ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ; ಕೂದಲೆಳೆ ಅಂತರದಿಂದ ಪಾರಾದ ಯುವಕ!
Team Udayavani, Jun 6, 2022, 9:43 AM IST
ಸುಳ್ಯ: ವಾಹನದಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವೊಂದು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಜೂ.5ರ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರದಲ್ಲಿ ನಡೆದಿದೆ.
ದಾಳಿಯಿಂದ ಯುವಕ ಕೂದಲೆಳೆ ಪಾರಾಗಿದ್ದು, ಕಾರಿಗೆ ಹಾನಿ ಸಂಭವಿಸಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್ ಹತ್ತಿರ ಈ ಘಟನೆ ನಡೆದಿದೆ.
ಸುಳ್ಯ ಜಯನಗರದ ಮಹಮ್ಮದ್ ಸಾಹಿ (39 ವ) ಎಂಬವರ ಮೇಲೆ ಸ್ಕಾರ್ಪಿಯೋದಲ್ಲಿ ಬಂದ ಅಪರಿಚಿತರು ದಾಳಿ ಮಾಡಿದ್ದಾರೆ.
ಮಹಮ್ಮದ್ ಸಾಹಿ ಬಂಟ್ವಾಳದಲ್ಲಿ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ಸು ಸುಳ್ಯಕ್ಕೆ ಬಂದು ರಾತ್ರಿ ಸಮಯ 10:30 ರ ಸಮಾರಿಗೆ ರಸ್ತೆಯ ಬದಿಯಲ್ಲಿ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಯ ಬಳಿಗೆ ಹೋಗಿದ್ದರು. ವಾಪಸ್ಸು ತನ್ನ ಮನೆಗೆ ಹೋಗುವ ಸಲುವಾಗಿ ತನ್ನ ಕಾರಿನ ಬಳಿಗೆ ಬಂದು ಡೋರ್ ತೆರೆಯಲು ಸಿದ್ದತೆ ಮಾಡುತ್ತಿರುವಾಗ ಜ್ಯೋತಿ ಸರ್ಕಲ್ ಕಡೆಯಿಂದ ಬಂದ ಸ್ಕಾರ್ಪಿಯೋ ಕಾರಿನಲ್ಲಿದ್ದ ನಾಲ್ಕು ಮಂದಿ ಅಪರಿಚಿತರು ಇವರ ಕಡೆಗೆ ಗುಂಡು ಹಾರಿಸಿದ್ದು, ಈ ವೇಳೆ ಕಾರಿನ ಬಲ ಬದಿಯ ಎರಡು ಡೋರ್ ಗಳ ಮಧ್ಯಕ್ಕೆ ಗುಂಡು ತಾಗಿದೆ.
ಘಟನೆಯಲ್ಲಿ ಮಹಮ್ಮದ್ ಸಾಹಿ ಅವರ ಬೆನ್ನಿನ ಭಾಗಕ್ಕೆ ಗಾಯವಾಗಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ನೂಪುರ್ ಶರ್ಮಾ ಅಮಾನತು: ಬಿಜೆಪಿ ನಡೆಯನ್ನು ಸ್ವಾಗತಿಸಿದ ಸೌದಿ ಅರೇಬಿಯಾ
ಸುಳ್ಯ ವೃತ್ತ ನಿರೀಕ್ಷಿತ ನವೀನ್ ಚಂದ್ರ ಜೋಗಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!