ಪೂಜಾರಿ ವಿರುದ್ಧ ಆಡಿಯೋ ವೈರಲ್
Team Udayavani, Dec 4, 2018, 11:25 AM IST
ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೆಂಬಲಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರನ್ನು ವ್ಯಕ್ತಿಯೊಬ್ಬರು ನಿಂದಿಸಿ ಕೊಲೆ ಮಾಡುವಂತೆ ಪ್ರಚೋದಿಸುವ ಆಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುದ್ರೋಳಿ ದೇವಸ್ಥಾನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೂಜಾರಿ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದಾದರೆ ಆಗಲಿ ಎಂದಷ್ಟೇ ಸುದ್ದಿಗಾರರ ಜತೆ ಹೇಳಿದ್ದರು. ಆದರೆ ವಾಸ್ತವದಲ್ಲಿ ಪೂಜಾರಿ ಅವರ ಹೇಳಿಕೆಯ ಒಳಾರ್ಥ ಹಾಗೂ ಆಶಯವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪೂಜಾರಿ ಅವರ ಹೇಳಿಕೆಗೆ ವ್ಯಕ್ತಿಯೊಬ್ಬ ತಾನು ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ಪದಾಧಿಕಾರಿ ಎಂದು ಹೇಳಿಕೊಂಡು,ಸಾಮಾಜಿಕ ಜಾಲ-ತಾಣಗಳಲ್ಲಿ ಪೂಜಾರಿ ವಿರುದ್ಧ ಮಾತನಾಡಿರುವ ಆಡಿಯೋವನ್ನು ಹರಿಯ ಬಿಟ್ಟಿದ್ದಾನೆ. ಸುಮಾರು 2.45 ನಿಮಿಷದ ಈ ಆಡಿಯೋದಲ್ಲಿ ಆ ಅನಾಮಧೇಯ ವ್ಯಕ್ತಿ ಜನಾರ್ದನ ಪೂಜಾರಿ ಅವರನ್ನು ಹೀನಾಯವಾಗಿ ನಿಂದಿಸಿದ್ದು, ಜತೆಗೆ ಎನ್ಕೌಂಟರ್ ಮಾಡಬೇಕು ಎಂದು ಹೇಳಿ ಕೊಲೆಗೆ ದುಷ್ಪ್ರೇರಣೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ