ಅಡಿಕೆ, ತೆಂಗಿನ ಮರ ಏರುವ ಈ ಸಾಧನ ಕೃಷಿ ಕಾರ್ಯಕ್ಕೆ ಉತ್ತೇಜನ


Team Udayavani, Mar 31, 2017, 10:43 AM IST

2803pkt1A(autometed-coconut.jpg

ಪುಂಜಾಲಕಟ್ಟೆ: ಕೃಷಿ ಚಟುವಟಿಕೆಗೆ ಪೂರಕವಾಗಬಲ್ಲ ಹೊಸ ಯಂತ್ರೋಪಕರಣಗಳ ಸಂಶೋಧನೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿರುವುದು ಆಶಾದಾಯಕವಾಗಿದೆ. ಇಂತಹ ಹೊಸ ಆವಿಷ್ಕಾರಗಳಿಂದ ಕೃಷಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಕೃಷಿಯೇ ದೇಶದ ಬೆನ್ನೆಲುಬು. ಆದರೆ ಕೃಷಿ ಮಾಡಲು, ಮಾಡಿದ ಕೃಷಿಯನ್ನು ರೈತ ಪಡೆಯಲು ಸಂಕಷ್ಟಪಡುತ್ತಿದ್ದಾನೆ. ಕೃಷಿ ಕಾರ್ಯಗಳಿಗೆ ಕಾರ್ಮಿಕರ ಸಮಸ್ಯೆ ಕಾಡುತ್ತಿದ್ದು ಕೃಷಿಕರು ಕಂಗೆಟ್ಟಿದ್ದಾರೆ. ಅದರಲ್ಲೂ ಅಡಿಕೆ, ತೆಂಗಿನ ಮರ ಹತ್ತಿ ಫಸಲು ಇಳಿಸುವ ಪರಿಣತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈ ಸಮಸ್ಯೆಯ ಪರಿಹಾರಕ್ಕೆ ಕೃಷಿ ಮೂಲದ ಕುಟುಂಬದಿಂದ ಬಂದಂತಹ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ವಿದ್ಯಾರ್ಥಿ ಪ್ರಮೀತ್‌ ಶೆಟ್ಟಿ ತನ್ನ ಸಹಪಾಠಿ ವೆಂಕಟೇಶ್‌ ಪ್ರಭು ಅವರ ಜತೆ ಸೇರಿ ಸುಲಭ ಉಪಾಯ ಕಂಡುಕೊಂಡಿದ್ದಾರೆ. 

ಏನಿದು ಸಾಧನ
ಕೃಷಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ “ಆಟೋಮೇಟೆಡ್‌ ಕೋಕನಟ್‌ ಪ್ಲಕ್ಕರ್‌ ವಿತ್‌ ಕ್ಯಾಮರಾ’ ಎಂಬ ವಿಶೇಷ ಯಂತ್ರವನ್ನು ಆವಿಷ್ಕಾರ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇದು ಅಕ್ಷರಶಃ ಕೃಷಿಕರ ಪಾಲಿಗೆ ವರದಾನ. ಅಡಿಕೆ ಮರವಿರಲಿ, ತೆಂಗಿನ ಮರವಿರಲಿ ಈ ಯಂತ್ರಕ್ಕೆ ಸಮಸ್ಯೆಯೇ ಅಲ್ಲ. ಎಷ್ಟೇ ಎತ್ತರ ಮತ್ತು ಯಾವುದೇ ಸುತ್ತಳತೆಯ ಮರವನ್ನಾದರೂ ಇದು ತಾನಾಗಿಯೇ ಏರಬಲ್ಲದು.

ದ್ವಿತೀಯ ಪ್ರಶಸ್ತಿ 
ಮೂಡಬಿದಿರೆ ಎಸ್‌.ಎನ್‌. ಪಾಲಿಟೆಕ್ನಿಕ್‌ನ ಅಂತಿಮ ವರ್ಷದ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿರುವ ಪ್ರಮೀತ್‌ ಶೆಟ್ಟಿ ಅವರು ರಾಜ್ಯ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ವತಿಯಿಂದ ಬಾಗಲಕೋಟೆ  ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ ರಾಜ್ಯಮಟ್ಟದ “ನೀವೇ ಮಾಡಿ ನೋಡಿ’ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಈ ಯಂತ್ರವನ್ನು ತಯಾರಿಸಿ ಈ ಸಾಧನೆ ಮಾಡಿ ದ್ವಿತೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.  ಗ್ರಾಮೀಣ ಪ್ರದೇಶದಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಹುಡುಕಲು ನಡೆಸಿರುವ ಈ ಪ್ರಯತ್ನ ಅಭಿನಂದನೀಯವಾಗಿದೆ. ಇದಕ್ಕೆ ಅವರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ಮತ್ತು ಇನ್ನೋವೇಟಿವ್‌ ಕ್ಲಬ್‌ ಸಂಚಾಲಕರ ಸಹಕಾರವಿದೆ.

ಕೃಷಿ ಕುಟುಂಬದವರಾಗಿದ್ದು, ಅರಳ ಗ್ರಾ.ಪಂ. ಸದಸ್ಯರಾದ ಲಕ್ಷ್ಮೀಧರ ಮತ್ತು ರೂಪಾ ದಂಪತಿಯ ಪುತ್ರನಾಗಿರುವ ಪ್ರಮೀತ್‌ ಶೆಟ್ಟಿ ಅವರ ಸಾಧನೆ ಮತ್ತಷ್ಟು ಮುಂದುವರಿಸಲು  ಮನೆಮಂದಿಯ ಮತ್ತು ಊರವರ ಉತ್ತೇಜನವಿದೆ. ಪ್ರಸ್ತುತ ಈ ಯಂತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಡಿಸ್‌ಪ್ಲೇ ಮೂಲಕ ಚಿತ್ರ ರವಾನೆ 
ಅಡಿಕೆ, ತೆಂಗಿನ ಕೊಯ್ಲಿಗೆ ಈ ಯಂತ್ರ ಪರಿಣಾಮಕಾರಿಯಾಗಿ ಬಳಕೆ ಮಾಡಬಹುದಾಗಿದೆ. ಅಡಿಕೆಗೆ ಔಷಧ ಸಿಂಪಡಣೆಗೂ ಇದನ್ನು ಬಳಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಗೊನೆಯಲ್ಲಿರುವ ಕೆಲವು ಕಾಯಿಗಳನ್ನಷ್ಟೇ ಕೀಳಬೇಕು ಎಂದಾದರೂ ಇದರಲ್ಲಿ ವ್ಯವಸ್ಥೆಯಿದೆ. ಆಯ್ದ ಕಾಯಿಗಳನ್ನಷ್ಟೇ ಕತ್ತರಿಸಿ ಕೆಳಗೆ ಹಾಕುವ ವ್ಯವಸ್ಥೆ ಇದೆ. 12 ವೋಲ್ಟ್ ಬ್ಯಾಟರಿಯಿಂದ ಚಾಲನೆಗೊಳ್ಳುವ ಈ ಯಂತ್ರ ಒಂದು ಬಾರಿ ಬ್ಯಾಟರಿ ಫುಲ್‌ ಚಾರ್ಜ್‌ ಮಾಡಿದರೆ 150 ಮರಗಳಿಂದ ಕಾಯಿ ಕೀಳುವ ಸಾಮರ್ಥ್ಯ ಹೊಂದಿದೆ.

ಯಂತ್ರದಲ್ಲಿರುವ  ಕೆಮರಾ ಲೆನ್ಸ್‌ ಸ್ಮಾರ್ಟ್‌ ಫೋನ್‌ಗೆ ಸಿಗ್ನಲ್‌ ರವಾನೆ ಮಾಡುವ ಮೂಲಕ ಡಿಸ್‌ಪ್ಲೇ ಮೂಲಕ ಮರದ ತುತ್ತ ತುದಿಯ ಚಿತ್ರಗಳನ್ನೂ ಗೊನೆ, ಕಾಯಿಗಳ ವೀಕ್ಷಣೆಯನ್ನೂ ಸುಲಭದಲ್ಲಿ ಮಾಡಬಹುದಾಗಿದೆ.

– ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.