ಕುಕ್ಕೆಯಲ್ಲಿ 56 ಭಕ್ತರಿಂದ ಸಂಜೆಯ ಆಶ್ಲೇಷಾ ಬಲಿ


Team Udayavani, Jul 6, 2018, 2:00 AM IST

ashlesha-sanje-5-7.jpg

ಸುಬ್ರಹ್ಮಣ್ಯ: ನಾಗರಾಧನೆಗೆ ಪ್ರಸಿದ್ಧಿ ಪಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಗುರುವಾರದಿಂದ ಸಂಜೆ ವೇಳೆ ಆಶ್ಲೇಷಾ ಬಲಿ ಪೂಜೆಗೆ ಚಾಲನೆ ದೊರಕಿದೆ. ಸಂಜೆ ನಡೆದ ಮೊದಲ ದಿನದ ಪೂಜೆಯಲ್ಲಿ 56 ಸೇವಾರ್ಥಿಗಳು ಪಾಲ್ಗೊಂಡಿದ್ದರು. ದೇಗುಲದ ಪ್ರಧಾನ ಸೇವೆಗಳಲ್ಲಿ ಒಂದಾದ ಆಶ್ಲೇಷಾ ಬಲಿ ಶೃಂಗೇರಿ ಮಠದ ಮಂಟಪದಲ್ಲಿ ನಡೆಯಿತು. ಸಂಕಲ್ಪದ ಬಳಿಕ ಅರ್ಚಕ ಸುಬ್ರಹ್ಮಣ್ಯ ಕೋರ್ನಾಯ, ಸುಬ್ರಹ್ಮಣ್ಯ ಭಟ್‌ ವಿಧಿ – ವಿಧಾನ ನೆರವೇರಿಸಿದರು. ಮುಜರಾಯಿ ಇಲಾಖೆಯ ಶೈವಾಗಮ ಪಂಡಿತ ಪ್ರೊ| ಶಿವಕುಮಾರ್‌, ದೇಗುಲದ ಸಿಇಒ ಎಂ.ಎಚ್‌. ರವೀಂದ್ರ ಉಪಸ್ಥಿತರಿದ್ದರು. ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್‌ಕುಮಾರ್‌ ಕರಿಕ್ಕಳ, ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್‌ ಹೆಬ್ಟಾರ್‌, ಷಣ್ಮುಖ ಉಪಾರ್ಣ ಹಾಗೂ ಸಿಬಂದಿ ಮೊದಲ ದಿನದ ಸೇವೆಯಲ್ಲಿ ಸೇವಾರಶೀದಿ ಪಡೆದು ಪೂಜೆ ನೆರವೇರಿಸಿಕೊಂಡರು.

ದೇಗುಲದಲ್ಲಿ ಆಶ್ಲೇಷಾ ಬಲಿ ಸೇವೆ ಪ್ರತಿದಿನ ಬೆಳಗ್ಗೆ 6.30ರಿಂದ 8 ಮತ್ತು 8.30ರಿಂದ 10 ಗಂಟೆ – ಎರಡು ಹಂತಗಳಲ್ಲಿ ಜರಗುತ್ತಿತ್ತು. ಅಧಿಕ ಭಕ್ತರು ಇದ್ದಾಗ ಮೂರು ಸಲ ಆಗುತ್ತಿತ್ತು. ಸೇವಾರ್ಥಿಗಳ ಸಂಖ್ಯೆ ವೃದ್ಧಿಸಿ, ಭಕ್ತರಿಗೆ ಅನನುಕೂಲ ಆಗುತ್ತಿದ್ದುದನ್ನು ಗಮನಿಸಿದ ಆಡಳಿತ ಮಂಡಳಿ ಅಷ್ಟಮಂಗಲ ಪ್ರಶ್ನೆಚಿಂತನೆ ಇರಿಸಿತ್ತು. ಪ್ರಶ್ನೆಯಲ್ಲಿ ಒಪ್ಪಿಗೆ ದೊರಕಿದ ಬಳಿಕ ಸಂಜೆ ವೇಳೆ ನಡೆಸಲು ನಿರ್ಧರಿಸಿತ್ತು. ಬುಧವಾರ ಬೆಳಗ್ಗೆ ದೇಗುಲದಲ್ಲಿ ದ್ರವ್ಯಕಲಶ ನಡೆಸಿ, ಸಂಜೆ ದೇಗುಲದ ವತಿಯಿಂದ ಆಶ್ಲೇಷಾ ಬಲಿ ಪೂಜೆ ನೆರವೇರಿಸಲಾಗಿತ್ತು. ಈ ಸೇವೆಗೆ ಮುಂಗಡ ಬುಕ್ಕಿಂಗ್‌ ಇರುವುದಿಲ್ಲ. ಬೆಳಗ್ಗೆ ಮೂರು ಮತ್ತು ಸಂಜೆ ಒಂದು ಹಂತದಲ್ಲಿ ಸೇವೆ ನಡೆಯಲಿದೆ. ಸಾಯಂಕಾಲದ ಆಶ್ಲೇಷಾ ಸೇವೆಗೆ ಭಕ್ತರು ಮಧ್ಯಾಹ್ನ 12.30ರಿಂದ 4.30ರ ತನಕ ಸೇವಾ ರಶೀದಿ ಪಡೆಯಬಹುದು. ಬುಧವಾರ ಬೆಳಗ್ಗೆಯ ಸೇವೆಗಳಲ್ಲಿ 220 ಆಶ್ಲೇಷಾ ಬಲಿ ಪೂಜೆಗಳು ನಡೆದಿವೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.