ಗಮನ ಸೆಳೆದ ವೈವಿಧ್ಯ ತಿಂಡಿ, ತಿನಸು


Team Udayavani, Aug 13, 2018, 11:42 AM IST

13-agust-4.jpg

ಮಹಾನಗರ: ಆಟಿ ತಿಂಗಳು ಅಂದಾಕ್ಷಣ ಕರಾವಳಿಗರಿಗೆ ತಿಮರೆ ಚಟ್ನಿ, ಪತ್ರೊಡೆ, ಕನಿಲೆ, ಮೆಂತೆ ಗಂಜಿ, ಹಲಸಿನ ಹಣ್ಣು ಗಾರಿಗೆ ಹೀಗೆ ಬಗೆ ಬಗೆಯ ಪದಾರ್ಥಗಳು ನೆನಪಿಗೆ ಬಂದು ಬಾಯಿಯಲ್ಲಿ ನೀರೂರುತ್ತದೆ. ಹೀಗಿರುವಾಗ, ಆಟಿ ಮಾಸದಲ್ಲಿ ಸಂಪ್ರದಾಯಿಕವಾಗಿ ಮಾಡುವ ಈ ರೀತಿಯ ತಿಂಡಿ- ತಿನಿಸುಗಳನ್ನು ಸವಿಯುವ ಮೆನು ರೆಡಿಯಿದ್ದರೆ ಎಷ್ಟೊಂದು ಚೆಂದ ಎಂದು ನಗರವಾಸಿಗಳು ನೆನಪಿಸಿಕೊಳ್ಳುತ್ತಾರೆ. 

ಇಂತಹ ಆಟಿ ಮಾಸದ ತಿಂಡಿ- ತಿನಸು ಉಣ್ಣುವ ‘ಆಟಿ ಕೂಟದ ಭೋಜನ’ದ ವ್ಯವಸ್ಥೆ ರವಿವಾರ ಪಿಲಿಕುಳ ಉದ್ಯಾನವನದ ಗುತ್ತು ಮನೆಯಲ್ಲಿ ಮಾಡಲಾಗಿತ್ತು. ವಿಜಯಾ ಬ್ಯಾಂಕ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲ್ಕೂರ ಪ್ರತಿಷ್ಠಾನ ಹಾಗೂ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಆಧುನಿಕತೆಯ ಭರಾಟೆಯಲ್ಲಿ ಮರೆಯಾಗಿದ್ದ ತುಳುನಾಡಿನ ಈ ತಿಂಡಿ, ತಿನಸುಗಳನ್ನು ಪರಿಚಯಿಸುವ ಕೆಲಸವನ್ನು ಇಲ್ಲಿ ಮಾಡಲಾಗಿತ್ತು. ಈ ತಿಂಡಿ ತಿನಸುಗಳನ್ನು ಸವಿದು ನಗರವಾಸಿಗಳು ಸಂತಸಪಟ್ಟರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಸೆಲ್ಫಿ, ಫೋಟೋ ತೆಗೆದು ಸಂಭ್ರಮಿಸಿದರು. ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದವರಿಂದ ಆಟಿಯ ವಿವಿಧ ಬಗೆಯ ವಿಶೇಷ ತಿನಸುಗಳ ಪ್ರದರ್ಶನ ಹಾಗೂ ಹಂಚಿಕೆಯೂ ನಡೆಯಿತು. ಕಾರ್ಯಕ್ರಮದಲ್ಲಿ ಮಧ್ಯಾಹ್ನ ಎಲ್ಲರಿಗೂ ತುಳುನಾಡಿನ ತಿಂಡಿ- ತಿನಸು, ಊಟಗಳ ವಿತರಣೆ ನಡೆಯಿತು.

ಉದ್ಘಾಟನೆ
ಕಾರ್ಯಕ್ರಮವನ್ನು ಜಾನಪದ ವಿದ್ವಾಂಸ ಚಿನ್ನಪ್ಪ ಗೌಡ ಉದ್ಘಾಟಿಸಿದರು. ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌, ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ, ಮಂಗಳೂರು ಮೇಯರ್‌ ಭಾಸ್ಕರ್‌ ಕೆ., ನಗರ ಡಿಸಿಪಿ ಹನುಮಂತರಾಯ, ವಿಜಯಾ ಬ್ಯಾಂಕ್‌ನ ಡಿಜಿಎಂ ಶ್ರೀಧರ್‌, ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ವಿಜ್ಞಾನ ಕೇಂದ್ರದ ಡಾ| ಕೆ.ವಿ. ರಾವ್‌ ಮೊದಲಾದವರು ಸಹಿತ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಆಹಾರ ವೈವಿಧ್ಯ
ಮಧ್ಯಾಹ್ನ ಭೋಜನದಲ್ಲಿ ಉಪ್ಪಿನಕಾಯಿ, ತಿಮರೆ ಚಟ್ನಿ, ನೀರು ಮಾವಿನ ಕಾಯಿ ಚಟ್ನಿ, ಮುಳ್ಳು ಸೌತೆ ಪಚ್ಚೊಡಿ, ಉಪ್ಪಡ್‌ ಪಚ್ಚಿರ್‌, ಕಡ್ಲೆ ಪಲ್ಯ, ಸೊಜಂಕ್‌, ಹಲಸಿನ ಬೀಜ ಉಪ್ಪುಕರಿ, ಕನಿಲೆ, ಹೆಸರು ಗಸಿ, ಮೆಂತೆ ಗಂಜಿ, ಪತ್ರೊಡೆ, ಹಲಸಿನ ಎಲೆ ಕೊಟ್ಟಿಗೆ, ಹರಿವೆ ದಂಟು, ಸೇವು ದಂಟು, ಹೀರೆ ಮತ್ತು ಪಡುವಲಕಾಯಿ ಸಾಂಬಾರ್‌, ಸೌತೆ ಕಾಯಿ ಹುಳಿ, ಕುಚಲಕ್ಕಿ, ಬೆಳ್ತಿಗೆ ಅನ್ನ, ಹುರುಳಿ ಸಾರು, ಜೀಗುಚ್ಚೆ- ಸಿಮ್ಲಾ ಮೆಣಸು ಪೋಡಿ, ಅಂಬಡೆ, ಕಂಚಲ ಮೆಣಸು ಕಾಯಿ, ಸೇವು ತಟ್ಲ ಮತ್ತು ಸೌತೆ ಸಾಂಬಾರ್‌, ಹಲಸಿನ ಹಣ್ಣು ಗಾರಿಗೆ, ಸಾರ್ನಡ್ಡೆ ಪಾಯಸ, ಮಜ್ಜಿಗೆ ಇತ್ತು. 

ಯಕ್ಷಗಾನದ ಮೆರಗು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ತೆಂಕು ತಿಟ್ಟಿನ ಪ್ರಸಿದ್ಧ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಅವರ ಸಾರಥ್ಯದಲ್ಲಿ ಯಕ್ಷಮಂಜೂಷ ಅವರಿಂದ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ, ಮೈಮ್‌ ರಾಮ್‌ದಾಸ್‌ ನೇತೃತ್ವದ ಜಾನಪದೀಯ ಸಂಗೀತ ಕಾರ್ಯಕ್ರಮ ಪಿಲಿಕುಳ ಗುತ್ತಿನ ಮನೆಯ ಎದುರು ನಿರ್ಮಿಸಿದ ವೇದಿಕೆಯಲ್ಲಿ ಜರಗಿತು.

ಮಕ್ಕಳಿಗೆ ಮಾಹಿತಿ ನೀಡಬೇಕು
ಇಂತಹ ಕಾರ್ಯಕ್ರಮಕ್ಕೆ ಮೊದಲ ಬಾರಿ ಬರುತ್ತಿದ್ದೇನೆ. ಇಲ್ಲಿ ಇರುವ ಕೆಲವು ವಸ್ತುಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಇನ್ನೂ ಇಂದಿನ ಮಕ್ಕಳಿಗೆ ತಿಳಿದಿರಲೂ ಸಾಧ್ಯವಿಲ್ಲ. ಮುಂದಿನ ಬಾರಿ ಬರುವಾಗ ಮಕ್ಕಳನ್ನು ಕರೆತಂದು ಅವರಿಗೆ ಇದರ ಬಗ್ಗೆ ಮಾಹಿತಿ ನೀಡಬೇಕು.
– ಗಾಯತ್ರಿ, ಮಂಗಳೂರು

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.