ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ


Team Udayavani, Jul 4, 2023, 7:00 AM IST

ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ

ಮಂಗಳೂರು/ಉಡುಪಿ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರ್ದ್ರಾ ನಕ್ಷತ್ರದ ಕೊನೆಯ ಪಾದದಲ್ಲಿ ಒಂದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮ ವಾರ ಬಿರುಸುಗೊಂಡಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ.

ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಗುಲಾಬಿ (43) ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಅಂಗಡಿ ಮೊಗರಿನಲ್ಲಿ ಗಾಳಿ ಮಳೆಯಿಂದಾಗಿ ಮರ ಉರುಳಿ ಆಯಿಷತ್‌ ಮಿನ್ಹಾ (11) ಸಾವನ್ನಪ್ಪಿದ್ದಾಳೆ.

ಪಂಪ್‌ವೆಲ್‌, ಕೊಟ್ಟಾರಚೌಕಿ ಜಲಾವೃತ
ಮಳೆಯಿಂದಾಗಿ ಮಂಗಳೂರು ನಗರದಲ್ಲಿ ಅವಾಂತರಗಳ ಸರಮಾಲೆಯೇ ಉಂಟಾಗಿದ್ದು, ಪಂಪ್‌ವೆಲ್‌ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಹಲವು ತಾಸುಗಳ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು. ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪಂಪ್‌ವೆಲ್‌ ಪ್ಲೈಓವರ್‌ ಕೆಳಭಾಗದಲ್ಲಿ ಸೋಮವಾರ ಸಂಜೆ ನೆರೆ ನೀರು ತುಂಬಿ ಭಾರೀ ಸಮಸ್ಯೆಯಾಯಿತು. ಪ್ಲೈಓವರ್‌ ಕೆಳಗೆ ಸುಮಾರು 3 ಅಡಿಗಳಷ್ಟು ನೀರು ನಿಂತು ಆತಂಕ ಸೃಷ್ಟಿಸಿತು. ಸುಮಾರು ಒಂದು ತಾಸು ನಿರಂತರ ಸುರಿದ ಮಳೆ ಯಿಂದಾಗಿ ಹತ್ತಿರದ ರಾಜಕಾಲುವೆ ಉಕ್ಕಿ ಹರಿದು ಸಮಸ್ಯೆಗೆ ಕಾರಣವಾಯಿತು. ಪ್ಲೈಓವರ್‌ನ ಎರಡೂ ಭಾಗದ ಸರ್ವೀಸ್‌ ರಸ್ತೆಗಳು ಹಾಗೂ ಅಕ್ಕಪಕ್ಕದ ಪ್ರದೇಶವೂ ಜಲಾ ವೃತಗೊಂಡಿತು. ನಾಲ್ಕೂ ಭಾಗದ ವಾಹನಗಳು ಕಿ.ಮೀ.ಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಯಿತು.

ಉಡುಪಿ ಜಿಲ್ಲೆಯಲ್ಲಿಯೂ ಹಲವು ಕಡೆ ಮನೆಗಳ ಮೇಲೆ ಮರ ಉರುಳಿದ, ಆವರಣ ಗೋಡೆ ಕುಸಿದ, ನೆರೆಯಿಂದ ಸಂಕಷ್ಟ ಉಂಟಾದ ಘಟನೆಗಳು ನಡೆದಿವೆ.

ಭಾರೀ ಮಳೆ ಎಚ್ಚರಿಕೆ
ಕರಾವಳಿಯಲ್ಲಿ ಜು. 8ರ ವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈಗಾಗಲೇ ಉಭಯ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರ ಗಳನ್ನು ಸನ್ನದ್ಧಗೊಳಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಎಸ್‌ಡಿಆರ್‌ಎಫ್‌ನ 65, ಎನ್‌ಡಿಆರ್‌ಎಫ್‌ನ 25 ಮಂದಿಯ ತಂಡ ಸನ್ನದ್ಧವಾಗಿದೆ. 26 ಬೋಟ್‌ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.