ಇರಿದು ಯುವಕನ ಕೊಲೆಯತ್ನ: ಆರೋಪಿ ಪರಾರಿ
Team Udayavani, Jul 27, 2019, 11:09 AM IST
ಮಂಗಳೂರು: ನಗರದ ಮಾಲೆಮಾರ್ ನೆಕ್ಕಿಲಗುಡ್ಡೆ ಎಂಬಲ್ಲಿ ಯುವಕ ನೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ 9.30ರ ಸುಮಾರಿಗೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಕೋಡಿಕಲ್ ನಿವಾಸಿ ಧೀರಜ್ (25) ಆರೋಪಿ. ಇರಿತದಿಂದ ಗಾಯಗೊಂಡಿರುವ ಮಂಗಳಾದೇವಿಯ ರತನ್ ರಾಜ್ (28) ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ವಿವರ
ಮಂಗಳಾದೇವಿ ನಿವಾಸಿಗಳಾದ ರತನ್ ರಾಜ್ ಮತ್ತು ಪುನೀತ್ ಗೆಳೆಯರು. ರತನ್ ರಾಜ್ಗೆ ಧೀರಜ್ ಎಂಬಾತನ ಮೇಲೆ ಹಳೆ ವೈಷಮ್ಯವಿದ್ದು, ಈ ಬಗ್ಗೆ ಗೆಳೆಯ ಪುನೀತ್ನಲ್ಲಿ ಹೇಳಿಕೊಂಡಿದ್ದ. ಇದಕ್ಕೆ ಪುನೀತ್ “ನಿಮ್ಮಿಬ್ಬರನ್ನು ನಾವು ರಾಜಿ ಸಂಧಾನ ಮಾಡುತ್ತೇನೆ’ ಎಂದು ಭರವಸೆ ನೀಡಿದ್ದ.
ಬೈಕಿನಲ್ಲಿ ಅಡಗಿಸಿಟ್ಟಿದ್ದ
ಅದರಂತೆ, ಗುರುವಾರ ರಾತ್ರಿ ರತನ್ ರಾಜ್ ಮತ್ತು ಧೀರಜ್ನನ್ನು ಪುನೀತ್ ಮಾಲೆಮಾರ್ಯ ನೆಕ್ಕಿಲಗುಡ್ಡೆ ಬಳಿ ಬರಲು ಹೇಳಿದ್ದ. ಈ ಸಂದರ್ಭ ರತನ್ ರಾಜ್ ಮತ್ತು ಧೀರಜ್ ಮಧ್ಯೆ ಮಾತಿನ ಚಕಮಕಿ ನಡೆದು, ವಿಕೋಪಕ್ಕೆ ಹೋಗಿ ಧೀರಜ್ ತನ್ನ ಬೈಕಿನಲ್ಲಿ ಅಡಗಿಸಿಟ್ಟಿದ್ದ ಚೂರಿಯಿಂದ ರತನ್ಗೆ ಮರಣಾಂತಿಕ ಹಲ್ಲೆ ಮಾಡಿ ಬಳಿಕ ಪರಾರಿಯಾದ ಎಂದು ಪೊಲೀಸರು ತಿಳಿಸಿರೆ. ಸಂಧಾನಕ್ಕೆ ಕರೆದಿದ್ದ ಪುನೀತ್ಗೆ ಈ ಘಟನೆ ಆಘಾತ ಉಂಟು ಮಾಡಿದೆ. ಧೀರಜ್ ಚೂರಿ ತಂದಿರುವುದು ಪುನೀತ್ಗೆ ಗೊತ್ತಿರಲಿಲ್ಲ ಎಂದು ತಿಳಿದು ಬಂದಿದೆ.
ಗಾಯಾಳು ರತನ್ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಾವೂರು ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿ¨ದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು