ಅಡಿಕೆ ಕ್ಯಾನ್ಸರ್ ಕಾರಕ ವರದಿ ಹಿಂಪಡೆವ ತನಕ ಹೋರಾಟ: ಐವನ್
Team Udayavani, Mar 9, 2018, 10:35 AM IST
ಸುಳ್ಯ: ಅಡಿಕೆ ಕ್ಯಾನ್ಸರ್ ಕಾರಕ ಎಂಬ ವರದಿಯನ್ನು ಹಿಂಪಡೆಯುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು. ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸದೇ ಇದ್ದರೆ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಡಿಕೆ ಬೆಳೆಗಾರರನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ’ಸೋಜಾ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ವಿಷಕಾರಕ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ಬಗ್ಗೆ ಅಡಿಕೆ ಬೆಳೆಗಾರರ ಮತ ಪಡೆದು ಗೆದ್ದ ನಮ್ಮ ರಾಜ್ಯದ ಬಿಜೆಪಿ ಸಂಸದರಾಗಲಿ, ಕೇಂದ್ರದಲ್ಲಿರುವ ರಾಜ್ಯದ ಸಚಿವರಾಗಲೀ ತುಟಿ ಬಿಚ್ಚಿಲ್ಲ ಎಂದು ಆರೋಪಿಸಿದರು.
ಅಡಿಕೆ ವಿಷಕಾರಕ ಎಂಬ ವರದಿಯನ್ನು ಯುಪಿಎ ಸರಕಾರ ಆರಂಭದಲ್ಲಿ ಸಲ್ಲಿಸಿದ್ದರೂ ಅನಂತರ ವಿಷಕಾರಕ ಅಲ್ಲ ಎಂಬ ವರದಿಯನ್ನು ನೀಡಿತ್ತು. ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆದರೂ ಹಿಂದಿನ ವರದಿಯನ್ನು ಹಿಂಪಡೆದು ಹೊಸ ವರದಿಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದರು.
ರಾಜ್ಯ ನೆರವು: ರಾಜ್ಯ ಸರಕಾರ ಅಡಿಕೆ ಬೆಳೆಗಾರರ ಹಿತ ಕಾಯಲು ಹಲವು ಯೋಜನೆಗಳನ್ನು ರೂಪಿಸಿದೆ. ಅಡಿಕೆಗೆ ಕೊಳೆ ರೋಗ ತಗುಲಿದಾಗ ಅದಕ್ಕೆ ಪರಿಹಾರವನ್ನು ವಿತರಿಸಲಾಗಿದೆ. ಅಡಿಕೆ ಬೆಳೆಗಾರರ ರಕ್ಷಣೆಗೆ ಬೆಳೆಗಾರರ ಮಂಡಳಿ ರಚಿಸಬೇಕೆಂಬ ಬೇಡಿಕೆಯನ್ನು ಪರಿಗಣಿಸಿ ತಜ್ಞರ ವರದಿಯನ್ನು ತರಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಂಸದರ ಹೇಳಿಕೆಗೆ ಖಂಡನೆ
ಸಂಸದ ನಳಿನ್ಕುಮಾರ್ ಕಟೀಲು ಮುಖ್ಯಮಂತ್ರಿಯವರನ್ನು ನಿಂದಿಸಿ ಮಾತನಾಡಿರುವುದು ಖಂಡನೀಯ. ಸಂಸದರು ಕ್ಷಮೆಯಾಚಿಸಬೇಕು. ಸಂವಿಧಾನಾತ್ಮಕವಾಗಿ ಆಯ್ಕೆಯಾದ ಜನಪ್ರತಿನಿಧಿ ಈ ರೀತಿ ಮಾತನಾಡುವುದು ಅವರಿಗೆ ಶೋಭೆಯಲ್ಲ ಎಂದು ಐವನ್ ಡಿ’ಸೋಜಾ ಹೇಳಿದರು.
ಶಾಸಕರ ನಿರ್ಲಕ್ಷ್ಯ
ಎಸ್.ಅಂಗಾರ ಅವರ ನಿರ್ಲಕ್ಷ್ಯತನ ಮತ್ತು ಸಾರ್ವಜನಿಕರ ಅಸಹಕಾರ
ದಿಂದಾಗಿ ಸುಳ್ಯದ 110 ಕೆ.ವಿ. ಸಬ್ಸ್ಟೇಶನ್ ನನೆಗುದಿಗೆ ಬಿದ್ದಿದೆ ಎಂದು ಐವನ್ ಡಿ”ಸೋಜಾ ಆರೋಪಿಸಿದ್ದಾರೆ.
ಸುಳ್ಯಕ್ಕೆ 110 ಕೆ.ವಿ. ಸಬ್ಸ್ಟೇಶನ್ ಅನುಷ್ಠಾನ ಮಾಡಲು ಸರಕಾರ ಎಲ್ಲ ಸಹಕಾರವನ್ನು ನೀಡಿದೆ. ಆದರೆ ಸಬ್ಸ್ಟೇಶನ್ ಅನುಷ್ಠಾನ ಮಾಡಲು ಸ್ಥಳೀಯ ಶಾಸಕರು ಆಸಕ್ತಿ ವಹಿಸಿಲ್ಲ ಮತ್ತು ಲೈನ್ ಎಳೆಯಲು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಕಾರಣ ಇದು ಅನುಷ್ಠಾನ ಆಗಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ³ಂಗಾಯ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಎಸ್. ಸಂಶುದ್ದೀನ್, ಪಿ.ಎಸ್. ಗಂಗಾಧರ, ಅಶೋಕ್ ನೆಕ್ರಾಜೆ, ಗೀತಾ ಕೋಲ್ಚಾರ್, ಚಂದ್ರಶೇಖರ ಕಾಮತ್, ಸಿದ್ದಿಕ್, ಅಶೋಕ್ ಚೂಂತಾರು, ನಿತ್ಯಾನಂದ ಶೆಟ್ಟಿ, ಸಿ.ಜೆ. ಸೈಮನ್, ಮಹಮ್ಮದ್ ಫವಾಝ್, ಶರೀಫ್ ಕಂಠಿ, ಧರ್ಮಪಾಲ ಕೊçಂಗಾಜೆ, ಸುಧೀರ್ ರೈ ಮೇನಾಲ, ಸುಜಯಕೃಷ್ಣ, ಜೂಲಿಯಾ ಕ್ರಾಸ್ತಾ, ಕೆ.ಎಂ. ಮುಸ್ತಫಾ, ಭವಾನಿಶಂಕರ ಕಲ್ಮಡ್ಕ, ಸತ್ಯಕುಮಾರ ಆಡಿಂಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು