ಯಲ್ಲಾಪುರ: ಕಾರು ಅಡ್ಡಗಟ್ಟಿ ದರೋಡೆ; ಮೂವರು ಅಂತರಾಜ್ಯ ದರೋಡೆಕೋರರ ಬಂಧನ
Team Udayavani, Nov 29, 2022, 7:40 PM IST
ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರು ಅಂತರ್ ರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡಿನ ಸಿರಿಯಾದ ಮಹಮ್ಮದ್ ಕಬೀರ್ ಮೈನುದ್ದೀನ್, ಕೋಜಿಕೋಡಿನ ಸುಭಾಸ ರಾಧಾಕೃಷ್ಣನ್ ಹಾಗೂ ಪಾಲಕ್ಕಾಡಿನ ನಿವೇಶ ಅಪ್ಪು ವಿಜಯಕೃಷ್ಣನ್ ಬಂಧಿತರು.
ಇವರು ಕಳೆದ ಅಕ್ಟೋಬರ್ 2 ರಂದು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಕೊಲ್ಲಾಪುರದ ನೀಲೇಶ ಪಾಂಡುರಂಗ ನಾಯ್ಕ ಅವರಿಗೆ ಸೇರಿದ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕಾರು ಹಾಗೂ ಕಾರಿನಲ್ಲಿ 2.11 ಕೋಟೊ ರೂ. ಎರಡು ಮೊಬೈಲ್ ಗಳನ್ನು ಸಿನಿಮಿಯ ಮಾದರಿಯಲ್ಲಿ ದರೋಡೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು, ಅವರಿಂದ ಮೂರು ಕಾರು, 98,000 ರೂ ನಗದು ವಶಪಡಿಸಿಕೊಂಡಿದ್ದಾರೆ.
ಕೃತ್ಯದಲ್ಲಿ 20ಕ್ಕೂ ಹೆಚ್ಚು ಅಂತರ್ ರಾಜ್ಯ ದರೋಡೆಕೋರರು ಭಾಗಿಯಾಗಿರುವುದು ತನಿಖೆ ವೇಳೆ ಹೆಸರನ್ನು ಹೇಳಿದ್ದಾರೆ. ಉಳಿದವರ ಪತ್ತೆಗಾಗಿ ಪೊಲೀಸರು ತಮ್ಮ ಜಾಲ ಬೀಸಿದ್ದಾರೆ.
ಎಸ್.ಪಿ ವಿಷ್ಣುವರ್ಧನ್, ಡಿವೈಎಸ್.ಪಿ ರವಿ ನಾಯ್ಕ ಶಿರಸಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ ಯಳ್ಳೂರ, ಪಿಎಸ್ಐಗಳಾದ ಮಂಜುನಾಥ ಗೌಡರ್, ಅಮೀನ್ ಸಾಬ ಅತ್ತಾರ, ಪ್ರೊಬೇಶನರಿ ಪಿಎಸ್ಐ ಉದಯ, ಸಿಬ್ಬಂದಿ ಬಸವರಾಜ ಹಗರಿ, ಮಹಮ್ಮದ್ ಶಫಿ, ಗಜಾನನ ನಾಯ್ಕ, ಡ್ಯಾನಿ ಫರ್ನಾಂಡೀಸ್, ರಾಜೇಶ ನಾಯ್ಕ, ಪರಶುರಾಮ ಕಾಳೆ, ದೀಪಕ್,ಪ್ರವೀಣ ಪೂಜಾರ, ಚೆನ್ನಕೇಶವ, ಗಿರೀಶ, ನಂದೀಶ, ಸುಕ್ರಪ್ಪ, ಶೇಷು, ವಿಜಯ, ಶೋಭಾ ನಾಯ್ಕ, ಸಿಡಿಆರ್ ಸೆಲ್ ನ ಉದಯ, ರಮೇಶ, ಯೋಗೇಶ ಕಾರ್ಯಾಚರಣೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ