ಕೈದಿಗಳಿಗೆ ಗಾಂಜಾ ಪೂರೈಕೆ ಯತ್ನ: ಕಠಿನ ಶಿಕ್ಷೆ
Team Udayavani, Dec 30, 2019, 11:24 PM IST
ಮಂಗಳೂರು: ಮೂರು ವರ್ಷಗಳ ಹಿಂದೆ ನಗರದ ಸಬ್ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳನ್ನು ಭೇಟಿ ಮಾಡುವ ನೆಪದಲ್ಲಿ ಅವರಿಗೆ ಗಾಂಜಾ ಪೂರೈಸಲು ಯತ್ನಿಸಿದ್ದ ಕಸ್ಬಾ ಬೆಂಗ್ರೆಯ ಅಶ³ಕ್ (24) ಎಂಬಾ ತನಿಗೆ ಮಂಗಳೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯವು 6 ತಿಂಗಳ ಕಠಿನ ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಿದೆ.
ಅಶ³ಕ್ 2016ರ ಎಪ್ರಿಲ್ 4ರಂದು ಬೆಳಗ್ಗೆ 10 ಗಂಟೆಗೆ ಜೈಲಿನಲ್ಲಿದ್ದ ನಹೀಂ ಮತ್ತು ಚಪ್ಪೆ ತಣ್ಣಿ ರಹೀಂ ಅವರನ್ನು ಭೇಟಿಯಾಗಲು ಬಂದಿದ್ದ. ಈ ಸಂದರ್ಭ ಜೈಲಿನ ಹೊರಗಿದ್ದ ಬರ್ಕೆ ಠಾಣೆಯ ಎಎಸ್ಐ ಅಮ್ಮಣ್ಣಿ ಮತ್ತು ಸಿಬಂದಿ ತಪಾಸಣೆ ನಡೆಸಿ ದಾಗ ಅಶ#ಕ್ನಲ್ಲಿ 50 ಗ್ರಾಂ ತೂಕದ ಗಾಂಜಾ ಪತ್ತೆಯಾಗಿತ್ತು ಎಂದು ಆರೋಪಿಸಲಾಗಿತ್ತು. ಆಗಿನ ಬರ್ಕೆ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಎ.ಕೆ. ರಾಜೇಶ್ ಅವರು ತನಿಖೆ ಪೂರ್ಣ ಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 3ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅಶ್ವಿನಿ ಕೋರೆ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಡಿ. 26ರಂದು ತೀರ್ಪು ನೀಡಿದರು.
ಸರಕಾರದ ಪರವಾ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ. ಮೋಹನ್ ಕುಮಾರ್ ವಾದಿ ಸಿದ್ದು, 8 ಸಾಕ್ಷಿದಾರರ ಪೈಕಿ ಐವ ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಶಿಕ್ಷೆಯ ವಿವರ
ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 8 ಸಿ ಅನ್ವಯ 6 ತಿಂಗಳು ಕಠಿನ ಶಿಕ್ಷೆ ಮತ್ತು 10,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 1 ತಿಂಗಳ ಸಾದಾ ಶಿಕ್ಷೆ ಮತ್ತು ಐಪಿಸಿ 424 (ನಿಷೇಧಿತ ವಸ್ತು ಸಾಗಾಟ) ಅನ್ವಯ 6 ತಿಂಗಳ ಕಠಿನ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 1 ತಿಂಗಳ ಸಾದಾ ಸಜೆಯನ್ನು ಅನುಭವಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್