ಆಮೆಗತಿಯಲ್ಲಿ ಸಾಗಿದೆ ಆರ್ಯ ಸಮಾಜ ರಸ್ತೆ ಕಾಮಗಾರಿ


Team Udayavani, Feb 17, 2020, 5:28 AM IST

1602MLR14-ARYA-SAMAJA-RD

ಮಹಾನಗರ: ಸ್ಮಾರ್ಟ್‌ ಸಿಟಿ ಯೋಜನೆಯಡಿ ನಡೆಯುತ್ತಿರುವ ಆರ್ಯ ಸಮಾಜ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ನಿಧಾನವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಳೆದ ನವೆಂಬರ್‌ ತಿಂಗಳಿನಲ್ಲೇ ಕಾಮ ಗಾರಿ ಆರಂಭಗೊಂಡಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಆಮೆಗತಿಯಲ್ಲಿ ಸಾಗಿದೆ. ಇದೇ ರೀತಿ ಮುಂದುವರಿದರೆ ಈ ಬಾರಿಯ ಮಳೆಗಾಲಕ್ಕೂ ಪೂರ್ಣಗೊಳ್ಳುವ ಬಗ್ಗೆ ಸಂದೇಹವಿದೆ. ಈಗ ಕಾಂಕ್ರೀಟ್‌ ಕಾಮಗಾರಿ ನಡೆಯುತ್ತಿದ್ದು, ಅದು ಪೂರ್ಣಗೊಂಡ ಅನಂತರ ಮಳೆನೀರು ಹರಿಯುವ ಚರಂಡಿ, ಫ‌ುಟ್‌ಪಾತ್‌ ಕಾಮಗಾರಿ ನಡೆಯಬೇಕಿದೆ. ಇವೆಲ್ಲವೂ ಪೂರ್ಣಗೊಳ್ಳಬೇಕಾದರೆ ಮತ್ತೆ ಮೂರು ತಿಂಗಳುಗಳಿಗೂ ಹೆಚ್ಚು ಅವಧಿ ಬೇಕಾಗಬಹುದು. ಒಂದು ವೇಳೆ ಚರಂಡಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪಕ್ಕದ ಮನೆ, ವಸತಿ ಸಂಕೀರ್ಣಗಳಿಗೆ ಮಳೆ ನೀರು ನುಗ್ಗುವ ಅಪಾಯವೂ ಇದೆ ಎಂದು ಸ್ಥಳೀಯ ವ್ಯಾಪಾರಿಗಳು, ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಒಳಚರಂಡಿ ಅವ್ಯವಸ್ಥೆ
ಇಲ್ಲಿ ಕಾಂಕ್ರೀಟ್‌ ಕಾಮಗಾರಿ ಆರಂಭವಾದ ಕೆಲವು ದಿನಗಳ ಅನಂತರ ಸ್ಥಳೀಯರ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯ ಅಧ್ಯಕ್ಷ ವಿ. ಪೊನ್ನುರಾಜ್‌ ಅವರು ಇಲ್ಲಿ ಅಸಮರ್ಪಕವಾಗಿದ್ದ ಒಳಚರಂಡಿ ವ್ಯವಸ್ಥೆಯ ಬಗ್ಗೆಯೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಪ್ರಮುಖ ರಸ್ತೆ
ಬ್ರಿಡ್ಜ್ ರೋಡ್‌ನಿಂದ ಆರ್ಯ ಸಮಾಜ ರಸ್ತೆಯಾಗಿ ಸಂಚರಿಸಬಹುದು. ಅಲ್ಲದೆ ಆರ್ಯ ಸಮಾಜ ರಸ್ತೆಯು ಬಲ್ಮಠ ಮತ್ತು ಮಲ್ಲಿಕಟ್ಟೆ-ಕದ್ರಿ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆ.ಮನೆ, ವಸತಿ ಸಂಕೀರ್ಣ, ವಾಣಿಜ್ಯ ಸಂಕೀರ್ಣಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿವೆ.

ಬ್ರಿಡ್ಜ್ ರೋಡ್‌ ಪೂರ್ಣ
ಗೋಲ್ಡ್‌ಫಿಂಚ್‌ ಹೊಟೇಲ್‌ ಪಕ್ಕದ ಬ್ರಿಡ್ಜ್ ರೋಡ್‌ ಕಾಮಗಾರಿ ಬಹುತೇಕ ಪೂರ್ಣಗೊಂಡು ಕ್ಯೂರಿಂಗ್‌ ನಡೆಯುತ್ತಿದೆ. ಈ ರಸ್ತೆ ಜ್ಯೂಸ್‌ ಜಂಕ್ಷನ್‌, ಬಲ್ಮಠ-ಜ್ಯೋತಿ ರಸ್ತೆಯ ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಒಳರಸ್ತೆಯಾಗಿದೆ.ಮನೆ, ವಸತಿ ಸಂಕೀರ್ಣ, ವಾಣಿಜ್ಯ ಸಂಕೀರ್ಣಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿವೆ.

ಬ್ರಿಡ್ಜ್ ರೋಡ್‌ ಪೂರ್ಣ
ಗೋಲ್ಡ್‌ಫಿಂಚ್‌ ಹೊಟೇಲ್‌ ಪಕ್ಕದ ಬ್ರಿಡ್ಜ್ ರೋಡ್‌ ಕಾಮಗಾರಿ ಬಹುತೇಕ ಪೂರ್ಣಗೊಂಡು ಕ್ಯೂರಿಂಗ್‌ ನಡೆಯುತ್ತಿದೆ. ಈ ರಸ್ತೆ ಜ್ಯೂಸ್‌ ಜಂಕ್ಷನ್‌, ಬಲ್ಮಠ-ಜ್ಯೋತಿ ರಸ್ತೆಯ ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಒಳರಸ್ತೆಯಾಗಿದೆ.

ತಿಂಗಳಲ್ಲಿ ಪೂರ್ಣ
ಆರ್ಯ ಸಮಾಜ ರಸ್ತೆಯ ಕಾಂಕ್ರೀಟ್‌ ಕಾಮಗಾರಿಯಲ್ಲಿ ಇನ್ನು 100 ಮೀಟರ್‌ ಮಾತ್ರ ಬಾಕಿ ಇದೆ. ಇದು 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅನಂತರ ಕ್ಯೂರಿಂಗ್‌ಗೆ ಕೆಲವು ದಿನಗಳ ಆವಶ್ಯಕತೆ ಇದೆ. ಸುಮಾರು ಒಂದು ತಿಂಗಳಲ್ಲಿ ಈ ರಸ್ತೆಯು ವಾಹನ ಸಂಚಾರಕ್ಕೆ ಲಭ್ಯವಾಗಲಿದೆ. ಬ್ರಿಡ್ಜ್ ರೋಡ್‌ನ‌ ಕಾಮಗಾರಿ ಪೂರ್ಣಗೊಂಡಿದ್ದು ಕ್ಯೂರಿಂಗ್‌ ನಡೆಯುತ್ತಿದೆ. ಈ ರಸ್ತೆ ಒಂದು ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ.
 - ಮಹಮ್ಮದ್‌ ನಝೀರ್‌,
ಸ್ಮಾರ್ಟ್‌ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರು

3 ತಿಂಗಳೂ ಸಾಕಾಗದು
ಕಾಮಗಾರಿ ನಿಧಾನವಾಗಿದೆ. ಕೆಲವು ದಿನ ಕೆಲಸ ಸ್ಥಗಿತಗೊಂಡಿತ್ತು. ಬ್ಯಾನರ್‌ ರಾಜಕೀಯವೂ ಕಾಮಗಾರಿ ವೇಗವಾಗಿ ಸಾಗಲು ಅಡ್ಡಿಯಾಯಿತು. ಕಾಮಗಾರಿ ಇದೇ ರೀತಿ ಮುಂದುವರಿದರೆ ಮತ್ತೆ 3 ತಿಂಗಳುಗಳು ಕೂಡ ಸಾಕಾಗದು. ರಸ್ತೆ ಪೂರ್ಣಗೊಂಡರೂ ಚರಂಡಿ ಪೂರ್ಣವಾಗದೆ ಮಳೆಗಾಲದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು. ಕೆಲಸ ಬೇಗ ಮುಗಿಸಬೇಕೆಂಬುದು ನಮ್ಮ ಮನವಿ.
 - ವಿಜಯ ಕುಮಾರ್‌ ಆಳ್ವ, ಸ್ಥಳೀಯ ಉದ್ಯಮಿ

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.