ಸಿದ್ದಕಟ್ಟೆ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ ಯತ್ನ
Team Udayavani, Feb 18, 2022, 2:05 PM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ಸಂಭವಿಸಿದ್ದು, ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕಳ್ಳರು ಸಂಘದ ಬಾಗಿಲ ಶಟರ್ ಮುರಿದ ಬಗ್ಗೆ ಬೆಳಗ್ಗೆ ಸಂಘದ ಸಮೀಪದ ಅಂಗಡಿಯವರ ಗಮನಕ್ಕೆ ಬಂದಿದ್ದು, ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಮಾಹಿತಿ ನೀಡಿದ್ದರು. ಘಟನೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಪಿಕ್ಕಾಸು ಬಳಸಿ ಸಂಘದ ಶಟರ್ ಬಗ್ಗಿಸಿ, ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಪಾಟು, ಕ್ಯಾಶ್ ಕೌಂಟರ್ಡ್ರಾಯರನ್ನು ಜಾಲಾಡಿದ್ದಾರೆ. ಆದರೆ ಸೇಫ್ ಲಾಕರ್ ತೆರೆಯಲಾಗದೇ, ಯಾವುದೇ ಚಿನ್ನ, ಹಣ, ಬೆಲೆ ಬಾಳುವ ವಸ್ತು ದೊರಕದೇ ವಾಪಾಸು ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್ಐ.ಹರೀಶ್, ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್ಐ.ಸಂಜೀವ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ