ಕೊನೆಗೂ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣ


Team Udayavani, May 31, 2017, 3:38 PM IST

2805PBE3-truck-terminal.jpg

ಸುರತ್ಕಲ್‌: ದೇವರಾಜು ಅರಸು ಟ್ರಕ್‌ ಟರ್ಮಿನಲ್ಸ್‌ ನಿಗಮವು ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರಿನಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಿಸಲು ಪ್ರಕ್ರಿಯೆ ಆರಂಭಿಸಿದೆ.

ಈಗಾಗಲೇ ನಿಗಮದ ಅಧಿಕಾರಿಗಳು ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಜಗದೀಶ್‌ ಅವರೊಂದಿಗೆ ಈ ಕುರಿತು ಚರ್ಚಿಸಿದ್ದಾರೆ. 

ಬೈಕಂಪಾಡಿ ಎಪಿಎಂಸಿ ಮುಂಭಾಗ 30 ಎಕರೆ ಖಾಸಗಿ ಭೂಮಿಯಿದ್ದು, ಅದರ ಮಾಲಕರೊಂದಿಗೆ ಜಂಟಿಯಾಗಿ ಟ್ರಕ್‌ ಟರ್ಮಿನಲ್‌ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ನಿಗಮವು ಸಮಗ್ರ  ಯೋಜನಾ ವರದಿ (ಡಿಪಿಆರ್‌) ರೂಪಿಸಿ ಸಾಧಕ ಬಾಧಕಗಳನ್ನು ಪಟ್ಟಿ ಮಾಡಲಿದೆ. ಅದಾದ ಬಳಿಕ ಟ್ರಕ್‌ ಟರ್ಮಿನಲ್‌ ನಿರ್ಮಾಣ ಪ್ರಕ್ರಿಯೆ ಆರಂಭವಾಗಲಿದೆ. ಇದಲ್ಲದೆ ವಿಶೇಷ ಆರ್ಥಿಕ ವಲಯದಲ್ಲಿ ಸುಸಜ್ಜಿತ ಗೋದಾಮು ಗಳು, ಸರಕು ಸಂಗ್ರಹಣೆಗೆ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸುವ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ.

ಮಂಗಳೂರು ನಗರ ಕೈಗಾರಿಕ, ವಾಣಿಜ್ಯ ತಾಣವಾಗಿ ಬೆಳೆಯುತ್ತಿದೆ. ಈ ಹೊತ್ತಿನಲ್ಲಿ ಟ್ರಕ್‌ ಟರ್ಮಿನಲ್‌ ಅಗತ್ಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೊದಲ ಬಜೆಟಿನಲ್ಲಿಯೇ ಇಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಿಸುವುದಾಗಿ ಘೋಷಿಸಿದ್ದರು.

ಅದಕ್ಕಾಗಿ ನೂರು ಎಕರೆ ಸೂಕ್ತ ಜಾಗವನ್ನು ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಆದರೆ ಇದುವರೆಗೆ ಜಿಲ್ಲಾಡಳಿತ ಅನೇಕ ಸಭೆಗಳನ್ನು ನಡೆಸಿದ್ದರೂ, ನಿರ್ಧಾರ ಅಂತಿಮಗೊಂಡಿರಲಿಲ್ಲ. 

ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ ನಲ್ಲಿಯೂ ಟ್ರಕ್‌ ಟರ್ಮಿನಲ್‌ ನಿರ್ಮಿಸಿದರೆ ಹೇಗೆ ಎನ್ನುವ ವಿಚಾರವೂ ಚರ್ಚೆಗೆ ಬಂದಿತ್ತು. ಆದರೆ ಆ ಜಾಗವನ್ನು ಉಪಯೋಗಿಸುವುದರ ವಿರುದ್ಧ ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ನ್ಯಾಯಾಲಯಕ್ಕೆ ಹೋಗುವುದಾಗಿ ಎಚ್ಚರಿಸಿದ್ದರು.

ಈಗ ಬೆಂಗಳೂರು-ಮಂಗಳೂರು ಮಧ್ಯೆ ನೇರ ಸುರಂಗ ಮಾರ್ಗ ನಿರ್ಮಿಸುವ ಪ್ರಸ್ತಾಪ ಕೇಂದ್ರ ಸರಕಾರದಲ್ಲಿದ್ದು, ಅದು ಜಾರಿಗೆ ಬಂದರೆ ಮಂಗಳೂರಿಗೆ ಬರುವ ಟ್ರಕ್‌ಗಳ ಸಂಖ್ಯೆ ಇನ್ನೂ ಹೆಚ್ಚಲಿದೆ. ಈಗಾಗಲೇ ಸರಾಸರಿ ಐದು ಸಾವಿರಕ್ಕೂ ಮಿಕ್ಕಿ ಟ್ರಕ್‌ಗಳು ಇಲ್ಲಿನ ಬಂದರಿಗೆ ಹೋಗಿ ಬರುತ್ತಿವೆ.  

ಈಗ ಈ ಟ್ರಕ್‌ಗಳಿಗೆ ವಿಶ್ರಾಂತಿಗೆ ಸೂಕ್ತ ಜಾಗವಿಲ್ಲದ ಪರಿಣಾಮ ಬೆ„ಕಂಪಾಡಿ, ಕುಳಾಯಿಯಿಂದ ಕೂಳೂರು ತನಕ ಟ್ರಕ್‌ಗಳ ಸಾಲಾಗಿ ನಿಲ್ಲಿಸಲಾಗುತ್ತಿದೆ. ಬೈಕಂಪಾಡಿಯ ಬಳಿ ಯಾವಾಗಲೂ ಟ್ರಕ್‌ಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಟ್ರಾಫಿಕ್‌ ಜಾಮ್‌ ಆದದ್ದಿದೆ. ಎಪಿಎಂಸಿ ಹೊರಗೆ ಟ್ರಕ್‌ಗಳು ದಿನವಿಡೀ ನಿಂತು ಸಮಸ್ಯೆಯಾಗಿದೆ. 

ಒಂದೆಡೆ ರೋ ರೋ -ಇನ್ನೊಂದೆಡೆ ಬಂದರು !
ಒಂದೆಡೆ ಬಂದರಿಗೆ ನೂರಾರು ಲಾರಿಗಳು,ಇನ್ನೊಂದೆಡೆ ವಿಶೇಷ ಆರ್ಥಿಕ ವಲಯಕ್ಕೆ  ಸರಕು ಸಾಗಿಸಲು ನಿತ್ಯ 250 ಕ್ಕೂ ಮಿಕ್ಕಿ ಲಾರಿಗಳು, ಇನ್ನು ಕೊಂಕಣ ರೈಲ್ವೆಯ ರೋರೋ ಸೇವೆಯಡಿ ಬರುವ ಲಾರಿಗಳು-ಇಷ್ಟೆಲ್ಲ ಲಾರಿಗಳಿಗೆ ನಿಲ್ಲಲು ಸ್ಥಳವೇ ಇಲ್ಲದಂತಾಗಿದೆ. 

ಟ್ರಕ್‌ ಟರ್ಮಿನಲ್‌ನಿಂದ ಅನುಕೂಲ
ಮಂಗಳೂರು ಬಂದರು ಪ್ರದೇಶವಾಗಿರುವುದರಿಂದ ನಿತ್ಯವೂ ರಾಜ್ಯ ಮತ್ತು ಹೊರ ರಾಜ್ಯದ ಸಾವಿರಾರು ಲಾರಿಗಳು ಬರುತ್ತವೆ. ಸರಕು ಸಮೇತ ಹೋಗುವುದರಿಂದ ಲೋಡು ಮಾಡಲು ದಿನಗಟ್ಟಲೆ ಕಾಯಬೇಕಾದುದು ಸಾಮಾನ್ಯ. ರೋರೋ ಲಾರಿಗಳ ನಿಲುಗಡೆಗೂ ಸರಿಯಾದ ಸ್ಥಳವಿಲ್ಲ. ಹೀಗಾಗಿ ಟ್ರಕ್‌ಗಳನ್ನು ರಸ್ತೆ ಬದಿ ನಿಲ್ಲಿಸಿದರೆ ಟ್ರಾಫಿಕ್‌ ಪೊಲೀಸರು ದಂಡ ವಿಧಿಸುತ್ತಾರೆ. ಟ್ರಕ್‌ ಟರ್ಮಿನಲ್‌ ನಿರ್ಮಾಣವಾದರೆ ಎಲ್ಲರಿಗೂ ಅನುಕೂಲ.
– ವಸಂತ್‌ ಹೊಸಬೆಟ್ಟು,  ಗೌರವ ಸಲಹೆಗಾರರು , ಕರ್ನಾಟಕ ಕರಾವಳಿ ಲಾರಿ ಮಾಲಕರ  ಸಂಘ ಮಂಗಳೂರು

ಬೈಕಂಪಾಡಿಯಲ್ಲಿ ನಿರ್ಮಾಣ ಪ್ರಯತ್ನ
ದೇವರಾಜ ಅರಸು ಟರ್ಮಿನಲ್ಸ್‌ ವತಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣ ಕುರಿತು ಪ್ರಯತ್ನ ಸಾಗಿದೆ. ಬೈಕಂಪಾಡಿ ಬಳಿ 30 ಎಕರೆ ಖಾಸಗಿ ಜಾಗವಿದ್ದು  ಅದರ ಮಾಲಕರು ಆಸಕ್ತಿ ತೋರಿದ್ದಾರೆ. ಈ ಬಗ್ಗೆ ಡಿಪಿಆರ್‌ ತಯಾರಿಸಿ ಅಂತಿಮ ನಿರ್ಧಾರವನ್ನು  ನಿಗಮ ಕೈಗೊಳ್ಳಲಿದೆ. ಈ ಕುರಿತು ಮೂರು ಬಾರಿ ಅಧಿಕಾರಿಗಳು ಆಗಮಿಸಿ ಚರ್ಚಿಸಿದ್ದಾರೆ. 
– ಡಾ| ಜಗದೀಶ್‌, 
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.