ಗ್ರಾಮೀಣರ ಬದುಕಿಗೆ ಆಸರೆಯಾದ ಹಾಲು ಉತ್ಪಾದಕರ ಸಂಘ

ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ

Team Udayavani, Feb 15, 2020, 5:46 AM IST

1402MULKI1A

105 ಸದಸ್ಯ ಬಲದೊಂದಿಗೆ ಬಾಡಿಗೆ ಕಟ್ಟಡದಲ್ಲಿ ಆರಂಭವಾದ ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ಪ್ರಸಕ್ತವಾಗಿ 2 ಕೋ.ರೂ. ಗೂ ಅಧಿಕ ವ್ಯವಹಾರ ಮಾಡುತ್ತಿದೆ.1995-96 ರಿಂದ ಇಲ್ಲಿಯವರೆಗೆ ಉತ್ತಮ ಸಂಘ ಎಂಬ ಪ್ರಶಸ್ತಿಯನ್ನು ಪಡೆಯುತ್ತ ಬಂದಿದೆ.

ಮೂಲ್ಕಿ: ಅತಿಕಾರಿಬೆಟ್ಟು, ಕವತ್ತಾರು ಮತ್ತು ಪುತ್ತೂರು ಗ್ರಾಮಗಳ ವ್ಯಾಪ್ತಿಯಲ್ಲಿ ತಿಂಗೋಳೆ ರಾಗು ಶೆಟ್ಟಿ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ಮೂಲ್ಕಿ ಹೋಬಳಿಯ ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘವು 1987ರಲ್ಲಿ ಆರಂಭವಾಯಿತು.

ಸುಮಾರು 105 ಸದಸ್ಯರ ಬಲದೊಂದಿಗೆ 1,540 ರೂ. ಪಾಲು ಬಂಡವಾಳದ ಮೂಲಕ ಬಾಡಿಗೆ ಕಟ್ಟಡದಲ್ಲಿ ಸಂಘವು ಆರಂಭವಾಯಿತು. ಎರಡು ಉಪಕೇಂದ್ರಗಳ ಮೂಲಕ 100 ಲೀ. ಹಾಲು ಸಂಗ್ರಹಿಸಲಾಗುತ್ತಿತ್ತು. ಆರಂಭದ ವರ್ಷದಲ್ಲಿ ಸುಮಾರು 86 ರೂ. ಲಾಭವನ್ನು ಪಡೆದಿದ್ದ ಸಂಘವು ಪ್ರಸಕ್ತವಾಗಿ 2 ಕೋ.ರೂ. ಗೂ ಅಧಿಕ ವ್ಯವಹಾರ ಮಾಡುತ್ತಿದೆ. ಸರ್ವ ರೀತಿಯ ಸೌಕರ್ಯ ಸಹಿತ ಸ್ವಂತ ಕಟ್ಟಡವನ್ನು ಸಂಘವು ಹೊಂದಿದೆ.

ಸದಸ್ಯರಿಗೆ ಕೊಡುಗೆ
ಸಂಘದ ವತಿಯಿಂದ ದ.ಕ. ಒಕ್ಕೂಟದ ನೆರವಿನೊಂದಿಗೆ ಜಾನು ವಾರು ಮೇಳದಲ್ಲಿ ಸುಮಾರು 100 ಜಾನುವಾರುಗಳು ಭಾಗವಹಿಸಿದ್ದವು. ಸದಸ್ಯ ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನವಿತರಣೆ, ಸದಸ್ಯರಿಗೆ ಜನಶ್ರೀ ವಿಮೆ ಹಾಗೂ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯ, ಜಾನುವಾರುಗಳಿಗೆ ಕಾಲು ಬಾಯಿ ರೋಗಕ್ಕೆ ಔಷಧ, ಪ್ರೋತ್ಸಾಹ ಧನ ಸಂಘದಿಂದ ಒದಗಿಸಲಾಗುತ್ತಿದೆ.

ಪ್ರಭಾಕರ ಶೆಟ್ಟಿ, ರತ್ನಾಕರ ಶೆಟ್ಟಿ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಈ ಸಂಘವು ವೇಗವಾಗಿ ಬೆಳೆವಣಿಗೆ ಪಡೆಯಿತು. ಗಂಗಾಧರ ಶೆಟ್ಟಿಯವರು ಅಧ್ಯಕ್ಷರಾದ ಅನಂತರ 2 ಕೋ. ರೂ. ರೂ. ವ್ಯವಹಾರ ಮಾಡುತ್ತಿದ್ದು ಸುಮಾರು 6 ಲಕ್ಷ ರೂ. ಲಾಭಾಂಶದ ಗಡಿ ತಲುಪಿದೆ.

ಸ್ವಂತ ಕಟ್ಟಡ
ರತ್ನಾಕರ ಶೆಟ್ಟಿಯವರು ಅಧ್ಯಕ್ಷರಾಗಿದ್ದಾಗ 4 ಲಕ್ಷ ರೂ. ವೆಚ್ಚದ ಸಂಘದ ಸ್ವಂತ ಕಟ್ಟಡ, ಕಪಿಲೆ, ಅಂದಿನ ಶಾಸಕರಾಗಿದ್ದ ಕೆ. ಅಭಯಚಂದ್ರ ಜೈನ್‌ ಅವರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಉದ್ಘಾಟಿಸಿದರು.

ಪ್ರಥಮ ಉತ್ತಮ ಸಂಘ
1995-96ರ ಅವಧಿಗೆ ತಾಲೂಕುವಾರು ಸಾಧನೆಯಲ್ಲಿ ಪ್ರಥಮ ಉತ್ತಮ ಸಂಘವಾಗಿದೆ. 1996-97ರಲ್ಲಿ ತಾಲೂಕು ವಾರು ದ್ವಿತೀಯ ಉತ್ತಮ ಸಂಘ, 1997-98 ದ್ವಿತೀಯ ಉತ್ತಮ ಸ ಹಕಾರಿ ಸಂಘ, 1998-99 ದ್ವಿತೀಯ ತಾಲೂಕು ಮಟ್ಟದ ಸಾಧಕಸಂಘ, 2007ರಲ್ಲಿ ದ್ವಿತೀಯ ಉತ್ತಮ ಸಂಘ, 2011-12ರಲ್ಲಿ ದ್ವಿತೀಯ ಉತ್ತಮ ಸಹಕಾರಿ ಸಂಘ, 2013-14ರಲ್ಲಿ ದ್ವಿತೀಯ ಉತ್ತಮ ಸಹಕಾರಿ ಸಂಘ, 2017-2018 ರಲ್ಲಿ ದ್ವಿತೀಯಾ ಉತ್ತಮ ಸಹಕಾರಿ ಸಂಘ ಹಾಗೂ 2018-2019ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಸಹಕಾರಿ ಸಂಘದ ಪ್ರಶಸ್ತಿಯನ್ನು ಪಡೆದಿದೆ.

ಸರ್ವರ ಸಹಕಾರದಿಂದ 10 ವರ್ಷಗಳಿಂದ ಸಂಘದ ಅಭಿವೃದ್ಧಿಗೆ ಅಧ್ಯಕ್ಷನಾಗಿ ಪಾರದರ್ಶಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಸದಸ್ಯರಿಗೆ ಸರಕಾರದಿಂದ ಹಾಗೂ ಒಕ್ಕೂಟದಿಂದ ಸಿಗುವ ಸೌಲಭ್ಯವನ್ನು ದೊರಕಿಸಿ ಕೊಡುವ ಮೂಲಕ ಸಂಘದ ಸವಲತ್ತುಗಳನ್ನು ಪೂರೈಸಿ ಎಲ್ಲ ವಿಧದ ಸಹಕಾರ ತತ್ವದ ಯೋಜನೆಗಳನ್ನು ಬಳಸಿಕೊಂಡು ಸಂಸ್ಥೆಯೂ ಮುನ್ನಡೆಯುತ್ತಿದೆ..
– ಬರ್ಕೆ ವಿ. ಗಂಗಾಧರ ಶೆಟ್ಟಿ, ಅಧ್ಯಕ್ಷರು, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ,

-ಎಂ. ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.