ಜು.21ರಂದು ಕರಾವಳಿಯಲ್ಲಿ ‘ಅರ್ಜುನ್ ವೆಡ್ಸ್ ಅಮೃತ’
Team Udayavani, Jul 12, 2017, 10:04 PM IST
ಮಹಾನಗರ: ಬಹುನಿರೀಕ್ಷಿತ ‘ಅರ್ಜುನ್ ವೆಡ್ಸ್ ಅಮೃತಾ’ ತುಳು ಸಿನೆಮಾ ಜು.21ಕ್ಕೆ ಬಿಡುಗಡೆಯಾಗಲಿದೆ. ನವಿರಾದ ಪ್ರೇಮಕಥೆಯನ್ನೊಳಗೊಂಡ ಚಿತ್ರದ ಸಂಗೀತ ಈಗಾಗಲೇ ತುಳುವರಿಗೆ ಇಷ್ಟವಾಗಿದ್ದು ಚಿತ್ರ ಬಿಡುಗಡೆಗೆ ಕಾಯುವಂತೆ ಮಾಡಿದೆ. ಸುಮಾ ಎಲ್.ಎನ್. ಶಾಸ್ತ್ರಿ ಮೊದಲ ಬಾರಿಗೆ ಸಂಗೀತ ನೀಡಿರುವುದು ಚಿತ್ರದ ವಿಶೇಷತೆ. ರಘು ಶೆಟ್ಟಿ ನಿರ್ದೇಶನ ಇರುವ ಚಿತ್ರವನ್ನು ಬೆದ್ರ 9 ಕ್ರಿಯೇಷನ್ ನಿರ್ಮಿಸಿದ್ದು ಹಾಸ್ಯಮಿಶ್ರಿತ ಪ್ರೇಮಕಥೆ ಚಿತ್ರದಲ್ಲಿದೆ. ಅನೂಪ್ ಸಾಗರ್ – ಆರಾಧ್ಯ ಶೆಟ್ಟಿ ನಾಯಕ, ನಾಯಕಿಯರಾಗಿ ಚಿತ್ರಕ್ಕೆ ಬಣ್ಣ ಹಚ್ಚಿದ್ದರೆ ಜನರನ್ನು ರಂಜಿಸಲು ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಉಮೇಶ್ ಮಿಜಾರ್, ಸುಂದರ ರೈ ಮಂದಾರ ಜೊತೆ ಸೇರಿದ್ದಾರೆ. ನವೀನ್ ಡಿ. ಪಡೀಲ್ ಚಿತ್ರದಲ್ಲಿ ಗಂಭೀರ ಪಾತ್ರವನ್ನು ನಿರ್ವಹಿಸಿದ್ದಾರೆ.
ರಘುಶೆಟ್ಟಿ ಚೊಚ್ಚಲ ನಿರ್ದೇಶನದ ಅರ್ಜುನ್ ವೆಡ್ಸ್ ಅಮೃತ ಸಿನೆಮಾಕ್ಕೆ ಕಳೆದ ನ. 2ರಂದು ಕಟೀಲು ಕ್ಷೇತ್ರದಲ್ಲಿ ಮುಹೂರ್ತ ನೆರವೇರಿತ್ತು. ರಾಜೇಶ್ ಶೆಟ್ಟಿ, ದಾಮೋದರ ದೊಂಡೋಲೆ ಲೋಕು ಕುಡ್ಲ ಅವರ ಸಾಹಿತ್ಯ ಇದೆ. ಕಿರಣ್ ತರುಣ್ರಾಜ್ ಕೊರಿಯೋಗ್ರಾಫರ್ ಆಗಿದ್ದಾರೆ. ರಾಜೇಶ್ ಕೃಷ್ಣನ್. ಹೇಮಂತ್, ಎಲ್.ಎನ್. ಶಾಸ್ತ್ರಿ ಸುಪ್ರಿಯಾ ಮತ್ತು ಸುಮಾ ಎಲ್.ಎನ್ ಶಾಸ್ತ್ರಿ ಸ್ವರ ನೀಡಿದ್ದಾರೆ. ಚೇತನ್ ಮುಂಡಾಡಿ ಕಲಾ ನಿರ್ದೇಶಕರು ಆನಂದ ಸುಂದರೇಶ್ ಅವರು ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಸಹ ನಿರ್ದೇಶಕರಾಗಿ ತ್ರಿಶೂಲ್ ಶೆಟ್ಟಿ, ರಾಮ್ದಾಸ್ ಸಸಿಹಿತ್ಲು ದುಡಿದಿದ್ದಾರೆ. ಅನೂಪ್ ಸಾಗರ್ ನಾಯಕ ನಟರಾಗಿ, ಆರಾಧ್ಯ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಸುನೀಲ್ ನೆಲ್ಲಿಗುಡ್ಡೆ, ಸುಧೀರ್ ರಾಜ್ ಉರ್ವಾ, ಸತೀಶ್ ಬಂದಲೆ, ಪವಿತ್ರ ಶೆಟ್ಟಿ ಕಟಪಾಡಿ, ಹರಿಣಿ ಕಾರ್ಕಳ ಆರ್.ಜೆ.ಅನುರಾಗ್, ಪ್ರಜ್ವಲ್ ಪಾಂಡೇಶ್ವರ್ ಮೊದಲಾದವರಿದ್ದಾರೆ. ರಘು ಶೆಟ್ಟಿ ಅವರದೇ ಕಥೆ, ಚಿತ್ರಕಥೆ ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ