ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ


Team Udayavani, Jan 28, 2023, 1:20 AM IST

ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ: ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ. ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫ‌ಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಪೊಲೀಸ್‌ ನಿರೀಕ್ಷಕ ಉದಯ ಎಂ.ನಾಯಕ್‌ ದೂರು ದಾಖಲಿಸಿದ್ದರು. ಪೊಲೀಸ್‌ ಉಪಾಧೀಕ್ಷಕ ವಿಟuಲ್‌ದಾಸ್‌ ಪೈ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

ಡ್ರಗ್ಸ್‌ ಪ್ರಕರಣ: ಜಾಮೀನು
ಮಂಗಳೂರು: ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಉದ್ಯಮಿಗೆ ಜೀವಬೆದರಿಕೆ: ಆರೋಪಿಗೆ ನ್ಯಾ. ಬಂಧನ
ಮಂಗಳೂರು: ಬಂದರಿನ ಪಟಾಕಿ ವ್ಯಾಪಾರಿಯೋರ್ವರಿಗೆ ಬೆದರಿಕೆ ಹಾಕಿದ್ದ ಆರೋಪಿ ದಿನೇಶ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತ 5 ಲ.ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈತ ಈ ಹಿಂದೆ ಭೂಗತ ಪಾತಕಿ ರವಿ ಪೂಜಾರಿಯ ಸಹಚರನಾಗಿದ್ದ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

police siren

88.22 ಕೋ.ರೂ. ನಷ್ಟ: ಬ್ಯಾಂಕ್‌ ಮುಖ್ಯಸ್ಥರಿಂದ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ