ಮಂಗಳೂರಿನಲ್ಲಿ ಶೀಘ್ರ ಸ್ಥಾಪನೆಯಾಗಲಿದೆ: ರಾಣಿ ಅಬ್ಬಕ್ಕ ಸೇನಾಪೂರ್ವ ಆಯ್ಕೆ ತರಬೇತಿ ಕೇಂದ್ರ


Team Udayavani, Sep 29, 2022, 6:25 AM IST

ಮಂಗಳೂರಿನಲ್ಲಿ ಶೀಘ್ರ ಸ್ಥಾಪನೆಯಾಗಲಿದೆ: ರಾಣಿ ಅಬ್ಬಕ್ಕ ಸೇನಾಪೂರ್ವ ಆಯ್ಕೆ ತರಬೇತಿ ಕೇಂದ್ರ

ಮಂಗಳೂರು: ಭಾರತೀಯ ಸೇನೆ ಸೇರಿ ದಂತೆ ವಿವಿಧ ರಕ್ಷಣಾ, ಗೃಹ ಇಲಾಖೆ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರ ಮಂಗಳೂರಿ ನಲ್ಲಿ ಸ್ಥಾಪನೆಯಾಗಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆಯಲು ನಿರ್ಧರಿಸಿದ್ದು, ಅದರಂತೆ ದ.ಕ. ಜಿಲ್ಲಾ ಕೇಂದ್ರವು ಕೆಪಿಟಿ ಬಳಿಯ ಶರಬತ್ತು ಕಟ್ಟೆ ಸಮೀಪದ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಕಟ್ಟಡದಲ್ಲಿ ಆರಂಭಗೊಳ್ಳಲಿದೆ. ಈ ಕೇಂದ್ರಕ್ಕೆ “ವೀರ ರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರ’ ಎಂದು ಹೆಸರಿಡಲಾಗಿದೆ. ಸದ್ಯ ಕಟ್ಟಡ ನವೀಕರಣ ಕಾರ್ಯ ಕೊನೆಯ ಹಂತದಲ್ಲಿದ್ದು, ಶೀಘ್ರ ತರಬೇತಿಯೂ ಆರಂಭಗೊಳ್ಳಲಿದೆ.

ಪರಿಶಿಷ್ಟ ಜಾತಿ/ಹಿಂದುಳಿದ ವರ್ಗಗಳ ಅಭ್ಯರ್ಥಿ ಗಳಿಗೆ ಸೇನಾ ಆಯ್ಕೆ ತರಬೇತಿಯನ್ನು 4 ತಿಂಗಳು ನೀಡ ಲಾಗುತ್ತದೆ. ಒಂದು ಹಂತದಲ್ಲಿ 100 ಮಂದಿಯಂತೆ ವರ್ಷದಲ್ಲಿ 3 ತಂಡಗಳಿಗೆ ತರಬೇತಿ ನೀಡಲಾಗುತ್ತದೆ. ನಿವೃತ್ತ ಯೋಧ ರಾಜ ಜ್ಯೋತಿ ಮತ್ತು ಅಶ್ವಿ‌ನ್‌ ಕುಮಾರ್‌ ತರಬೇತುದಾರರಾಗಿ ತರಬೇತಿ ನೀಡಲಿದ್ದಾರೆ. ಮಂಗಳಾ ಕ್ರೀಡಾಂಗಣದಲ್ಲಿ ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವೇ ದಿನಗಳಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿಯೂ ಆರಂಭಗೊಳ್ಳಲಿದೆ. ಈ ತರಬೇತಿಯ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸಲಿದೆ.

ತರಬೇತಿಗೆ ಅರ್ಹತೆಗಳೇನು?
ಈ ತರಬೇತಿಗೆ ಸೇರ ಬಯಸುವ ಅಭ್ಯರ್ಥಿಗಳು 17 ವರ್ಷ, ಆರು ತಿಂಗಳು ಮತ್ತು 21 ವರ್ಷದ ಒಳಗಿನ ವಯೋಮಿತಿಯವರಾಗಿರಬೇಕು. ಅಭ್ಯರ್ಥಿಯ ಎತ್ತರ 166 ಸೆಂ.ಮೀ., ತೂಕ ಕನಿಷ್ಠ 50 ಕೆ.ಜಿ., ಎದೆಯ ಸುತ್ತಳತೆ 77 ಸೆ.ಮೀ. ಹೊಂದಿರಬೇಕು. 1,600 ಮೀಟರ್‌ ದೂರವನ್ನು 6 ನಿಮಿಷದಲ್ಲಿ ಕ್ರಮಿಸಬೇಕು ಸೇರಿದಂತೆ ಇನ್ನಿತರ ನಿಯಮ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು 2 ಸುತ್ತಿನಲ್ಲಿ ದೈಹಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಭಾರತೀಯ ಸೇನೆ ಸೇರಿದಂತೆ ವಿವಿಧ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಮಂಗಳೂರಿನಲ್ಲಿ ವೀರ ರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ. ಕರಾವಳಿ ಭಾಗದ ಯುವಕರಿಗೆ ಸೇನೆಗೆ ಸೇರ್ಪಡೆಗೊಳ್ಳಲು ಇದೊಂದು ಉತ್ತಮ ಅವಕಾಶ. ಇಲಾಖಾ ವತಿಯಿಂದ ಸಂಪೂರ್ಣ ತರಬೇತಿ ವೆಚ್ಚ ಭರಿಸಲಾಗುವುದು. ಕೆಲವೇ ದಿನಗಳಲ್ಲಿ ತರಬೇತಿ ಆರಂಭಗೊಳ್ಳಲಿದೆ.
ರಶ್ಮಿ ಎಸ್‌.ಆರ್‌., ಜಿಲ್ಲಾ ಅಧಿಕಾರಿ
ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆ ದ.ಕ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.