಚಾಯತ್‌ ಅರಂತೋಡು.

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.